ಆ್ಯಪ್ನಗರ

ಕೊಪ್ಪಳ ಜಿಲ್ಲೆಯಲ್ಲಿ ಮತ್ತೆ ಇಬ್ಬರು ಕೊರೊನಾದಿಂದ ಸಾವು..!

ಬುಧವಾರ ಕೊಪ್ಪಳದಲ್ಲಿ ಇಬ್ಬರು ಕೊರೊನಾ ಸೋಂಕಿತರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದು, ಆ ಮೂಲಕ ಕೊಪ್ಪಳ ಜಿಲ್ಲೆಯಲ್ಲಿ ಕೊರೊನಾಗೆ ಬಲಿಯಾದವರ ಸಂಖ್ಯೆ 22ಕ್ಕೆ ಏರಿಕೆಯಾಗಿದೆ. ಮೃತಪಟ್ಟವರ ಪೈಕಿ ಕಳೆದ ಕೆಲದಿನಗಳಿಂದ ಕೊರೊನಾ ಸೋಂಕಿನಿಂದ ಬಳಲುತ್ತಿದ್ದ ಯಲಬುರ್ಗಾ ತಾಲೂಕಿನ ಸೋಂಪುರ ಗ್ರಾಮದ 70 ವರ್ಷದ ವೃದ್ಧರು ಜಿಲ್ಲಾ ಕೊರೊನಾ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ.

Vijaya Karnataka Web 29 Jul 2020, 10:05 am
ಕೊಪ್ಪಳ: ಕೊರೊನಾ ವೈರಸ್‌ ಸೋಂಕು ಇಡೀ ರಾಜ್ಯವನ್ನೇ ಬಾಧಿಸಿದ್ದು, ದಿನೇ ದಿನೇ ಸೋಂಕಿತರ ಸಂಖ್ಯೆ ಹೆಚ್ಚುತ್ತಲೇ ಇದೆ. ಈ ಮಧ್ಯೆ ಕೊರೊನಾದಿಂದ ಸಾವನ್ನಪ್ಪುತ್ತಿರುವವರ ಸಂಖ್ಯೆ ಕೂಡ ಏರಿಕೆಯಾಗುತ್ತಿದೆ.
Vijaya Karnataka Web Corona


ಬಿಎಸ್‌ವೈ ನೇತೃತ್ವದಲ್ಲಿ ಸರ್ಕಾರ ಸಮರ್ಥವಾಗಿ ಮುನ್ನಡೆಯಲಿದೆ: ಬಿಸಿ ಪಾಟೀಲ್ ಭರವಸೆ!

ಬುಧವಾರ ಕೊಪ್ಪಳದಲ್ಲಿ ಇಬ್ಬರು ಕೊರೊನಾ ಸೋಂಕಿತರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದು, ಆ ಮೂಲಕ ಕೊಪ್ಪಳ ಜಿಲ್ಲೆಯಲ್ಲಿ ಕೊರೊನಾಗೆ ಬಲಿಯಾದವರ ಸಂಖ್ಯೆ 22ಕ್ಕೆ ಏರಿಕೆಯಾಗಿದೆ. ಮೃತಪಟ್ಟವರ ಪೈಕಿ ಕಳೆದ ಕೆಲದಿನಗಳಿಂದ ಕೊರೊನಾ ಸೋಂಕಿನಿಂದ ಬಳಲುತ್ತಿದ್ದ ಯಲಬುರ್ಗಾ ತಾಲೂಕಿನ ಸೋಂಪುರ ಗ್ರಾಮದ 70 ವರ್ಷದ ವೃದ್ಧರು ಜಿಲ್ಲಾ ಕೊರೊನಾ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ.

ಕೊಪ್ಪಳ: ಕೊರೊನಾ ಸೋಂಕಿಗೆ ಮತ್ತೆ ಇಬ್ಬರು ಸಾವು, ಮೃತರ ಸಂಖ್ಯೆ 14ಕ್ಕೆ ಏರಿಕೆ

ಮತ್ತೊಬ್ಬರು ಗಂಗಾವತಿಯ 46 ವರ್ಷದ ಮಹಿಳೆ ಕೆಲ ದಿನಗಳಿಂದ ಕೊರೊನಾ ಸೋಂಕಿನಿಂದ ಬಳಲುತ್ತಿದ್ದರು. ಅವರನ್ನು ಜಿಲ್ಲಾ ಕೊರೊನಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ತೀವ್ರ ಉಸಿರಾಟದ ತೊಂದರೆ ಇದ್ದ ಕಾರಣ ಮಹಿಳೆಗೆ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗಿತ್ತು. ಆದರೆ ಇಂದು ಚಿಕಿತ್ಸೆ ಫಲಕಾರಿಯಾಗದೆ ಜಿಲ್ಲಾ ಕೋವಿಡ್ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ.

ಲಂಚ ಸ್ವೀಕರಿಸುತ್ತಿದ್ದ ವೇಳೆ ತಹಸೀಲ್ದಾರ್, ಶಿರಸ್ತೇದಾರ್ ಎಸಿಬಿ ಬಲೆಗೆ

ಸದ್ಯ ಕೊರೊನಾ ನಿಯಮಾವಳಿಗಳ ಪ್ರಕಾರವೇ ಇಬ್ಬರು ಮೃತರ ಅಂತ್ಯಕ್ರಿಯೆ ನಡೆಸಲು ತೀರ್ಮಾನಿಸಲಾಗಿದೆ. ಸೋಂಕಿತರು ಮೃತಪಟ್ಟಿರುವುದಿರಂದ ಅವರ ಸಂಪರ್ಕದಲ್ಲಿದ್ದವರಿಗೆ ಕೊರೊನಾ ಭಯ ಕಾಡಿದ್ದು, ಈ ಹಿನ್ನೆಲೆ ಮೃತರ ಪ್ರಾಥಮಿಕ ಸಂಪರ್ಕದಲ್ಲಿದ್ದವರನ್ನು ಕ್ವಾರೆಂಟೈನ್‌ಗೆ ಒಳಪಡಿಸಲಾಗಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ