ಆ್ಯಪ್ನಗರ

ಗಣೇಶ ವಿಸರ್ಜನೆ: ಸಂಸದರ ಕರಡಿ ಸಂಗಣ್ಣ ಕುಣಿತ

ನಗರದ ನಾನಾ ಕಡೆಗಳಲ್ಲಿ ಪ್ರತಿಷ್ಠಾಪಿಸಿದ್ದ ಗಣೇಶ ಮೂರ್ತಿಗಳನ್ನು ಅದ್ಧೂರಿ ಮೆರವಣಿಗೆ ಮೂಲಕ ವಿಸರ್ಜಿಸಲಾಗಿದ್ದು, ಸಂಸದ ಸಂಗಣ್ಣ ಕರಡಿ ಅವರು ಯುವಕರೊಂದಿಗೆ ಹೆಜ್ಜೆ ಹಾಕಿ ಗಮನ ಸೆಳೆದರು.

Vijaya Karnataka 23 Sep 2018, 5:00 am
ಕೊಪ್ಪಳ ; ನಗರದ ನಾನಾ ಕಡೆಗಳಲ್ಲಿ ಪ್ರತಿಷ್ಠಾಪಿಸಿದ್ದ ಗಣೇಶ ಮೂರ್ತಿಗಳನ್ನು ಅದ್ಧೂರಿ ಮೆರವಣಿಗೆ ಮೂಲಕ ವಿಸರ್ಜಿಸಲಾಗಿದ್ದು, ಸಂಸದ ಸಂಗಣ್ಣ ಕರಡಿ ಅವರು ಯುವಕರೊಂದಿಗೆ ಹೆಜ್ಜೆ ಹಾಕಿ ಗಮನ ಸೆಳೆದರು.
Vijaya Karnataka Web KPL-KPL22PHOTO07


ನಗರದ ಕೋಟೆ ಏರಿಯಾ, ಗಡಿಯಾರ ಕಂಬ, ವಾರ್‌ಕಾರ್‌ಗಲ್ಲಿ, ಅಂಬೇಡ್ಕರ್‌ ವೃತ್ತ ಸೇರಿದಂತೆ ನಾನಾ ಕಡೆಗಳಲ್ಲಿ ಗಜಾನನ ಯುವಕ ಮಂಡಳಿಯವರು ಗಣೇಶ ಮೂರ್ತಿ ಪ್ರತಿಷ್ಠಾಪಿಸಿದ್ದರು. 9 ದಿನದವರೆಗೆ ವಿಶೇಷ ಪೂಜೆ, ಧಾರ್ಮಿಕ ವಿಧಿವಿಧಾನ ಪೂರೈಸಿದ ಸಂಘಟಕರು, ಶುಕ್ರವಾರ ರಾತ್ರಿ ಗಣೇಶ ವಿಗ್ರಹ ಮೆರವಣಿಗೆಯಲ್ಲಿ ಕರೆದೊಯ್ದರು. ಮೆರವಣಿಗೆ ಉದ್ದಕ್ಕೂ ಡಿಜೆ ಹಾಕಿ ಹಾಡಿಗೆ ತಕ್ಕಂತೆ ಕುಣಿದು ಕುಪ್ಪಳಿಸಿದರು.

ಪಟಾಕಿ ಸಿಡಿಸಿ ಸಂಭ್ರಮಿಸಿದರು. ಗಣೇಶ ಮೆರವಣಿಗೆ ವೇಳೆಯಲ್ಲಿ ಯುವಕರು ಮೋದಿ, ಮೋದಿ ಎಂದು ಘೋಷಣೆ ಕೂಗುತ್ತಿರುವುದು ಕಂಡುಬಂದಿತು. ಬೆಳಗ್ಗೆ ಸಂಸದ ಸಂಗಣ್ಣ ಕರಡಿ ಅವರು ಗಣೇಶ ಮೆರವಣಿಗೆಯಲ್ಲಿ ಭಾಗವಹಿಸಿ ಹಾಡೊಂದಕ್ಕೆ ಹೆಜ್ಜೆ ಹಾಕಿದರು. ಇದರಿಂದ ಪ್ರೇರಿತರಾದ ಯುವಕರು ಕೇಕೆ ಹಾಕಿ ಸಂಸದರೊಂದಿಗೆ ತಾವು ಹೆಜ್ಜೆ ಹಾಕಿ ಸಂಭ್ರಮಿಸಿದರು. ಶುಕ್ರವಾರ ರಾತ್ರಿಯೇ ಮೆರವಣಿಗೆ ಹೊರಟು ಶನಿವಾರ ಬೆಳಗ್ಗೆ ಶಾಂತಿಯುತವಾಗಿ ವಿಸರ್ಜಿಸಲಾಯಿತು. ಗಣೇಶ ಮೆರವಣಿಗೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಬಿಗಿ ಪೊಲೀಸ್‌ ಬಂದೋಬಸ್ತ್‌ ಕೈಗೊಳ್ಳಲಾಗಿತ್ತು. ಎಸ್ಪಿ ರೇಣುಕಾ ಸುಕುಮಾರ್‌, ಪ್ರಭಾರಿ ಅಪರ ಜಿಲ್ಲಾಧಿಕಾರಿ ಸಿ.ಡಿ.ಗೀತಾ ಅವರು ರಾತ್ರಿಯಿಂದಲೇ ಗಣೇಶ ವಿಸರ್ಜನೆ ವೇಳೆ ಗಲಾಟೆಯಾಗದಂತೆ ಎಚ್ಚರಿಕೆ ವಹಿಸಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ