ಆ್ಯಪ್ನಗರ

ಚಿತ್ರ ಸಾಹಿತಿ ಕಲ್ಯಾಣ್ ಕುಟುಂಬದಲ್ಲಿ ಬಿರುಕು ಮೂಡಿಸಿದ್ದ ಗಂಗಾ ಕುಲಕರ್ಣಿ ಆತ್ಮಹತ್ಯೆ

ಚಿತ್ರಸಾಹಿತಿ ಕೆ.ಕಲ್ಯಾಣ್ ಕುಟುಂಬದಲ್ಲಿ ಬಿರುಕು ಮೂಡಿಸಿದ್ದ ಆರೋಪಿ ಗಂಗಾ ಕುಲಕರ್ಣಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮನೆ ಕೆಲಸ ಮಾಡುವ ನೆಪದಲ್ಲಿ ಕೆ.ಕಲ್ಯಾಣ್ ಪತ್ನಿ ತವರು ಮನೆಯವರ ಆಸ್ತಿ ಲಪಟಾಯಿಸಿದ ಆರೋಪ ಹೊತ್ತಿದ್ದ ಗಂಗಾ ಕುಲಕರ್ಣಿ ನ್ಯಾಯಾಲಯದಲ್ಲಿ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಕುಷ್ಠಗಿಯಲ್ಲಿ ನಡೆದಿದೆ.

Vijaya Karnataka 29 Oct 2020, 2:08 pm
ಕೊಪ್ಪಳ: ಕುಷ್ಟಗಿ ಪಟ್ಟಣದ ನ್ಯಾಯಾಲಯದಲ್ಲಿ ಗೀತ ರಚನೆಕಾರ ಕೆ.ಕಲ್ಯಾಣ್ ಅವರ ಬಾಳಲ್ಲಿ ಬಿರುಕು ಮೂಡಿಸಿದ ಗಂಗಾ ಕುಲಕರ್ಣಿ ವಿಷ ಕುಡಿದು ಸಾವನ್ನಪ್ಪಿದ್ದಾರೆ.
Vijaya Karnataka Web ಗಂಗಾ ಕುಲಕರ್ಣಿ


ಕೆ. ಕಲ್ಯಾಣ ಬದುಕಿನಲ್ಲಿ ಆಟವಾಡಿದ್ದ ಗಂಗಾ ಅಲಿಯಾಸ್ ಜ್ಯೋತಿ ಕುಲಕರ್ಣಿ ಅವರು ಕಲ್ಯಾಣ್ ಅವರ ಪತ್ನಿಗೆ ಮಾಟಮಂತ್ರ ಮಾಡಿ, ಆಸ್ತಿ ಕಬಳಿಸಿದ್ದ ಪ್ರಕರಣದ ಪ್ರಮುಖ ಆರೋಪಿಯಾಗಿದ್ದಾರೆ.
ಕೆ. ಕಲ್ಯಾಣ್‌ ದಾಂಪತ್ಯ ಕಲಹ: ಪೂಜೆ ಹೆಸರಲ್ಲಿ ಕೋಟಿ ಕೋಟಿ ದೋಚಿದ್ದ ಕಪಟ ಮಂತ್ರವಾದಿ!

ಕುಷ್ಟಗಿ ನ್ಯಾಯಲಯಕ್ಕೆ ಹಾಜರಾಗಿದ್ದ ಈಕೆ ವಿಷ ಸೇವಿಸಿ ನ್ಯಾಯಾಲಯ ಪ್ರವೇಶ ಮಾಡಿದ್ದಾಳೆ. ಅಲ್ಲಿಯೇ ಕುಸಿದುಬಿದ್ದು ಸಾವನ್ನಪ್ಪಿದ್ದಾಳೆ.
ಶಿವಾನಂದ ವಾಲಿಯಿಂದ 6 ಕೋಟಿ ಮೌಲ್ಯದ ಆಸ್ತಿ ವಶಕ್ಕೆ- ಸಾಹಿತಿ ಕೆ. ಕಲ್ಯಾಣ್‌ ಪತ್ನಿ ಅಪಹರಣ ಪ್ರಕರಣ

ಕುಷ್ಟಗಿ ತಾಲೂಕಿನ ಕ್ಯಾದಿಗುಂಪಾ ಗ್ರಾಮದಲ್ಲಿ ತೋಟಗಾರಿಕೆ ವಿವಿಯಲ್ಲಿ ಉದ್ಯೋಗ ಕೊಡಿಸುವುದಾಗಿ ಲಕ್ಷಾಂತರ ರೂ. ಹಣ ಪಡೆದಿದ್ದಳು. ಆದರೆ ಕೆಲ ದಿನ ಕಳೆದರೂ ಉದ್ಯೋಗ ಸಿಗದ ವೇಳೆ ಹಣ ಕೊಟ್ಟವರು 2016ರಲ್ಲಿ ಕುಷ್ಟಗಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಈ ಹಿನ್ನೆಲೆಯಲ್ಲಿ ಕುಷ್ಟಗಿ ನ್ಯಾಯಾಲಯಕ್ಕೆ ವಿಚಾರಣೆಗೆ ಆಗಮಿಸಿದ್ದಳು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ