ಆ್ಯಪ್ನಗರ

ನರೇಂದ್ರ ಮೋದಿ ಆನೆ, ಓವೈಸಿ ನಾಯಿ ಇದ್ದಂತೆ: ಪ್ರಮೋದ್‌ ಮುತಾಲಿಕ್

ಬಿಎಸ್‌ವೈ ಬದಲಾವಣೆ ಅನವಶ್ಯಕ ಎಂದು ಶ್ರೀರಾಮ ಸೇನೆ ರಾಷ್ಟ್ರೀಯ ಅಧ್ಯಕ್ಷ ಪ್ರಮೋದ್‌ ಮುತಾಲಿಕ್‌ ಹೇಳಿದ್ದಾರೆ. ಜತೆಗೆ ನರೇಂದ್ರ ಮೋದಿ ಆನೆ, ಓವೈಸಿ ನಾಯಿ ಇದ್ದಂತೆ ಎಂದಿದ್ದಾರೆ.

Vijaya Karnataka Web 30 Jul 2020, 6:14 pm
ಕೊಪ್ಪಳ: ಕೊರೊನಾದಂತಹ ಸಂದಿಗ್ಧ ಪರಿಸ್ಥಿತಿಯಲ್ಲಿ ಸಿಎಂ ಬಿ.ಎಸ್‌.ಯಡಿಯೂರಪ್ಪ ಅವರ ಬದಲಾವಣೆಯ ಮಾತುಗಳು ರಾಜ್ಯ ರಾಜಕಾರಣದಲ್ಲಿ ಅನವಶ್ಯಕ ಎಂದು ಶ್ರೀರಾಮ ಸೇನೆ ರಾಷ್ಟ್ರೀಯ ಅಧ್ಯಕ್ಷ ಪ್ರಮೋದ್‌ ಮುತಾಲಿಕ್‌ ಹೇಳಿದರು.
Vijaya Karnataka Web pramod muthalik


ಕೊಪ್ಪಳದ ಗವಿಮಠ ಆವರಣದಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. ''ರಾಜ್ಯದ ಜನರು ಕೊರೊನಾ ಸೊಂಕಿನ ಭೀತಿ, ಆತಂಕದಲ್ಲಿ ಜೀವನ ಸಾಗಿಸುತ್ತಿದ್ದಾರೆ. ಇಂತಹ ಸಂದರ್ಭದಲ್ಲಿ ರಾಜಕೀಯ ಬೇಳೆ ಬೇಯಿಸಿಕೊಳ್ಳುವ ರಾಜಕೀಯ ದುಷ್ಟತನ ಎಂದಿಗೂ ಮಾಡಬಾರದು. ಆಕಸ್ಮಾತ್‌ ಹಾಗೆ ಮಾಡಿದರೆ ಜನ ನಿಮ್ಮನ್ನು ಸುಮ್ಮನೆ ಬಿಡುವುದಿಲ್ಲ. ಚಪ್ಪಲಿ ತೆಗೆದುಕೊಂಡು ಬೆನ್ನು ಹತ್ತುತ್ತಾರೆ'' ಎಂದು ಆಕ್ರೋಶ ವ್ಯಕ್ತಪಡಿಸಿದ ಅವರು, ''ರಾಜ್ಯದಲ್ಲಿ ಈ ಹಿಂದೆ ಬೇರೆ ಬೇರೆ ಸಂದರ್ಭಗಳಲ್ಲಿ ದಿ.ಅನಂತ್‌ ಕುಮಾರ್‌ ಹೆಗಡೆ ಮುಖ್ಯಮಂತ್ರಿ ಎಂದು ಬಿಂಬಿಸಲಾಯಿತು. ಉಮೇಶ ಕತ್ತಿ ನಾನೇ ಸಿಎಂ ಎಂದು ಹೇಳಿಕೊಂಡಿದ್ದರು'' ಎಂದು ವ್ಯಂಗ್ಯವಾಡಿದರು.

''ಪ್ರಧಾನಿ ನರೇಂದ್ರ ಮೋದಿ ಅವರು ಆನೆ, ಓವೈಸಿ ನಾಯಿ ಇದ್ದಂತೆ. ನಾಯಿ ಬೊಗಳಿಕೆಗೆ ಆನೆ ಸೊಪುತ್ರ್ಪ ಹಾಕಲ್ಲ. ಆ.5ರಂದು ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರದಲ್ಲಿ ಶಂಕುಸ್ಥಾಪನೆ ಕಾರ್ಯಕ್ರಮ ಶಾಂತಿಯುತವಾಗಿ ನಡೆಯಲಿದೆ'' ಎಂದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ