ಆ್ಯಪ್ನಗರ

ಗೃಹಿಣಿ ಹತ್ಯೆ ಖಂಡಿಸಿ ಪ್ರತಿಭಟನೆ

ತಾಲೂಕಿನ ಶ್ರೀರಾಮನಗರದ ಗೃಹಿಣಿಯೊಬ್ಬರನ್ನು ಪತಿ ಬೆಂಕಿ ಹಚ್ಚಿ ಹತ್ಯೆ ಮಾಡಿದ್ದಾನೆ ಎಂದು ಆರೋಪಿಸಿ ಗ್ರಾಮಸ್ಥರು ಹಾಗೂ ಮೃತ ಮಹಿಳೆಯ ಪಾಲಕರು ಶ್ರೀರಾಮನಗರದ ರಾಜ್ಯ ಹೆದ್ದಾರಿ ತಡೆದು, ಟೈರ್‌ಗೆ ಬೆಂಕಿ ಹಚ್ಚಿ ಗುರುವಾರ ಪ್ರತಿಭಟನೆ ನಡೆಸಿದರು.

Vijaya Karnataka 28 Sep 2018, 5:00 am
ಗಂಗಾವತಿ : ತಾಲೂಕಿನ ಶ್ರೀರಾಮನಗರದ ಗೃಹಿಣಿಯೊಬ್ಬರನ್ನು ಪತಿ ಬೆಂಕಿ ಹಚ್ಚಿ ಹತ್ಯೆ ಮಾಡಿದ್ದಾನೆ ಎಂದು ಆರೋಪಿಸಿ ಗ್ರಾಮಸ್ಥರು ಹಾಗೂ ಮೃತ ಮಹಿಳೆಯ ಪಾಲಕರು ಶ್ರೀರಾಮನಗರದ ರಾಜ್ಯ ಹೆದ್ದಾರಿ ತಡೆದು, ಟೈರ್‌ಗೆ ಬೆಂಕಿ ಹಚ್ಚಿ ಗುರುವಾರ ಪ್ರತಿಭಟನೆ ನಡೆಸಿದರು.
Vijaya Karnataka Web KPL-KPL27CM02


ಈ ಸಂದರ್ಭದಲ್ಲಿ ಗ್ರಾಮಸ್ಥರು ಮಾತನಾಡಿ, ಪತಿ ಕಿರಣಕುಮಾರ, ಪತ್ನಿ ತೇಜಸ್ವಿನಿ ಅವರಿಗೆ ಮಾನಸಿಕ ಕಿರುಕುಳ ನೀಡುತ್ತಿದ್ದರು. ಇಬ್ಬರಿಗೂ ಕೆಲ ವರ್ಷಗಳ ಹಿಂದೆ ಮದುವೆಯಾಗಿತ್ತು. ಆದರೆ ವರದಕ್ಷಿಣೆಯ ರೂಪದಲ್ಲಿ ಹಣ ನೀಡಬೇಕು ಎಂದು ಪೀಡಿಸುತ್ತಿದ್ದ. ಅಲ್ಲದೇ ದೈಹಿಕ ಹಿಂಸೆ ನೀಡಿದ್ದಾನೆ ಎಂದು ದೂರಿದರು.

ಮಹಿಳೆಯ ಕುಟುಂಬದ ಸದಸ್ಯರು ಮಾತನಾಡಿ, ಕಿರಣಕುಮಾರ, ಪತ್ನಿಗೆ ಬೆಂಕಿ ಹಚ್ಚಿ ಹತ್ಯೆ ಮಾಡಲು ಯತ್ನಿಸಿದ್ದಾನೆ. ಪೆಟ್ರೋಲ್‌ ಸುರಿದು ಬೆಂಕಿ ಹಚ್ಚುವ ವೇಳೆ ತಾಯಿ ಮಗು ಇಬ್ಬರೂ ಹತ್ಯೆಯಾಗಿದ್ದಾರೆ ಎಂದು ಆರೋಪಿಸುತ್ತಿದ್ದಾರೆ. ಅಲ್ಲದೇ ಕಿರಣಕುಮಾರ ಅವರು ಮೊದಲ ಪತ್ನಿಗೂ ಕಿರುಕುಳ ನೀಡುತ್ತಿದ್ದರು. ಹಾಗಾಗಿ ಅವರು ವಿಚ್ಛೇದನ ಪಡೆದುಕೊಂಡಿದ್ದಾರೆ. ಆರೋಪಿಗೆ ಸೂಕ್ತ ಶಿಕ್ಷೆಗೆ ಒಳಪಡಿಸಬೇಕು ಎಂದು ಒತ್ತಾಯಿಸಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ