ಆ್ಯಪ್ನಗರ

'ಅಕ್ರಮ ನಡೆಯದಂತೆ ಸೂಕ್ತ ಕ್ರಮ'

ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ ಮಾರ್ಚ್‌ 1 ರಿಂದ 18 ರವರೆಗೆ ನಡೆಯಲಿದ್ದು, ಯಾವುದೇ ಅಕ್ರಮ ಚಟುವಟಿಕೆ ನಡೆಯದಂತೆ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಪಿ. ಸುನಿಲ್‌ ಕುಮಾರ್‌ ಅವರು ಅಧಿಕಾರಿಗಳಿಗೆ ಸೂಚಿಸಿದರು.

Vijaya Karnataka 23 Feb 2019, 5:00 am
ಕೊಪ್ಪಳ : ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ ಮಾರ್ಚ್‌ 1 ರಿಂದ 18 ರವರೆಗೆ ನಡೆಯಲಿದ್ದು, ಯಾವುದೇ ಅಕ್ರಮ ಚಟುವಟಿಕೆ ನಡೆಯದಂತೆ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಪಿ. ಸುನಿಲ್‌ ಕುಮಾರ್‌ ಅವರು ಅಧಿಕಾರಿಗಳಿಗೆ ಸೂಚಿಸಿದರು.
Vijaya Karnataka Web KPL-KPL22PHOTO06


ನಗರದ ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ ನಿಮಿತ್ತ ಶುಕ್ರವಾರ ಜರುಗಿದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ ಮಾರ್ಚ್‌ 1 ರಿಂದ 18 ರವರೆಗೆ ನಡೆಯಲಿವೆ. ಜಿಲ್ಲೆಯ ನಾನಾ ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆಗಳು ಜರುಗಲಿವೆ. ಪರೀಕ್ಷೆಯಲ್ಲಿ ಯಾವುದೇ ಅಕ್ರಮ ಚಟುವಟಿಕೆ ನಡೆಯದಂತೆ ಮುಕ್ತ ಹಾಗೂ ನ್ಯಾಯ ಸಮ್ಮತವಾಗಿ ನಡೆಸಬೇಕು. ಈ ನಿಟ್ಟಿನಲ್ಲಿ ಪ್ರಶ್ನೆಪತ್ರಿಕೆ ಖಜಾನೆ ಇಲಾಖೆಗೆ ಠೇವಣಿಯಾಗುವುದರಿಂದ ಹಿಡಿದು ವಿತರಣೆಯಾಗುವವರೆಗೆ ಎಲ್ಲವನ್ನೂ ವಿಡಿಯೊ ಚಿತ್ರೀಕರಣ ಮಾಡಬೇಕು. ಖಜಾನೆಯಿಂದ ಪ್ರಶ್ನೆಪತ್ರಿಕೆ ತೆಗೆದುಕೊಂಡು ನಿಗದಿತ ಅವಧಿಯೊಳಗೆ ಪರೀಕ್ಷಾ ಕೇಂದ್ರಗಳಿಗೆ ತಲುಪಿಸುವ ಹೊಣೆ ಆಯಾ ಮಾರ್ಗಾಧಿಕಾರಿಗಳಿಗೆ ವಹಿಸಲಾಗಿದೆ. ವಿಳಂಬಕ್ಕೆ ಅವಕಾಶವಿಲ್ಲದಂತೆ ಪ್ರಶ್ನೆಪತ್ರಿಕೆಯನ್ನು ನಿಗದಿತ ಅವಧಿಯೊಳಗೆ ತಲುಪಿಸಬೇಕು ಎಂದರು.

ಕ್ರಮ: ಪರೀಕ್ಷಾ ಕೇಂದ್ರದೊಳಗೆ ಯಾವುದೇ ಬಗೆಯ ಮೊಬೈಲ್‌ ಫೋನ್‌, ಕ್ಯಾಲ್ಕುಲೇಟರ್‌, ಇನ್ನಿತರೆ ಎಲೆಕ್ಟ್ರಾನಿಕ್‌ ಉಪಕರಣ ಒಯ್ಯುವುದನ್ನು ನಿಷೇಧಿಸಿದೆ. ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಸೂಕ್ತ ಆಸನದ ವ್ಯವಸ್ಥೆ, ಕುಡಿಯುವ ನೀರಿನ ಸಮರ್ಪಕ ವ್ಯವಸ್ಥೆಯನ್ನು ಆಯಾ ಪರೀಕ್ಷಾ ಕೇಂದ್ರದ ಮುಖ್ಯಸ್ಥರು ಕೈಗೊಳ್ಳಬೇಕು. ಪರೀಕ್ಷಾ ದಿನದಂದು ಕೇಂದ್ರಗಳಲ್ಲಿ ಸೂಕ್ತ ಪೊಲೀಸ್‌ ಬಂದೋಬಸ್ತ್‌ ಕೈಗೊಳ್ಳಬೇಕು. ಪ್ರತಿ ಕೇಂದ್ರಕ್ಕೆ ಕಡ್ಡಾಯವಾಗಿ ಒಬ್ಬರು ಮಹಿಳಾ ಪೊಲೀಸ್‌ ಪೇದೆ ನಿಯೋಜಿಸಬೇಕು. ಪರೀಕ್ಷಾ ಕೇಂದ್ರದ 200 ಮೀಟರ್‌ ಸುತ್ತ ನಿಷೇಧಾಜ್ಞೆ ಜಾರಿಗೊಳಿಸಲಾಗುವುದು. ಪರೀಕ್ಷೆ ನಡೆಸುವುದಕ್ಕೆ ಸಂಬಂಧಿಸಿದಂತೆ ಪಿಯು ಬೋರ್ಡ್‌ ನೀಡಿರುವ ಸೂಚನೆಗಳನ್ನು ಎಲ್ಲ ಅಧಿಕಾರಿಗಳು ಕಟ್ಟುನಿಟ್ಟಾಗಿ ಪಾಲಿಸಬೇಕು. ಯಾವುದೇ ಅಕ್ರಮ ನಡೆದರೆ ಸಂಬಂಧಿಸಿದ ಪರೀಕ್ಷಾ ಕೇಂದ್ರ ಮುಖ್ಯಸ್ಥರು, ಅಧಿಕಾರಿಗಳು, ಸಿಬ್ಬಂದಿಗಳನ್ನು ಹೊಣೆಯಾಗಿಸಿ ಕ್ರಮ ಜರುಗಿಸಲಾಗುವುದು ಎಂದರು.

ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ರೇಣುಕಾ ಸುಕುಮಾರ್‌, ಅಪರ ಜಿಲ್ಲಾಧಿಕಾರಿ ಸಿ.ಡಿ. ಗೀತಾ, ಪದವೀ ಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕ ಎಲ್‌.ಜಿ.ರಾಟಿಮನಿ, ಸಾರ್ವಜನಿಕ ಶಿಕ್ಷ ಣ ಇಲಾಖೆ ಉಪನಿರ್ದೇಶಕಿ ಉಮಾದೇವಿ ಸೊನ್ನದ, ತಹಸೀಲ್ದಾರ್‌ರಾದ ಜೆ.ಬಿ. ಮಜ್ಜಿಗಿ, ಕೆ.ಎಂ.ಗುರುಬಸವರಾಜ, ವೀರೇಶ ಬಿರಾದಾರ್‌, ರಮೇಶ ಅಳವಂಡಿಕರ್‌ ಸೇರಿದಂತೆ ನಾನಾ ಇಲಾಖೆಗಳ ಅಧಿಕಾರಿಗಳು ಹಾಗೂ ಪ್ರಾಚಾರ್ಯರು ಇದ್ದರು.

----

ಜಿಲ್ಲೆಯ 16 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆಗಳು ಜರುಗಲಿವೆ. ಜಿಲ್ಲೆಯ 12,977 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಪರೀಕ್ಷೆಗಾಗಿ ಎಲ್ಲ ಸಿದ್ಧತೆ ನಡೆಸಿದೆ.

- ಎಲ್‌.ಜಿ.ರಾಟಿಮನಿ, ಉಪನಿರ್ದೇಶಕ, ಪದವೀ ಪೂರ್ವ ಶಿಕ್ಷಣ ಇಲಾಖೆ, ಕೊಪ್ಪಳ

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ