ಆ್ಯಪ್ನಗರ

ಹೆಚ್ಚುವರಿ ಶುಲ್ಕ ವಸೂಲಿ: ಆಕ್ರೋಶ

ನಗರದ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ವಿದ್ಯಾರ್ಥಿಗಳಿಂದ ಸುಮಾರು 2 ಸಾವಿರ ರೂಪಾಯಿಗಿಂತ ಹೆಚ್ಚು ಮೊತ್ತ ವಸೂಲಿ ಮಾಡಲಾಗುತ್ತಿರುವುದು ವಿದ್ಯಾರ್ಥಿಗಳ ಆಕ್ರೋಶಕ್ಕೆ ಗುರಿಯಾಗಿದೆ.

Vijaya Karnataka 23 Jun 2018, 5:00 am
ಕೊಪ್ಪಳ : ನಗರದ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ವಿದ್ಯಾರ್ಥಿಗಳಿಂದ ಸುಮಾರು 2 ಸಾವಿರ ರೂಪಾಯಿಗಿಂತ ಹೆಚ್ಚು ಮೊತ್ತ ವಸೂಲಿ ಮಾಡಲಾಗುತ್ತಿರುವುದು ವಿದ್ಯಾರ್ಥಿಗಳ ಆಕ್ರೋಶಕ್ಕೆ ಗುರಿಯಾಗಿದೆ.
Vijaya Karnataka Web extra fees outrage
ಹೆಚ್ಚುವರಿ ಶುಲ್ಕ ವಸೂಲಿ: ಆಕ್ರೋಶ


ಬಳ್ಳಾರಿಯ ವಿಜಯ ನಗರ ಶ್ರೀ ಕೃಷ್ಣ ದೇವರಾಯ ವಿವಿ ವ್ಯಾಪ್ತಿಗೆ ಇಲ್ಲಿನ ಸರಕಾರಿ ಪ್ರಥಮ ದರ್ಜೆ ಕಾಲೇಜು ಒಳಪಡುತ್ತಿದೆ. ಆದರೆ ಕಾಲೇಜಿನಲ್ಲಿ ಒಬ್ಬೊಬ್ಬ ವಿದ್ಯಾರ್ಥಿಯಿಂದ ಹೆಚ್ಚಿನ ಮೊತ್ತ ವಸೂಲಿ ಮಾಡಲಾಗುತ್ತಿದೆ. ಸಾಮಾನ್ಯ, ಹಿಂದುಳಿದ ವರ್ಗ, ಪರಿಶಿಷ್ಟ ಜಾತಿ ಹಾಗೂ ಪಂಗಡ ಹಾಗೂ ಪರಿಶಿಷ್ಟ ಜಾತಿ , ಪಂಗಡ ಹೊರತುಪಡಿಸಿ ವಿದ್ಯಾರ್ಥಿನಿಯರಿಗೆ ಪ್ರತ್ಯೇಕ ಶುಲ್ಕ ವಿಧಿಸಲಾಗುತ್ತಿದೆ. ಬಿಎ, ಬಿಎಸ್ಸಿ ಹಾಗೂ ಬಿಕಾಂ ಮೊದಲ,ಎರಡನೇ ಹಾಗೂ ಮೂರನೇ ವರ್ಷದ ವಿದ್ಯಾರ್ಥಿಗಳಿಗೆ ಪ್ರತ್ಯೇಕ ಶುಲ್ಕ ವಿಧಿಸುತ್ತಿರುವುದು ಅಸಮಾಧಾನಕ್ಕೆ ಕಾರಣವಾಗಿದೆ.

ನಗರ ಸೇರಿದಂತೆ ಸುತ್ತಲಿನ ಗ್ರಾಮದ ವಿದ್ಯಾರ್ಥಿಗಳು ಇಲ್ಲಿನ ಕಾಲೇಜಿಗೆ ಅಧ್ಯಯನಕ್ಕಾಗಿ ಆಗಮಿಸುತ್ತಾರೆ. ಬಹುತೇಕರು ಬಡ ವಿದ್ಯಾರ್ಥಿಗಳಾಗಿದ್ದು, ಖಾಸಗಿ ಕಾಲೇಜಿನಲ್ಲಿ ಶುಲ್ಕ ಭರಿಸಲಾಗದೇ ಇಲ್ಲಿ ಪ್ರವೇಶ ಪಡೆಯುತ್ತಿದ್ದಾರೆ. ಆದರೆ ಇಂತಹ ವಿದ್ಯಾರ್ಥಿಗಳಿಂದಲೇ ಹೆಚ್ಚಿನ ಮೊತ್ತ ವಸೂಲಿ ಮಾಡುತ್ತಿರುವುದು ಪಾಲಕರ ಆಕ್ರೋಶಕ್ಕೆ ಗುರಿಯಾಗಿದೆ. ಈ ಕುರಿತು ಎಸ್‌ಎಫ್‌ ಸಂಘಟನೆಯ ಪದಾಧಿಕಾರಿಗಳು ಕಾಲೇಜಿನ ಮುಖ್ಯಸ್ಥರೊಂದಿಗೆ ಮಾತುಕತೆ ನಡೆಸಿದ್ದಾರೆ. ಹೊಸ ಸುತ್ತೋಲೆ ಪ್ರಕಾರ ಕಡಿಮೆ ಶುಲ್ಕ ತೆಗೆದುಕೊಳ್ಳಬೇಕು. ಆದರೆ ಹೆಚ್ಚಿಗೆ ತೆಗೆದುಕೊಳ್ಳುತ್ತಿರುವುದರ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಾಲೇಜಿನ ವ್ಯವಸ್ಥಾಪಕರು ತಮ್ಮ ತಪ್ಪಿನ ಅರಿವಾದ ಮೇಲೆ ಕಡಿಮೆ ಶುಲ್ಕ ಪಡೆಯಲು ಮುಂದಾಗಿದ್ದಾರೆ. ಈಗಾಗಲೇ ಹಿಂದುಳಿದ ವರ್ಗದ ಒಬ್ಬೊಬ್ಬ ವಿದ್ಯಾರ್ಥಿಗೆ 2,760 ರೂ. ಹಾಗೂ ಸಾಮಾನ್ಯ ವಿದ್ಯಾರ್ಥಿಗೆ 100 ರೂ.ಯಂತೆ ಹೆಚ್ಚುವರಿಯಾಗಿ ಪಡೆಯಲಾಗಿದೆ. ಹೆಚ್ಚುವರಿ ಪಡೆದಿರುವ ಹಣ ವಾಪಸ್‌ ಮಾಡಲಾಗುವುದು ಹಾಗೂ ಮುಂದೆ ಶುಲ್ಕ ನೀಡುವ ವಿದ್ಯಾರ್ಥಿಗಳಿಂದ ಕಡಿಮೆ ತೆಗೆದುಕೊಳ್ಳಲಾಗುವುದು ಎಂದು ಭರವಸೆ ನೀಡಿದ್ದಾರೆ.

..............

ರಜೆಯ ಮೇಲೆ ತೆರಳಿದ್ದರಿಂದ ಶುಲ್ಕ ಹೆಚ್ಚುವರಿ ತೆಗೆದುಕೊಂಡಿರುವುದು ಗಮನಕ್ಕೆ ಬಂದಿಲ್ಲ. ಒಂದು ವೇಳೆ ಶುಲ್ಕ ಹೆಚ್ಚಿಗೆ ಪಡೆದಿದ್ದರೆ ವಿದ್ಯಾರ್ಥಿಗಳಿಗೆ ವಾಪಸ್‌ ವಿತರಿಸಲಾಗುವುದು.

- ಡಾ.ಚನ್ನಬಸಪ್ಪ ಚಿಲ್ಕರಾಗಿ, ಪ್ರಾಚಾರ್ಯ, ಸರಕಾರಿ ಪದವಿ ಪ್ರಥಮ ದರ್ಜೆ ಕಾಲೇಜು, ಕೊಪ್ಪಳ

...........

ಕಾಲೇಜಿನಲ್ಲಿ ಹೆಚ್ಚುವರಿ ಶುಲ್ಕ ತೆಗೆದುಕೊಳ್ಳಲಾಗುತ್ತಿದೆ. ಒಬ್ಬ ವಿದ್ಯಾರ್ಥಿಗೆ 2,760 ರೂ.ಯಂತೆ ಪಡೆಯುತ್ತಿದ್ದ ಹಿನ್ನೆಲೆಯಲ್ಲಿ ಆಕ್ಷೇಪ ವ್ಯಕ್ತಪಡಿಸಿದೆ. ಕಡಿಮೆ ಶುಲ್ಕ ತೆಗೆದುಕೊಳ್ಳುವುದಾಗಿ ಭರವಸೆ ನೀಡಿದ್ದಾರೆ. ಏಕರೂಪ ಶುಲ್ಕ ಪದ್ಧತಿ ಜಾರಿಗೊಳಿಸಿದರೆ ಸಮಸ್ಯೆ ಆಗುವುದಿಲ್ಲ.

- ಅಮರೇಶ ಕಡಗದ್‌, ಜಿಲ್ಲಾಧ್ಯಕ್ಷ, ಎಸ್‌ಎಫ್‌ಐ, ಕೊಪ್ಪಳ

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ