ಆ್ಯಪ್ನಗರ

ಕೊಪ್ಪಳದಲ್ಲಿ ಲೋಕಸಭಾ ಫೈಟ್: ಸಂಸದ ಸಂಗಣ್ಣ ಕರಡಿಗೆ ಕೈ ತಪ್ಪುತ್ತಾ ಟಿಕೆಟ್?

ಕೊಪ್ಪಳ ಲೋಕಸಭಾ ಕ್ಷೇತ್ರದ ಬಿಜೆಪಿಯಲ್ಲಿ ಈಗ ಸಂಗಣ್ಣ ಹಾಗು ಕೆ ಬಸವರಾಜ ಮಧ್ಯೆ ಪೈಪೋಟಿ ಏರ್ಪಟ್ಟಿದೆ. ಈಗಾಗಲೇ ಇಬ್ಬರು ಚುನಾವಣೆಗೆ ಸಿದ್ದತೆ ನಡೆಸಿದ್ದಾರೆ. ಈಗಿನ ಬಿಜೆಪಿ ಸ್ಥಿತಿಯಲ್ಲಿ ಹಾಲಿ ಸಂಸದರಿಗೆ ಟಿಕೆಟ್ ತಪ್ಪಿಸಿ ಪಕ್ಷದಲ್ಲಿ ಗೊಂದಲ ಮಾಡಿಕೊಳ್ಳುವ ಸ್ಥಿತಿಯಲ್ಲಿಲ್ಲ ಎನ್ನಲಾಗಿದೆ. ಆದರೆ ಹೊಸಬರಿಗೆ ಅವಕಾಶ ನೀಡಬೇಕು ಎನ್ನುವ ಕಾರಣಕ್ಕೆ ಬಸವರಾಜರಿಗೆ ಟಿಕೆಟ್ ನೀಡಬಹುದು ಎನ್ನಲಾಗಿದೆ. ಬರುವ ದಿನಗಳಲ್ಲಿ ಈ ಬಗ್ಗೆ ಇನ್ನಷ್ಟು ಸ್ಪಷ್ಠವಾಗಲಿದೆ.

Edited byಶ್ರೀಲಕ್ಷ್ಮೀ ಎಚ್ಎಲ್ | Vijaya Karnataka Web 8 Dec 2023, 10:06 pm

ಹೈಲೈಟ್ಸ್‌:

  • ಲೋಕಸಭಾ ಚುನಾವಣೆ ಟಿಕೆಟ್ ಗಾಗಿ ಬಿಗ್ ಫೈಟ್: ಕೊಪ್ಪಳದಲ್ಲಿ ಗರಿಗೆದರಿದ ರಾಜಕೀಯ ಚಟುವಟಿಕೆ
  • ಹಾಲಿ ಸಂಸದ ಸಂಗಣ್ಣ ಕರಡಿಯವರಿಗೆ ಟಿಕೆಟ್ ತಪ್ಪಿ ಹೊಸಬರಿಗೆ ಟಿಕೆಟ್ ನೀಡುತ್ತಾರಾ?
  • ಕೊಪ್ಪಳ ಲೋಕಸಭಾ ಕ್ಷೇತ್ರದ ಬಿಜೆಪಿಯಲ್ಲಿ ಈಗ ಸಂಗಣ್ಣ ಹಾಗು ಕೆ ಬಸವರಾಜ ಮಧ್ಯೆ ಪೈಪೋಟಿ
ಹೈಲೈಟ್ಸ್‌ ಮಾತ್ರವೇ ಓದಲು ಆ್ಯಪ್‌ ಡೌನ್‌ಲೋಡ್‌ ಮಾಡಿ
Vijaya Karnataka Web ಲೋಕಸಭಾ ಟಿಕೆಟ್ ಫೈಟ್
ಲೋಕಸಭಾ ಟಿಕೆಟ್ ಫೈಟ್
ಕೊಪ್ಪಳ: ಇತ್ತೀಚಿನ ಪಂಚರಾಜ್ಯಗಳ ಚುನಾವಣೆಯ ಫಲಿತಾಂಶದ ನಂತರ ರಾಜ್ಯದ ಬಿಜೆಪಿಯಲ್ಲಿ ಒಂದಿಷ್ಟು ಹುರುಪು ಬಂದಂತೆ ಇದೆ.
ಈ ಮಧ್ಯೆ ಮುಂಬರುವ ಲೋಕಸಭಾ ಚುನಾವಣೆ ಟಿಕೆಟ್ ಗಾಗಿ ಈಗಾಗಲೇ ಬಿಗ್ ಫೈಟ್ ಆರಂಭವಾಗಿದೆ. ಕೊಪ್ಪಳ ಲೋಕಸಭಾ ಕ್ಷೇತ್ರದ ಹಾಲಿ ಸಂಸದ ಸಂಗಣ್ಣ ಕರಡಿಯವರಿಗೆ ಟಿಕೆಟ್ ತಪ್ಪಿ ಹೊಸಬರಿಗೆ ಟಿಕೆಟ್ ನೀಡುತ್ತಾರೆ ಎಂಬ ವದಂತಿ ಇದೆ. ಈ ಮಧ್ಯೆ ಕೊಪ್ಪಳದ ವೈದ್ಯರೊಬ್ಬರು ಎಂಪಿ ಟಿಕೆಟ್ ಗೆ ಫೈಟ್ ನಡೆಸುತ್ತಿದ್ದಾರೆ.

ಲೋಕಸಭೆ ಸಮರ: ಚಿಕ್ಕಬಳ್ಳಾಪುರ ಟಿಕೆಟ್‌ಗಾಗಿ ವೀರಪ್ಪ ಮೊಯ್ಲಿ V/S ರಕ್ಷಾ ರಾಮಯ್ಯ ನಡುವೆ ಫೈಟ್ !
ಕೊಪ್ಪಳ ಲೋಕಸಭಾ ಕ್ಷೇತ್ರದಲ್ಲಿ ಕೊಪ್ಪಳ ಜಿಲ್ಲೆಯ ಐದು. ರಾಯಚೂರು ಜಿಲ್ಲೆಯ ಸಿಂಧನೂರು, ಮಸ್ಕಿ ಹಾಗು ಬಳ್ಳಾರಿ ಜಿಲ್ಲೆಯ ಸಿರಗುಪ್ಪಾ ವಿಧಾನಸಭಾ ಕ್ಷೇತ್ರ ಹೊಂದಿದೆ. ಈ ಕ್ಷೇತ್ರದಲ್ಲಿ 2009 ರಿಂದ ಮೂರು ಬಾರಿ ಬಿಜೆಪಿಯ ಸಂಸದರು ಆಯ್ಕೆಯಾಗಿದ್ದಾರೆ.

ಒಂದು ಹಂತದಲ್ಲಿ ಈಗ ಕೊಪ್ಪಳ ಲೋಕಸಭಾ ಕ್ಷೇತ್ರ ಬಿಜೆಪಿಯ ಭದ್ರ ಕೋಟೆ ಎನ್ನಲಾಗುತ್ತಿದೆ. 2009 ರಲ್ಲಿ ಬಿಜೆಪಿಯ ಶಿವರಾಮಗೌಡ. 2014 ಹಾಗೂ 2019 ರಲ್ಲಿ ಈಗಿನ ಸಂಸದ ಸಂಗಣ್ಣ ಕರಡಿ ಆಯ್ಕೆಯಾಗಿದ್ದಾರೆ. ಈಗ ಮತ್ತೆ ಚುನಾವಣಾ ಆಖಾಡ ಸಿದ್ದವಾಗುತ್ತಿದೆ. ಹಾಲಿ ಸಂಸದ ಸಂಗಣ್ಣ ಕರಡಿ ಮತ್ತೆ ಬಿಜೆಪಿಯಿಂದ ಸ್ಪರ್ಧಿಸುವ ಇಂಗಿತ ವ್ಯಕ್ತಪಡಿಸಿದ್ದಾರೆ. ಆದರೆ ಅವರಿಗೆ ಕೊಪ್ಪಳದ ವೈದ್ಯರಾಗಿರುವ ಡಾ ಕೆ ಬಸವರಾಜ ಪೈಪೋಟಿ ನೀಡುತ್ತಿದ್ದಾರೆ.

ಯುಪಿ ಮಾದರಿಯಲ್ಲೇ ರಾಜಸ್ಥಾನಕ್ಕೆ ‘ಬಾಬಾ’ ಸಿಎಂ? ಮಧ್ಯ ಪ್ರದೇಶಕ್ಕೆ ‘ಮಾಮಾ’ ಮುಖ್ಯಮಂತ್ರಿ?
ಕೆ ಬಸವರಾಜ ಕುಷ್ಟಗಿಯ ಮಾಜಿ ಶಾಸಕ ಕೆ ಶರಣಪ್ಪನವರ ಪುತ್ರ. 2014 ರ ಲೋಕಸಭಾ ಚುನಾವಣೆಯಲ್ಲಿ ಟಿಕೆಟ್ ಗೆ ಪ್ರಯತ್ನ ನಡೆಸಿದ್ದರು. ಆಗ ಅವರಿಗೆ ಟಿಕೆಟ್ ನೀಡದೆ ಸಂಗಣ್ಣ ಕರಡಿಗೆ ಮತ್ತೆ ಟಿಕೆಟ್ ನೀಡಲಾಗಿತ್ತು. ಸಂಗಣ್ಣ ಮೋದಿ ಅಬ್ಬರ. ರಾಜ್ಯದಲ್ಲಿ 25 ಬಿಜೆಪಿ ಸಂಸದರು ಆಯ್ಕೆಯಾಗುವ ವಾತವರಣದಲ್ಲಿಯೂ ಕೇವಲ 36 ಸಾವಿರ ಮತಗಳ ಅಂತರದಲ್ಲಿ ಗೆಲುವು ಸಾಧಿಸಿದ್ದು ಬಿಜೆಪಿಯಲ್ಲಿ ಒಂದಿಷ್ಟು ಮುಜುಗರಕ್ಕೆ ಕಾರಣವಾಗಿತ್ತು.

ಸಂತೋಷ್ ಜೀ RSSನಲ್ಲೂ ಅಸ್ಪೃಶ್ಯತೆ ಇದೆಯಾ?: ಮಾಜಿ ಸಚಿವ ಗೂಳಿಹಟ್ಟಿ ಶೇಖರ್ ಆಡಿಯೋ ವೈರಲ್!
ಬಿಜೆಪಿ ಹಾಗೂ ಮೋದಿ ವಿವಿಧ ಕ್ಷೇತ್ರದಲ್ಲಿರುವವರಿಗೆ ಟಿಕೆಟ್ ನೀಡುವ ಸಂಪ್ರಾದಾಯ ಹೊಂದಿದೆ. ಅದರಂತೆ ವೈದ್ಯಕೀಯ ಕ್ಷೇತ್ರದಲ್ಲಿರುವ ನನಗೆ ಟಿಕೆಟ್ ನೀಡುವ ವಿಶ್ವಾಸವಿದೆ ಎನ್ನುತ್ತಾರೆ. ಹಾಲಿ ಸಂಸದರಿಗೆ ಟಿಕೆಟ್ ತಪ್ಪಿಸಿ ನಿಮಗೆ ಟಿಕೆಟ್ ನೀಡಬಹುದಾ ಎಂಬ ಪ್ರಶ್ನೆಗೆ 2014 ರಲ್ಲಿ ಹಾಲಿ ಸಂಸದ ಶಿವರಾಮಗೌಡರಿಗೆ ಟಿಕೆಟ್ ತಪ್ಪಿಸಿ ಸಂಗಣ್ಣ ಕರಡಿಯವರಿಗೆ ಟಿಕೆಟ್ ನೀಡಲಾಗಿತ್ತು. ಈಗಲೂ ನನಗೆ ಟಿಕೆಟ್ ನೀಡಬಹುದು ಎಂಬ ಭರವಸೆ ಇದೆ ಎನ್ನುತ್ತಾರೆ.

Election Results 2023 - ಛತ್ತೀಸ್ ಗಢದ ಅಚ್ಚರಿಯ ಸಿಎಂ ಯಾರು?: ರಮಣ ಸಿಂಗ್ ಜೊತೆ ಪೈಪೋಟಿಯಲ್ಲಿದ್ದಾರೆ ನಾಲ್ವರು!
ಈ ಮಧ್ಯೆ ಸಂಗಣ್ಣ ಕರಡಿಗೆ ಈಗ 73 ವಯಸ್ಸು. ವಯಸ್ಸಿನ ಕಾರಣಕ್ಕಾಗಿ ಅವರಿಗೆ ಟಿಕೆಟ್ ತಪ್ಪಬಹುದು ಎನ್ನಲಾಗಿದೆ. ಆದರೆ ನನಗೆ ವಯಸ್ಸಾಗಿರಬಹುದು ನಾನು ಗಟ್ಟಿಯಾಗಿದ್ದೇನೆ. ಕೆಲಸ ಮಾಡುವ ಉತ್ಸಾಹದಲ್ಲಿದ್ದೇನೆ. ಹೈಕಮಾಂಡ ನನಗೆ ಟಿಕೆಟ್ ನೀಡಬಹುದು ಎಂಬ ವಿಶ್ವಾಸವಿದೆ ನಾನು ಆಕಾಂಕ್ಷಿ ಎಂದು ಹೇಳಿದ್ದಾರೆ.
ಲೇಖಕರ ಬಗ್ಗೆ
ಶ್ರೀಲಕ್ಷ್ಮೀ ಎಚ್ಎಲ್
ಶ್ರೀಲಕ್ಷ್ಮೀ ಅವರು ಮಲೆನಾಡ ಹೆಬ್ಬಾಗಿಲು ಶಿವಮೊಗ್ಗೆಯವರು. ಕಳೆದ 5 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿ ಕೆಲಸ ಮಾಡುತ್ತಿದ್ದಾರೆ. ಸದ್ಯ ವಿಜಯ ಕರ್ನಾಟಕ ಆನ್‌ಲೈನ್‌ ನಲ್ಲಿ ಡಿಜಿಟಲ್ ಕಂಟೆಂಟ್ ಪ್ರೊಡ್ಯೂಸರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ದೇಶೀಯ ಸುದ್ದಿಗಳು, ಲೈಫ್‌ಸ್ಟೈಲ್ ಸುದ್ದಿಗಳನ್ನು ಬರೆಯುವುದು ಅಚ್ಚುಮೆಚ್ಚು. ಹೊಸ ಹೊಸ ವಿಚಾರಗಳಿಗೆ ತೆರೆದುಕೊಳ್ಳುವುದು, ಕಲಿಯುವುದು, ಹೊಸ ಜಾಗಗಳಿಗೆ ಭೇಟಿ ನೀಡುವುದು ಇಷ್ಟದ ವಿಚಾರ.... ಇನ್ನಷ್ಟು ಓದಿ

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ