'ಚೀನಾ ವಸ್ತುಗಳ ಬಹಿಷ್ಕಾರ, ಯುದ್ಧಕ್ಕಿಂತ ದೊಡ್ಡ ಹೊಡೆತ': ಜಗದೀಶ್ ಶೆಟ್ಟರ್
ಚೀನಾದ ಆಕ್ರಮಣಕಾರಿ ನೀತಿಯಿಂದ ದೇಶದ ಜನರಲ್ಲಿ ಜಾಗೃತಿ ಬಂದಿದೆ. ಪ್ರಧಾನಿ ಮೋದಿ ದೇಶದ ಹಿತದೃಷ್ಟಿಯಿಂದ ಸರಿಯಾದ ನಿರ್ಧಾರ ತೆಗೆದುಕೊಳ್ಳುತ್ತಾರೆ ಎಂದು ಸಚಿವ ಜಗದೀಶ್ ಶೆಟ್ಟರ್ ಹೇಳಿದ್ದಾರೆ.
Vijaya Karnataka Web 18 Jun 2020, 3:23 pm
ಕೊಪ್ಪಳ: ಚೀನಾ ವಸ್ತುಗಳನ್ನು ಬಹಿಷ್ಕರಿಸಿದರೆ ಯುದ್ಧಕ್ಕಿಂತ ದೊಡ್ಡ ಹೊಡೆತ ನೀಡಿದಂತಾಗುತ್ತದೆ. ನೆರೆ ರಾಷ್ಟ್ರದ ಆಕ್ರಮಣಕಾರಿ ನೀತಿಯಿಂದ ದೇಶದ ಜನರಲ್ಲಿ ಜಾಗೃತಿ ಬಂದಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್ ಹೇಳಿದ್ದಾರೆ.
ತಾಲೂಕಿನ ಬಸಾಪುರ ಗ್ರಾಮದ ಬಳಿಯ ಸಣ್ಣ ಕೈಗಾರಿಕಾ ವಸಾಹತು ಉದ್ಘಾಟಿಸಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದೇಶದ ಹಿತದೃಷ್ಟಿಯಿಂದ ಪ್ರಧಾನಿ ನರೇಂದ್ರ ಮೋದಿಯವರು ಸರಿಯಾದ ನಿರ್ಧಾರ ಕೈಗೊಳ್ಳುತ್ತಾರೆ. ಯೋಧರ ಬಲಿದಾನವನ್ನು ವ್ಯರ್ಥವಾಗಲು ಬಿಡುವುದಿಲ್ಲ ಎಂದು ಹೇಳಿದ್ದಾರೆ. ಅದನ್ನು ಕಾರ್ಯರೂಪಕ್ಕೆ ಇಳಿಸುತ್ತಾರೆ ಎಂದರು.
ದೇಶದಲ್ಲಿ ಸದ್ಯ ಕೊರೊನಾದಿಂದ ಆರ್ಥಿಕ ಪರಿಸ್ಥಿತಿ ಉತ್ತಮವಾಗಿಲ್ಲ. ಎಲ್ಲವನ್ನು ನೋಡಿಕೊಂಡು ಸರಿಯಾದ ಸಮಯಕ್ಕೆ ಸರಿಯಾದ ನಿರ್ಧಾರವನ್ನು ಪ್ರಧಾನಿ ನರೇಂದ್ರ ಮೋದಿ ತೆಗೆದುಕೊಳ್ಳುತ್ತಾರೆ ಎಂದು ಹೇಳಿದರು.
ಕೊಪ್ಪಳ: ಚೀನಾದ ಧ್ವಜ ದಹಿಸಿ ಆಕ್ರೋಶ ವ್ಯಕ್ತಪಡಿಸಿದ ಪ್ರತಿಭಟನಕಾರರು!
ಇನ್ನು, ಎಚ್.ವಿಶ್ವನಾಥ್ಗೆ ಪರಿಷತ್ ಚುನಾವಣೆ ಟಿಕೆಟ್ ಕೈ ತಪ್ಪಿದ್ದರ ಬಗ್ಗೆ ಮಾತನಾಡಿದ ಅವರು, ಸ್ಥಾನ ತ್ಯಾಗ ಮಾಡಿ ಪಕ್ಷ ಬೆಂಬಲಿಸಿದವರಿಗೆ ಅನ್ಯಾಯ ಮಾಡುವುದಿಲ್ಲ. ಟಿಕೆಟ್ ಹಂಚಿಕೆ ಮಾಡುವುದು ಹೈಕಮಾಂಡ್ ನಿರ್ಧಾರವಾಗಿದೆ. ಅದನ್ನು ನಾವು ಸ್ವಾಗತಿಸಬೇಕು ಎಂದು ತಿಳಿಸಿರು.
ವಿಧಾನ ಪರಿಷತ್ ಚುನಾವಣೆ ಅಭ್ಯರ್ಥಿಗಳ ಪಟ್ಟಿ ಕೇಂದ್ರಕ್ಕೆ ರವಾನೆ: ಗೋವಿಂದ ಕಾರಜೋಳ
ಬಿಜೆಪಿ ಅಧಿಕಾರಕ್ಕೆ ಬರಲು ಪಕ್ಷ ತ್ಯಾಗ ಮಾಡಿದವರಿಗೆ ಗೌರವಿಸುತ್ತೇವೆ. ಮುಂದಿನ ದಿನಗಳಲ್ಲಿ ಎಚ್.ವಿಶ್ವನಾಥ ಅವರಿಗೆ ಬೇರೆ ಅವಕಾಶ ಮಾಡಿ ಕೊಡಲಾಗುವುದು. ಕೋರ್ ಕಮಿಟಿಯಲ್ಲಿ ನಿರ್ಧಾರವಾಗಿರುವ ವಿಷಯವನ್ನು ಬಹಿರಂಗವಾಗಿ ಚರ್ಚಿಸುವುದು ಸರಿಯಲ್ಲ. ಪಕ್ಷದ ತೀರ್ಮಾನಕ್ಕೆ ಬದ್ಧವಾಗಿರಬೇಕು ಎಂದು ಹೇಳಿದರು.
'ಬಿಜೆಪಿ ಮತ್ತು ಬಿಎಸ್ವೈ ನಂಬಿಕೆಗೆ ದ್ರೋಹ ಬಗೆಯಲ್ಲ': ಬಿ.ಸಿ.ಪಾಟೀಲ್ ವಿಶ್ವಾಸ
ತಾಲೂಕಿನ ಬಸಾಪುರ ಗ್ರಾಮದ ಬಳಿಯ ಸಣ್ಣ ಕೈಗಾರಿಕಾ ವಸಾಹತು ಉದ್ಘಾಟಿಸಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದೇಶದ ಹಿತದೃಷ್ಟಿಯಿಂದ ಪ್ರಧಾನಿ ನರೇಂದ್ರ ಮೋದಿಯವರು ಸರಿಯಾದ ನಿರ್ಧಾರ ಕೈಗೊಳ್ಳುತ್ತಾರೆ. ಯೋಧರ ಬಲಿದಾನವನ್ನು ವ್ಯರ್ಥವಾಗಲು ಬಿಡುವುದಿಲ್ಲ ಎಂದು ಹೇಳಿದ್ದಾರೆ. ಅದನ್ನು ಕಾರ್ಯರೂಪಕ್ಕೆ ಇಳಿಸುತ್ತಾರೆ ಎಂದರು.
ದೇಶದಲ್ಲಿ ಸದ್ಯ ಕೊರೊನಾದಿಂದ ಆರ್ಥಿಕ ಪರಿಸ್ಥಿತಿ ಉತ್ತಮವಾಗಿಲ್ಲ. ಎಲ್ಲವನ್ನು ನೋಡಿಕೊಂಡು ಸರಿಯಾದ ಸಮಯಕ್ಕೆ ಸರಿಯಾದ ನಿರ್ಧಾರವನ್ನು ಪ್ರಧಾನಿ ನರೇಂದ್ರ ಮೋದಿ ತೆಗೆದುಕೊಳ್ಳುತ್ತಾರೆ ಎಂದು ಹೇಳಿದರು.
ಕೊಪ್ಪಳ: ಚೀನಾದ ಧ್ವಜ ದಹಿಸಿ ಆಕ್ರೋಶ ವ್ಯಕ್ತಪಡಿಸಿದ ಪ್ರತಿಭಟನಕಾರರು!
ಇನ್ನು, ಎಚ್.ವಿಶ್ವನಾಥ್ಗೆ ಪರಿಷತ್ ಚುನಾವಣೆ ಟಿಕೆಟ್ ಕೈ ತಪ್ಪಿದ್ದರ ಬಗ್ಗೆ ಮಾತನಾಡಿದ ಅವರು, ಸ್ಥಾನ ತ್ಯಾಗ ಮಾಡಿ ಪಕ್ಷ ಬೆಂಬಲಿಸಿದವರಿಗೆ ಅನ್ಯಾಯ ಮಾಡುವುದಿಲ್ಲ. ಟಿಕೆಟ್ ಹಂಚಿಕೆ ಮಾಡುವುದು ಹೈಕಮಾಂಡ್ ನಿರ್ಧಾರವಾಗಿದೆ. ಅದನ್ನು ನಾವು ಸ್ವಾಗತಿಸಬೇಕು ಎಂದು ತಿಳಿಸಿರು.
ವಿಧಾನ ಪರಿಷತ್ ಚುನಾವಣೆ ಅಭ್ಯರ್ಥಿಗಳ ಪಟ್ಟಿ ಕೇಂದ್ರಕ್ಕೆ ರವಾನೆ: ಗೋವಿಂದ ಕಾರಜೋಳ
ಬಿಜೆಪಿ ಅಧಿಕಾರಕ್ಕೆ ಬರಲು ಪಕ್ಷ ತ್ಯಾಗ ಮಾಡಿದವರಿಗೆ ಗೌರವಿಸುತ್ತೇವೆ. ಮುಂದಿನ ದಿನಗಳಲ್ಲಿ ಎಚ್.ವಿಶ್ವನಾಥ ಅವರಿಗೆ ಬೇರೆ ಅವಕಾಶ ಮಾಡಿ ಕೊಡಲಾಗುವುದು. ಕೋರ್ ಕಮಿಟಿಯಲ್ಲಿ ನಿರ್ಧಾರವಾಗಿರುವ ವಿಷಯವನ್ನು ಬಹಿರಂಗವಾಗಿ ಚರ್ಚಿಸುವುದು ಸರಿಯಲ್ಲ. ಪಕ್ಷದ ತೀರ್ಮಾನಕ್ಕೆ ಬದ್ಧವಾಗಿರಬೇಕು ಎಂದು ಹೇಳಿದರು.
'ಬಿಜೆಪಿ ಮತ್ತು ಬಿಎಸ್ವೈ ನಂಬಿಕೆಗೆ ದ್ರೋಹ ಬಗೆಯಲ್ಲ': ಬಿ.ಸಿ.ಪಾಟೀಲ್ ವಿಶ್ವಾಸ