ಆ್ಯಪ್ನಗರ

ಉದ್ಯೋಗ ನೀಡಲು ಒತ್ತಾಯ

ತಾಲೂಕಿನ ಚಿಕ್ಕಜಂತಕಲ್‌ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೂಲಿಕಾರ್ಮಿಕರಿಗೆ ಉದ್ಯೋಗ ಖಾತರಿ ಯೋಜನೆಯಡಿ ಕೂಲಿ ನೀಡುವಂತೆ ಒತ್ತಾಯಿಸಿ ಕರ್ನಾಟಕ ಪ್ರಾಂತ ರೈತ ಸಂಘಟನೆಯ ಕಾರ್ಯಕರ್ತರು ಹಾಗೂ ಕೂಲಿಕಾರರು ನಗರದ ತಾಲೂಕು ಪಂಚಾಯಿತಿ ಆವರಣದಲ್ಲಿ ಶುಕ್ರವಾರ ಪ್ರತಿಭಟನೆ ನಡೆಸಿದರು.

Vijaya Karnataka 12 Jan 2019, 5:00 am
ಗಂಗಾವತಿ : ತಾಲೂಕಿನ ಚಿಕ್ಕಜಂತಕಲ್‌ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೂಲಿಕಾರ್ಮಿಕರಿಗೆ ಉದ್ಯೋಗ ಖಾತರಿ ಯೋಜನೆಯಡಿ ಕೂಲಿ ನೀಡುವಂತೆ ಒತ್ತಾಯಿಸಿ ಕರ್ನಾಟಕ ಪ್ರಾಂತ ರೈತ ಸಂಘಟನೆಯ ಕಾರ್ಯಕರ್ತರು ಹಾಗೂ ಕೂಲಿಕಾರರು ನಗರದ ತಾಲೂಕು ಪಂಚಾಯಿತಿ ಆವರಣದಲ್ಲಿ ಶುಕ್ರವಾರ ಪ್ರತಿಭಟನೆ ನಡೆಸಿದರು.
Vijaya Karnataka Web KPL-KPL11CM01


ಸಂಘಟನೆಯ ಕಾರ್ಯದರ್ಶಿ ಶ್ರೀನಿವಾಸ್‌ ಮಾತನಾಡಿ, ನರೇಗಾ ಯೋಜನೆಯಡಿ ಕೂಲಿ ನೀಡಬೇಕೆಂದು ಗ್ರಾ.ಪಂ ಅಧಿಕಾರಿಗಳಿಗೆ ಕಳೆದ ಒಂದು ತಿಂಗಳ ಹಿಂದೆ 6 ಫಾರಂನ್ನು ಭರ್ತಿ ಮಾಡಿ ನೀಡಲಾಗಿದೆ. ಸುಮಾರು 500 ಕ್ಕೂ ಹೆಚ್ಚು ಜನರು ಉದ್ಯೋಗಕ್ಕಾಗಿ ಕಳೆದ ಒಂದು ತಿಂಗಳಿಂದ ಕಾದು ಕುಳಿತಿದ್ದಾರೆ. ಉದ್ಯೋಗ ಖಾತರಿ ಯೋಜನೆಯ ಪ್ರಕಾರ 6 ಫಾರಂನ್ನು ಭರ್ತಿ ಮಾಡಿದ 1 ವಾರದೊಳಗೆ ಕೂಲಿ ಕೆಲಸ ನೀಡಬೇಕು. ಆದರೆ ಗ್ರಾ.ಪಂ. ಅಧಿಕಾರಿಗಳು ಮಾತ್ರ ಸಂಪೂರ್ಣ ನಿರ್ಲಕ್ಷ್ಯ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.

ಆಗ್ರಹ: ಗ್ರಾ.ಪಂ ವ್ಯಾಪ್ತಿಯಲ್ಲಿ ಒಟ್ಟು 1 ಸಾವಿರಕ್ಕೂ ಹೆಚ್ಚು ಜನರು ಕೂಲಿಗಾಗಿ ಅರ್ಜಿ ಸಲ್ಲಿಸಿದ್ದಾರೆ. ಗ್ರಾ.ಪಂ ಸದಸ್ಯರ ಪರವಾಗಿ ಇರುವ ಕೂಲಿಕಾರರಿಗೆ ಈಗಾಗಲೇ ಕೆಲಸ ನೀಡಿದ್ದಾರೆ. ಕಾರ್ಮಿಕ ಸಂಘಟನೆಯಲ್ಲಿ ಗುರುತಿಸಿಕೊಂಡಿರುವ ಈ 500 ಜನ ಕಾರ್ಮಿಕರಿಗೆ ಕೆಲಸ ನೀಡದೆ ಗ್ರಾ.ಪಂ ಅಧಿಕಾರಿಗಳು ತೊಂದರೆ ನೀಡುತ್ತಿದ್ದಾರೆ. ಕಳೆದ ಎಂಟು ತಿಂಗಳ ಹಿಂದೆ ಉದ್ಯೋಗ ಖಾತರಿ ಯೋಜನೆಯಡಿ ಕೆರೆ ಹೂಳು ಎತ್ತಲು ಟ್ರ್ಯಾಕ್ಟರ್‌ಗಳನ್ನು ಬಾಡಿಗೆ ರೂಪದಲ್ಲಿ ಪಡೆದುಕೊಂಡಿದ್ದರು. ಆ ಟ್ರ್ಯಾಕ್ಟರ್‌ಗಳ 10 ಲಕ್ಷ ಕ್ಕೂ ಅಧಿಕ ಬಾಡಿಗೆಯನ್ನು ಪಾವತಿಸಲು ಅಧಿಕಾರಿಗಳು ಮುಂದಾಗುತ್ತಿಲ್ಲ. ಕೂಡಲೇ ಸಂಬಂಧಪಟ್ಟ ಇಲಾಖೆಯ ಮೇಲಧಿಕಾರಿಗಳು ಇತ್ತ ಗಮನಹರಿಸಬೇಕು. ಗ್ರಾಮದ ಜನರಿಗೆ ಉದ್ಯೋಗ ನೀಡಬೇಕು. ಇಲ್ಲದಿದ್ದರೆ ಗುಳೆ ಹೋಗಬೇಕಾದ ಅನಿವಾರ್ಯತೆ ನಿರ್ಮಾಣವಾಗಲಿದೆ ಎಂದರು.

ಸಂಘಟನೆಯ ಅಧ್ಯಕ್ಷ ಶಿವಪ್ಪ, ಕೂಲಿಕಾರರಾದ ನಾಗರಾಜ, ಗೋವಿಂದಪ್ಪ, ಹುಲಿಗೆಮ್ಮ, ದುರುಗಮ್ಮ, ಲಕ್ಷ ್ಮಮ್ಮ, ಗಂಗಮ್ಮ, ಕೆಂಚಪ್ಪ ಹಾಗೂ ಇತರರಿದ್ದರು.


ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ