ಆ್ಯಪ್ನಗರ

ಸಾಲ ಬಾಧೆಯಿಂದ ರೈತ ಆತ್ಮಹತ್ಯೆ

ಸಮೀಪದ ಮೋರನಹಳ್ಳಿ ಗ್ರಾಮದಲ್ಲಿ ಸಾಲಬಾಧೆ ತಾಳದ ರೈತ ಭರಮಪ್ಪ ಅಣಬಿ (40), ಹೊಲದಲ್ಲಿ ಮಂಗಳವಾರ ರಾತ್ರಿ, ವಿದ್ಯುತ್ ಪ್ರವಹಿಸುವ ತಂತಿಯನ್ನು ಕೈಯಲ್ಲಿ ಹಿಡಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ವಿಕ ಸುದ್ದಿಲೋಕ 13 Jul 2017, 7:59 am
ಅಳವಂಡಿ (ಕೊಪ್ಪಳ): ಸಮೀಪದ ಮೋರನಹಳ್ಳಿ ಗ್ರಾಮದಲ್ಲಿ ಸಾಲಬಾಧೆ ತಾಳದ ರೈತ ಭರಮಪ್ಪ ಅಣಬಿ (40), ಹೊಲದಲ್ಲಿ ಮಂಗಳವಾರ ರಾತ್ರಿ, ವಿದ್ಯುತ್ ಪ್ರವಹಿಸುವ ತಂತಿಯನ್ನು ಕೈಯಲ್ಲಿ ಹಿಡಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
Vijaya Karnataka Web farmer suicide by debt burden
ಸಾಲ ಬಾಧೆಯಿಂದ ರೈತ ಆತ್ಮಹತ್ಯೆ


ಈ ರೈತ 1.01 ಎಕರೆ ಜಮೀನು ಹೊಂದಿದ್ದಾರೆ. ಕೃಷಿ ಚಟುವಟಿಕೆಗೆ ಬ್ಯಾಂಕಿನಲ್ಲಿ 1 ಲಕ್ಷ ರೂ. ಹಾಗೂ ಖಾಸಗಿಯಾಗಿ 3 ಲಕ್ಷ ರೂ. ಸಾಲ ಮಾಡಿದ್ದಾರೆ. ಕೆಲವು ದಿನಗಳ ಹಿಂದೆಯಷ್ಟೆ ಅವರ ಸೋದರ ಬಸವರಾಜ, ಒಂದಷ್ಟು ಸಾಲವನ್ನು ತೀರಿಸಿದ್ದರು. ಆದರೂ ಸಾಲ ಸಂಪೂರ್ಣ ತೀರಿಸಲಾಗದ ಚಿಂತೆ ಅವರನ್ನು ಕಾಡುತ್ತಿತ್ತು. ಅವರಿಗೆ ಪತ್ನಿ, ನಾಲ್ವರು ಮಕ್ಕಳಿದ್ದಾರೆ. ಸ್ಥಳೀಯ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ