ಆ್ಯಪ್ನಗರ

ಗಂಗಾವತಿ: 36 ಪ್ರವಾಸಿಗರ ರಕ್ಷಣೆ

ಕರ್ನಾಟಕದಲ್ಲಿ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಲಕ್ಷಾಂತರ ಮಂದಿ ತೀವ್ರ ತೊಂದರೆಗೆ ಸಿಲುಕಿದ್ದಾರೆ. ಕೆಲವರು ಮಳೆಯಲ್ಲಿ ಪ್ರವಾಸಕ್ಕೆ ಹೋಗಿ ಸಮಸ್ಯೆಯಲ್ಲಿ ಸಿಲುಕಿದ್ದಾರೆ.

Vijaya Karnataka Web 11 Aug 2019, 4:58 pm
ಕೊಪ್ಪಳ: ಗಂಗಾವತಿ ತಾಲೂಕಿನ ವಿರುಪಾಪುರ ಗಡ್ಡಿಯಲ್ಲಿ ಸಿಲುಕಿ ಹಾಕಿಕೊಂಡಿದ್ದ ಸುಮಾರು 36 ಪ್ರವಾಸಿಗರನ್ನು ರಕ್ಷಿಸಲಾಗಿದೆ.
Vijaya Karnataka Web ತೆಪ್ಪ ಕಾರ್ಯಾಚರಣೆ
ತೆಪ್ಪ ಕಾರ್ಯಾಚರಣೆ


ನದಿಯಲ್ಲಿ ನೀರಿನ ರಭಸ ಹೆಚ್ಚಾಗುತ್ತಿರುವರ ಹಿನ್ನೆಲೆಯಲ್ಲಿ ಹರಗೋಲು ಹಾಕುವುದನ್ನು ಕೈಬಿಡಲಾಗಿದೆ.‌ ಸುಮಾರು 200ಕ್ಕೂ ಅಧಿಕ‌ ಪ್ರವಾಸಿಗರು ಇರಬಹುದೆಂಬ ಅಂದಾಜಿದೆ.

ಈ ಕುರಿತು ಪ್ರತಿಕ್ರಿಯಿಸಿರುವ ಜಿಲ್ಲಾಧಿಕಾರಿ ಪಿ.ಸುನಿಲ್‌ಕುಮಾರ್ ಅವರು, ವಿರುಪಾಪುರ ಗಡ್ಡಿ ರೆಸಾರ್ಟ್ ಮಾಲೀಕರಿಗೆ ಗಂಭೀರ ಎಚ್ಚರಿಕೆ ನೀಡಿತ್ತು. ಆದರೂ ಸ್ಥಳಾಂತರಗೊಂಡಿಲ್ಲ. ನೀರಿನ ಮಟ್ಟ ಹೆಚ್ಚುತ್ತಿದೆ. ಪ್ರಸ್ತುತ ಅವರನ್ನು ಬಲವಂತವಾಗಿ ಹೊರಹಾಕಲಾಗುವುದು ಎಂದರು.

ಭಾನುವಾರವೇ ತಹಸೀಲ್ದಾರ್ ಹಾಗೂ ಇತರೆ ಅಧಿಕಾರಿಗಳು ಭೇಟಿ ನೀಡಿ ಎಚ್ಚರಿಕೆ ನೀಡಿದ್ದಾರೆ ಎಂದರು.

ರೆಸಾರ್ಟ್ ಮಾಲೀಕರು ಪ್ರವಾಸಿಗರ ದಾರಿ ತಪ್ಪಿಸಿ ತಮ್ಮಲ್ಲಿಯೇ ಉಳಿಯುವಂತೆ ಮಾಡಿಕೊಂಡಿದ್ದಾರೆ. ಪ್ರವಾಹ ಹೆಚ್ಚಾಗುತ್ತಿದ್ದು, ಪ್ರವಾಸಿಗರು ತೆರಳಬೇಕೆಂದರೂ ಸಾಧ್ಯವಾಗುತ್ತಿಲ್ಲ ಎನ್ನುವ ಆರೋಪ ಕೇಳಿಬಂದಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ