ಆ್ಯಪ್ನಗರ

ಉದ್ದಿಮೆ ಪರವಾನಗಿ ಪಡೆಯಲು ಸೂಚನೆ

ಇಲ್ಲಿನ ನಗರಸಭೆ ವ್ಯಾಪ್ತಿಯಲ್ಲಿರುವ ವರ್ತಕರು 2016-17ನೇ ಸಾಲಿಗೆ ತಮ್ಮ ಉದ್ದಿಮೆಗೆ ಪರವಾನಗಿ ಹಾಗೂ ಉದ್ದಿಮೆ ಪರವಾನಗಿ ನವೀಕರಿಸಿಕೊಳ್ಳುವಂತೆ ಪೌರಾಯುಕ್ತ ರಮೇಶ ಪಟ್ಟೇದಾರ ತಿಳಿಸಿದ್ದಾರೆ.

ವಿಕ ಸುದ್ದಿಲೋಕ 5 Apr 2016, 8:07 am
ಕೊಪ್ಪಳ ; ಇಲ್ಲಿನ ನಗರಸಭೆ ವ್ಯಾಪ್ತಿಯಲ್ಲಿರುವ ವರ್ತಕರು 2016-17ನೇ ಸಾಲಿಗೆ ತಮ್ಮ ಉದ್ದಿಮೆಗೆ ಪರವಾನಗಿ ಹಾಗೂ ಉದ್ದಿಮೆ ಪರವಾನಗಿ ನವೀಕರಿಸಿಕೊಳ್ಳುವಂತೆ ಪೌರಾಯುಕ್ತ ರಮೇಶ ಪಟ್ಟೇದಾರ ತಿಳಿಸಿದ್ದಾರೆ.
Vijaya Karnataka Web note to the enterprise license
ಉದ್ದಿಮೆ ಪರವಾನಗಿ ಪಡೆಯಲು ಸೂಚನೆ


ಹೊಸ ಉದ್ದಿಮೆಗೆ ಪರವಾನಗಿ ಹಾಗೂ ಈಗಾಗಲೇ ಉದ್ದಿಮೆ ಪರವಾನಗಿ ಪಡೆದಂತಹ ವ್ಯಾಪಾರಸ್ಥರು, ವರ್ತಕರು ಉದ್ದಿಮೆ ಪರವಾನಗಿ ನವೀಕರಿಸಿಕೊಳ್ಳಬೇಕು. ಈಗಾಗಲೇ ಉದ್ದಿಮೆ ನವೀಕರಣ ಕಾರ್ಯ ಏ.1 ರಿಂದ ಆರಂಭಿಸಲಾಗಿದ್ದು, ಹೊಸ ಉದ್ದಿಮೆದಾರರು ತಮ್ಮ ಉದ್ದಿಮೆಗೆ ಸಂಬಂಧಿಸಿದ ದಾಖಲೆಯೊಂದಿಗೆ ನಗರಸಭೆಗೆ ಅರ್ಜಿ ಸಲ್ಲಿಸಿ ಪರವಾನಗಿ ಪಡೆಯಬೇಕು. ಈಗಾಗಲೇ ಪರವಾನಗಿ ಪಡೆದ ಉದ್ದಿಮೆದಾರರು ಹಿಂದಿನ ವರ್ಷದ ಪರವಾನಗಿಯೊಂದಿಗೆ ಅರ್ಜಿ ಸಲ್ಲಿಸಿ ನವೀಕರಿಸಿಕೊಳ್ಳಬೇಕು. ಉದ್ದಿಮೆ ಪರವಾನಗಿ ಕಡ್ಡಾಯವಾಗಿದ್ದು, ಪರವಾನಗಿ ಪಡೆಯದೇ ವಾಣಿಜ್ಯ ಚಟುವಟಿಕೆ ನಡೆಸುವುದು ಕಾನೂನು ಬಾಹಿರವಾಗಿದೆ. ಅಂತಹ ಉದ್ದಿಮೆ ಸ್ಥಗಿತಗೊಳಿಸಲು ಕ್ರಮ ಜರುಗಿಸಿ ನ್ಯಾಯಾಲಯದಲ್ಲಿ ದಾವೆ ಸಲ್ಲಿಸಲಾಗುವುದು ಎಂದು ನಗರಸಭೆ ಪೌರಾಯುಕ್ತ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ