ಹಲ್ಲಿ ಬಿದ್ದ ಬಿಸಿಯೂಟ ಸೇವಿಸಿ 50ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥ
ಕೊಪ್ಪಳ ಜಿಲ್ಲೆಯ ಬೇವೂರು ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಹಲ್ಲಿ ಬಿದ್ದ ಬಿಸಿಯೂಟ ಸೇವಿಸಿ 50ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥರಾಗಿದ್ದಾರೆ. ಅಸ್ವಸ್ಥರನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ.
Vijaya Karnataka Web 21 Feb 2019, 4:40 pm
ಕೊಪ್ಪಳ: ಯಲಬುರ್ಗಾ ತಾಲೂಕಿನ ಬೇವೂರು ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಹಲ್ಲಿ ಬಿದ್ದ ಬಿಸಿಯೂಟ ಸೇವಿಸಿ 50ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥರಾಗಿದ್ದಾರೆ.
ಬಿಸಿಯೂಟ ತಯಾರಿಸುವ ವೇಳೆಯಲ್ಲಿ ಸಾಂಬರ್ನಲ್ಲಿ ಹಲ್ಲಿ ಬಿದ್ದಿದೆ. ಆದರೆ, ಇದನ್ನು ಅಡುಗೆ ಸಿಬ್ಬಂದಿ ಗಮನಿಸಲಿಲ್ಲ ಎನ್ನಲಾಗಿದೆ. ಬಳಿಕ ವಿದ್ಯಾರ್ಥಿಗಳಲ್ಲಿ ವಾಂತಿ ಕಾಣಿಸಿಕೊಂಡಾಗ ಘಟನೆ ಬೆಳಕಿಗೆ ಬಂದಿದೆ.
ಇನ್ನು, ಕೊಪ್ಪಳ ಜಿಲ್ಲೆಯ ಬೇವೂರು ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಅಸ್ವಸ್ಥ ವಿದ್ಯಾರ್ಥಿಗಳಿಗೆ ಪ್ರಾಥಮಿಕ ಚಿಕಿತ್ಸೆ ನೀಡಲಾಗಿದೆ. ನಂತರ ಜಿಲ್ಲಾಸ್ಪತ್ರೆಗೆ ಅವರನ್ನು ಕರೆದೊಯ್ಯಲಾಗಿದ್ದು, ಖಾಸಗಿ ವಾಹನ ಹಾಗೂ 108 ಆ್ಯಂಬುಲೆನ್ಸ್ನಲ್ಲಿ ಚಿಕಿತ್ಸೆಗೆ ಜಿಲ್ಲಾಸ್ಪತ್ರೆಗೆ ದಾಖಲಾಗಿಸಲಾಗಿದೆ.
ಇತ್ತೀಚೆಗೆ ಬಿಸಿಯೂಟದಲ್ಲಿ ಹಲ್ಲೆ, ದೇವಾಲಯದ ಪ್ರಸಾದದಲ್ಲಿ ವಿಷ - ಈ ರೀತಿಯ ಪ್ರಕರಣಗಳು ಹೆಚ್ಚಾಗುತ್ತಿವೆ. ಅಡುಗೆ ತಯಾರಕರ ಹಾಗೂ ಶಾಲಾ ಸಿಬ್ಬಂದಿಯ ನಿರ್ಲಕ್ಷ್ಯದಿಂದಾಗಿ ಈ ರೀತಿಯ ಘಟನೆಗಳು ಹೆಚ್ಚಾಗುತ್ತಿರಬಹುದು ಎಂದು ತಿಳಿದುಬಂದಿದೆ.
ಬಿಸಿಯೂಟ ತಯಾರಿಸುವ ವೇಳೆಯಲ್ಲಿ ಸಾಂಬರ್ನಲ್ಲಿ ಹಲ್ಲಿ ಬಿದ್ದಿದೆ. ಆದರೆ, ಇದನ್ನು ಅಡುಗೆ ಸಿಬ್ಬಂದಿ ಗಮನಿಸಲಿಲ್ಲ ಎನ್ನಲಾಗಿದೆ. ಬಳಿಕ ವಿದ್ಯಾರ್ಥಿಗಳಲ್ಲಿ ವಾಂತಿ ಕಾಣಿಸಿಕೊಂಡಾಗ ಘಟನೆ ಬೆಳಕಿಗೆ ಬಂದಿದೆ.
ಇನ್ನು, ಕೊಪ್ಪಳ ಜಿಲ್ಲೆಯ ಬೇವೂರು ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಅಸ್ವಸ್ಥ ವಿದ್ಯಾರ್ಥಿಗಳಿಗೆ ಪ್ರಾಥಮಿಕ ಚಿಕಿತ್ಸೆ ನೀಡಲಾಗಿದೆ. ನಂತರ ಜಿಲ್ಲಾಸ್ಪತ್ರೆಗೆ ಅವರನ್ನು ಕರೆದೊಯ್ಯಲಾಗಿದ್ದು, ಖಾಸಗಿ ವಾಹನ ಹಾಗೂ 108 ಆ್ಯಂಬುಲೆನ್ಸ್ನಲ್ಲಿ ಚಿಕಿತ್ಸೆಗೆ ಜಿಲ್ಲಾಸ್ಪತ್ರೆಗೆ ದಾಖಲಾಗಿಸಲಾಗಿದೆ.
ಇತ್ತೀಚೆಗೆ ಬಿಸಿಯೂಟದಲ್ಲಿ ಹಲ್ಲೆ, ದೇವಾಲಯದ ಪ್ರಸಾದದಲ್ಲಿ ವಿಷ - ಈ ರೀತಿಯ ಪ್ರಕರಣಗಳು ಹೆಚ್ಚಾಗುತ್ತಿವೆ. ಅಡುಗೆ ತಯಾರಕರ ಹಾಗೂ ಶಾಲಾ ಸಿಬ್ಬಂದಿಯ ನಿರ್ಲಕ್ಷ್ಯದಿಂದಾಗಿ ಈ ರೀತಿಯ ಘಟನೆಗಳು ಹೆಚ್ಚಾಗುತ್ತಿರಬಹುದು ಎಂದು ತಿಳಿದುಬಂದಿದೆ.