ಆ್ಯಪ್ನಗರ

ಸಾವಿನ ತನಿಖೆಗೆ ಆಗ್ರಹಿಸಿ ಪ್ರತಿಭಟನೆ

ಪಟ್ಟಣದ ಸಂಗನಾಳ ರಸ್ತೆಯಲ್ಲಿರುವ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿನ ವಿದ್ಯಾರ್ಥಿನಿ ಅಶ್ವಿನಿ ಮೃತಪಟ್ಟಿದ್ದರಿಂದ ಸಮಗ್ರ ತನಿಖೆ ನಡೆಸಬೇಕು ಎಂದು ಆಗ್ರಹಿಸಿ ಪಟ್ಟಣದ ಸರಕಾರಿ ಸಾರ್ವಜನಿಕ ಆಸ್ಪತ್ರೆ ಮುಂದೆ ದಿಢೀರ್‌ ಎಸ್‌ಎಫ್‌ಐ ಕಾರ್ಯಕರ್ತರು ಸೋಮವಾರ ಪ್ರತಿಭಟನೆ ನಡೆಸಿದರು.

Vijaya Karnataka 19 Sep 2018, 5:00 am
ಯಲಬುರ್ಗಾ : ಪಟ್ಟಣದ ಸಂಗನಾಳ ರಸ್ತೆಯಲ್ಲಿರುವ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿನ ವಿದ್ಯಾರ್ಥಿನಿ ಅಶ್ವಿನಿ ಮೃತಪಟ್ಟಿದ್ದರಿಂದ ಸಮಗ್ರ ತನಿಖೆ ನಡೆಸಬೇಕು ಎಂದು ಆಗ್ರಹಿಸಿ ಪಟ್ಟಣದ ಸರಕಾರಿ ಸಾರ್ವಜನಿಕ ಆಸ್ಪತ್ರೆ ಮುಂದೆ ದಿಢೀರ್‌ ಎಸ್‌ಎಫ್‌ಐ ಕಾರ್ಯಕರ್ತರು ಸೋಮವಾರ ಪ್ರತಿಭಟನೆ ನಡೆಸಿದರು.
Vijaya Karnataka Web KPL-17YLB12


ಎಸ್‌ಎಫ್‌ಐ ತಾಲೂಕು ಸಂಚಾಲಕ ಸಿದ್ದಪ್ಪ ಮಾತನಾಡಿ, ಶಾಲೆಯಲ್ಲಿ ವಿದ್ಯಾರ್ಥಿನಿ ಕುಸಿದು ಬಿದ್ದು ಏಕಾಏಕಿ ಮೃತಪಟ್ಟಿದ್ದಾಳೆ. ಈ ಸಾವಿನ ಬಗ್ಗೆ ತನಿಖೆ ನಡೆಸಬೇಕು. ವಿದ್ಯಾರ್ಥಿನಿ ಸಾವು ಅನುಮಾನಾಸ್ಪದವಾಗಿದೆ. ಸಾವಿನ ಹಿಂದಿರುವ ಸತ್ಯ ಹೊರ ಬರಬೇಕು. ವಿದ್ಯಾರ್ಥಿನಿ ಕುಟುಂಬದವರಿಗೆ ನ್ಯಾಯ ಒದಗಿಸಬೇಕು. ಶಾಲೆಯಲ್ಲಿ ನಿರ್ಲಕ್ಷ ್ಯ ವಹಿಸಿದವರ ಮೇಲೆ ಕ್ರಮ ಜರುಗಿಸಬೇಕು ಎಂದು ಒತ್ತಾಯಿಸಿದರು.

ಪ್ರತಿಭಟನೆಯಲ್ಲಿ ಸಂಘಟನೆಯ ಗದಗ ಜಿಲ್ಲಾ ಉಪಾಧ್ಯಕ್ಷ ಅಶೋಕ ಉಕ್ಕಸಲ, ಜಿಲ್ಲಾ ಕಾರ್ಯದರ್ಶಿ ಶಿವಾಜಿ ಗಡ್ಡದ್‌, ಮಾರುತಿ, ಆನಂದ , ರಜಾಕ್‌ ಇಳಕಲ್‌ ಇತರರಿದ್ದರು.


ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ