ಆ್ಯಪ್ನಗರ

ಹೈ-ಕ ವಿಮೋಚನಾ ದಿನಾಚರಣೆ: ಪೂರ್ವಭಾವಿ ಸಭೆ

ಹೈ-ಕರ್ನಾಟಕ ವಿಮೋಚನಾ ದಿನವನ್ನ್ನು ಸಡಗರ ಸಂಭ್ರಮ ಹಾಗೂ ಅರ್ಥಪೂರ್ಣವಾಗಿ ಆಚರಿಸಲಾಗುವುದು ಎಂದು ಪ್ರಭಾರಿ ಅಪರ ಜಿಲ್ಲಾಧಿಕಾರಿ ಸಿ.ಡಿ.ಗೀತಾ ಹೇಳಿದರು.

Vijaya Karnataka 8 Sep 2018, 5:00 am
ಕೊಪ್ಪಳ : ಹೈ-ಕರ್ನಾಟಕ ವಿಮೋಚನಾ ದಿನವನ್ನ್ನು ಸಡಗರ ಸಂಭ್ರಮ ಹಾಗೂ ಅರ್ಥಪೂರ್ಣವಾಗಿ ಆಚರಿಸಲಾಗುವುದು ಎಂದು ಪ್ರಭಾರಿ ಅಪರ ಜಿಲ್ಲಾಧಿಕಾರಿ ಸಿ.ಡಿ.ಗೀತಾ ಹೇಳಿದರು.
Vijaya Karnataka Web KPL-KPL07MGB03


ನಗರದ ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಹೈ-ಕರ್ನಾಟಕ ವಿಮೋಚನಾ ದಿನಾಚರಣೆ ಆಚರಿಸುವ ಕುರಿತು ಆಯೋಜಿಸಿದ್ದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಶುಕ್ರವಾರ ಮಾತನಾಡಿದರು.

ದೇಶಕ್ಕೆ 1947 ರ ಆ.15 ರಂದು ಸ್ವಾತಂತ್ರ್ಯ ದೊರೆಯಿತು. ಆದರೆ ಹೈದರಾಬಾದ್‌ ನಿಜಾಮರ ಆಡಳಿತಕ್ಕೆ ಒಳಪಟ್ಟ ಪ್ರದೇಶಕ್ಕೆ 1948 ರ ಸೆ. 17 ರಂದು ಅಂದರೆ ಒಂದು ವರ್ಷ ತಡವಾಗಿ ಹೈ-ಕರ್ನಾಟಕ ವ್ಯಾಪ್ತಿ ಪ್ರದೇಶಗಳಿಗೆ ಸ್ವಾತಂತ್ರ್ಯ ದೊರೆಯಿತು. ಇದರ ಸವಿ ನೆನಪಿಗಾಗಿ ಹೈ-ಕರ್ನಾಟಕ ಪ್ರದೇಶಗಳಲ್ಲಿ ವಿಮೋಚನಾ ದಿನವನ್ನಾಗಿ ಆಚರಿಸಲಾಗುತ್ತಿದೆ. ಇದು ಸ್ವಾತಂತ್ರ್ಯ ದಿನಾಚರಣೆ ಸಂಭ್ರಮದಷ್ಟೇ ಅರ್ಥಪೂರ್ಣವಾಗಿ ಆಚರಿಸಲಾಗುವುದು.ಸೆ.17 ರಂದು ಬೆಳಗ್ಗೆ 9 ಗಂಟೆಗೆ ಜಿಲ್ಲಾ ಉಸ್ತುವಾರಿ ಸಚಿವ ಆರ್‌.ಶಂಕರ ಅವರು ಜಿಲ್ಲಾ ಕ್ರೀಡಾಂಗಣದಲ್ಲಿ ಧ್ವಜಾರೋಹಣ ನೆರವೇರಿಸುವರು. ಶಾಲಾ ಮಕ್ಕಳು, ಎನ್‌ಸಿಸಿ, ಪೊಲೀಸ್‌ ಇಲಾಖೆ, ಸ್ಕೌಟ್ಸ್‌ ಮತ್ತು ಗೈಡ್ಸ್‌ ಮಕ್ಕಳಿಂದ ಆಕರ್ಷಕ ಪಥಸಂಚಲನ, ನಾನಾ ಶಾಲಾ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿವೆ. ಹೈ-ಕರ್ನಾಟಕ ವಿಮೋಚನೆಗಾಗಿ ಹೋರಾಡಿದ ಸ್ವಾತಂತ್ರ್ಯ ಹೋರಾಟಗಾರರನ್ನು ಸನ್ಮಾನಿಸಲಾಗುವುದು. ನಗರದ ಸಾರ್ವಜನಿಕ ಕಟ್ಟಡಗಳು, ವಾಣಿಜ್ಯ ಮಳಿಗೆ ಹಾಗೂ ಪ್ರಮುಖ ವೃತ್ತಗಳಿಗೆ ವಿಶೇಷ ದೀಪಾಲಂಕಾರ ಮಾಡಲು ಕ್ರಮ ಕೈಗೊಳ್ಳಲಾಗುವುದು. ಅಧಿಕಾರಿಗಳು, ಸಿಬ್ಬಂದಿ ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಯಶಸ್ವಿಗೊಳಿಸಬೇಕು ಎಂದರು.

ಜಿಲ್ಲಾ ಸಂಖ್ಯಾ ಸಂಗ್ರಹಣಾಧಿಕಾರಿ ಕೃಷ್ಣಮೂರ್ತಿ ದೇಸಾಯಿ, ಕಸಾಪ ಅಧ್ಯಕ್ಷ ರಾಜಶೇಖರ ಅಂಗಡಿ, ಡಿವೈಎಸ್ಪಿ ಬಿ.ಸಂದೀಗವಾಡ, ಮುಖಂಡರಾದ ಈಶಪ್ಪ ಬಡಿಗೇರ, ಮಂಜುನಾಥ ಗೊಂಡಬಾಳ, ಶಿವಾನಂದ ಹೊದ್ಲೂರ ಸೇರಿ ನಾನಾ ಇಲಾಖೆಗಳ ಅಧಿಕಾರಿಗಳು ಭಾಗವಹಿಸಿದ್ದÜರು.


ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ