ಆ್ಯಪ್ನಗರ

ಹೊಸ ಜಿಲ್ಲಾಧಿಕಾರಿ ಅಧಿಕಾರ ಸ್ವೀಕಾರ

ಕೊಪ್ಪಳ ನೂತನ ಜಿಲ್ಲಾಧಿಕಾರಿಯಾಗಿ ಐಎಎಸ್‌ ಅಧಿಕಾರಿ ಪೊಮ್ಮಲ ಸುನಿಲ್‌ಕುಮಾರ್‌ ಅವರು ಮಂಗಳವಾರ ಅಧಿಕಾರ ವಹಿಸಿಕೊಂಡರು.

Vijaya Karnataka 8 Aug 2018, 5:00 am
ಕೊಪ್ಪಳ : ಕೊಪ್ಪಳ ನೂತನ ಜಿಲ್ಲಾಧಿಕಾರಿಯಾಗಿ ಐಎಎಸ್‌ ಅಧಿಕಾರಿ ಪೊಮ್ಮಲ ಸುನಿಲ್‌ಕುಮಾರ್‌ ಅವರು ಮಂಗಳವಾರ ಅಧಿಕಾರ ವಹಿಸಿಕೊಂಡರು.
Vijaya Karnataka Web KPL-KPL07PHOTO02


ಜಿಲ್ಲಾಧಿಕಾರಿಯಾಗಿದ್ದ ಎಂ.ಕನಗವಲ್ಲಿ ಅವರನ್ನು ಪದವೀ ಪೂರ್ವ ಶಿಕ್ಷ ಣ ಇಲಾಖೆ ನಿರ್ದೇಶಕರಾಗಿ ವರ್ಗವಾಗಿರುವ ಹಿನ್ನೆಲೆಯಲ್ಲಿ ನೂತನ ಜಿಲ್ಲಾಧಿಕಾರಿಗೆ ಹೂಗುಚ್ಛ ನೀಡುವ ಮೂಲಕ ಕೊಪ್ಪಳಕ್ಕೆ ಸ್ವಾಗತಿಸಿದರು. ಎಂ. ಕನಗವಲ್ಲಿ ಅವರು 2015 ರ ನವೆಂಬರ್‌ನಲ್ಲಿ ಜಿಲ್ಲಾಧಿಕಾರಿಯಾಗಿ ಅಧಿಕಾರ ವಹಿಸಿಕೊಂಡಿದ್ದರು. 2 ವರ್ಷ 9 ತಿಂಗಳುಗಳ ಸುದೀರ್ಘ ಅವಧಿಗೆ ಕಾರ್ಯ ನಿರ್ವಹಿಸಿದ್ದಾರೆ. ಪೊಮ್ಮಲ ಸುನಿಲ್‌ಕುಮಾರ್‌ ಅವರು ಆಂಧ್ರಪ್ರದೇಶದ ಕಡಪ ಜಿಲ್ಲೆಯವರಾಗಿದ್ದು, ಎಲೆಕ್ಟ್ರಿಕಲ್‌ ಎಂಜಿನಿಯರ್‌ ಪದವಿ ಪಡೆದಿದ್ದಾರೆ. ತಮಿಳುನಾಡಿನ ಚೆನ್ನೈ ಹಾಗೂ ಅಮೆರಿಕದ ನ್ಯೂಜೆರ್ಸಿಯಲ್ಲಿ ಸಾಫ್ಟ್‌ವೇರ್‌ ಕಂಪನಿಗಳಲ್ಲಿ ಅಂದಾಜು 7 ವರ್ಷಗಳ ಕಾರ್ಯ ನಿರ್ವಹಿಸಿದ್ದಾರೆ. ನೌಕರಿಗೆ ರಾಜೀನಾಮೆ ನೀಡಿ, ಯುಪಿಎಸ್‌ಸಿ ಪರೀಕ್ಷೆ ಬರೆದು 2011 ರಲ್ಲಿ ಐಎಎಸ್‌ ಅಧಿಕಾರಿಯಾಗಿ ಆಯ್ಕೆಯಾದರು. ಹಾಸನ ಜಿಲ್ಲೆಯಲ್ಲಿ ಐಎಎಸ್‌ ಟ್ರೈನಿ ಅಧಿಕಾರಿಯಾಗಿ ಕಾರ್ಯ ನಿರ್ವಹಿಸಿದ ಬಳಿಕ, ಹೊಸಪೇಟೆ ಉಪವಿಭಾಗಾಧಿಕಾರಿಯಾಗಿ ಒಂದು ವರ್ಷ 4 ತಿಂಗಳು ಸೇವೆ ಸಲ್ಲಿಸಿದರು. ಯಾದಗಿರಿ ಜಿ.ಪಂ.ಸಿಇಒ ಆಗಿ 7 ತಿಂಗಳ ಸೇವೆ. ಕಲಬುರಗಿ ಮಹಾನಗರ ಪಾಲಿಕೆಯಲ್ಲಿ ಆಯುಕ್ತರಾಗಿ ಸೇವೆ. ಬೆಂಗಳೂರಿನಲ್ಲಿ ವಸತಿ ಇಲಾಖೆಯಲ್ಲಿ ರಿಯಲ್‌ ಎಸ್ಟೇಟ್‌ ರೆಗ್ಯುಲಾರಿಟಿ ಅಥಾರಿಟಿಯಲ್ಲಿ ಕಾರ್ಯದರ್ಶಿಗಳ ಹುದ್ದೆ, ಕಾರ್ಮಿಕ ಇಲಾಖೆಯ ಕಟ್ಟಡ ಕಾರ್ಮಿಕರ ಕಲ್ಯಾಣ ಮಂಡಳಿಯಲ್ಲಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾಗಿ ಸೇವೆ ಸಲ್ಲಿಸಿದ್ದಾರೆ. ನಗರಾಭಿವೃದ್ಧಿ ಇಲಾಖೆಯ ಕರ್ನಾಟಕ ಮುನ್ಸಿಪಲ್‌ ಡಾಟಾ ಸೊಸೈಟಿಯಲ್ಲಿ ಜಂಟಿನಿರ್ದೇಶಕರ (ಸುಧಾರಣೆ) ಹುದ್ದೆಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದು, ಇದೀಗ ಜಿಲ್ಲಾಧಿಕಾರಿಯಾಗಿ ಅಧಿಕಾರ ವಹಿಸಿಕೊಂಡಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ