ಆ್ಯಪ್ನಗರ

ಕಲ್ಲಿನಿಂದ ಜಜ್ಜಿ ವ್ಯಕ್ತಿಯ ಕೊಲೆ

ತಾಲೂಕಿನ ದಾಸನಾಳ ಗ್ರಾಮದ ಎಡದಂಡೆ ಕಾಲುವೆ ಬಳಿ, ದುಷ್ಕರ್ಮಿಗಳು ವ್ಯಕ್ತಿಯೊಬ್ಬರ ತಲೆಗೆ ಕಲ್ಲಿನಿಂದ ಜಜ್ಜಿ ಕೊಲೆ ಮಾಡಿರುವುದು ಬುಧವಾರ ಪತ್ತೆಯಾಗಿದೆ.

ವಿಕ ಸುದ್ದಿಲೋಕ 7 Jun 2017, 8:12 pm
ಗಂಗಾವತಿ: ತಾಲೂಕಿನ ದಾಸನಾಳ ಗ್ರಾಮದ ಎಡದಂಡೆ ಕಾಲುವೆ ಬಳಿ, ದುಷ್ಕರ್ಮಿಗಳು ವ್ಯಕ್ತಿಯೊಬ್ಬರ ತಲೆಗೆ ಕಲ್ಲಿನಿಂದ ಜಜ್ಜಿ ಕೊಲೆ ಮಾಡಿರುವುದು ಬುಧವಾರ ಪತ್ತೆಯಾಗಿದೆ.
Vijaya Karnataka Web person murder
ಕಲ್ಲಿನಿಂದ ಜಜ್ಜಿ ವ್ಯಕ್ತಿಯ ಕೊಲೆ


ವೆಂಕಟಗಿರಿ ಗ್ರಾಮದ ಕೂಲಿಕಾರ ಮಹಾದೇವಪ್ಪ (45) ಮೃತರು. ಗ್ರಾಮೀಣ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿನೀಡಿ ಪರಿಶೀಲಿಸಿದರು. ಹಳೇ ದ್ವೇಷ ಅಥವಾ ಹಣದ ವಿಚಾರವಾಗಿ ನಡೆದ ಗಲಾಟೆಯಿಂದ ಕೊಲೆ ಮಾಡಿರಬಹುದು ಎಂದು ಪೊಲೀಸರು ಶಂಕೆವ್ಯಕ್ತಪಸಿದ್ದಾರೆ. ಮಹಾದೇವಪ್ಪ ಅವರ ಪತ್ನಿ ಗಾಳೆಮ್ಮ ಅವರ ದೂರು ಆಧರಿಸಿ, ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ