ಆ್ಯಪ್ನಗರ

ಬರ ಪೀಡಿತ ಜಿಲ್ಲೆ ಘೋಷಣೆಗೆ ಆಗ್ರಹಿಸಿ ಪ್ರತಿಭಟನೆ

ಜಿಲ್ಲೆಯನ್ನು ಬರ ಪೀಡಿತ ಪ್ರದೇಶವೆಂದು ಘೋಷಿಸಲು ಆಗ್ರಹಿಸಿ ಜಿಲ್ಲಾ ಬಿಜೆಪಿ ಕಾರ್ಯಕರ್ತರು ನಗರದ ಬಸವೇಶ್ವರ ವೃತ್ತದಲ್ಲಿ ಸೋಮವಾರ ಪ್ರತಿಭಟನೆ ನಡೆಸಿದರು.

Vijaya Karnataka 21 Aug 2018, 5:00 am
ಕೊಪ್ಪಳ ; ಜಿಲ್ಲೆಯನ್ನು ಬರ ಪೀಡಿತ ಪ್ರದೇಶವೆಂದು ಘೋಷಿಸಲು ಆಗ್ರಹಿಸಿ ಜಿಲ್ಲಾ ಬಿಜೆಪಿ ಕಾರ್ಯಕರ್ತರು ನಗರದ ಬಸವೇಶ್ವರ ವೃತ್ತದಲ್ಲಿ ಸೋಮವಾರ ಪ್ರತಿಭಟನೆ ನಡೆಸಿದರು.
Vijaya Karnataka Web KPL-KPL20PHOTO10


ಈ ಸಂದರ್ಭದಲ್ಲಿ ಸಂಸದ ಸಂಗಣ್ಣ ಕರಡಿ ಮಾತನಾಡಿ, ಹೈ-ಕರ್ನಾಟಕ ಪ್ರದೇಶಗಳ ಜಿಲ್ಲೆಗಳಲ್ಲಿ ಮಳೆ ಕೊರತೆಯಿಂದ ರೈತರು ತತ್ತರಿಸುತ್ತಿದ್ದಾರೆ. ಆದರೆ, ಮಳೆ ಕೊರತೆಯಿಂದ ಬಿತ್ತನೆ ಮಾಡಿದ ಬೆಳೆ ಸಂಪೂರ್ಣ ಹಾಳಾಗಿದ್ದು, ಸರಕಾರ ಕಣ್ಣಿಗೆ ಕಾಣದಂತೆ ಕೈ ಕಟ್ಟಿ ಕುಳಿತಿದೆ. ಪ್ರಸಕ್ತ ವರ್ಷ ಕೊಪ್ಪಳ ಜಿಲ್ಲೆಯಲ್ಲಿ ವಾಡಿಕೆಗಿಂತ 20 ಎಂ.ಎಂ. ಮಳೆ ಕಡಿಮೆಯಾಗಿದೆ. ಜೂನ್‌ನಲ್ಲಿ ಅಂದಾಜು ಶೇ.82 ರಷ್ಟು ಬಿತ್ತನೆಯಾಗಿದೆ. ಆದರೆ, ಮಳೆಯ ಕೊರತೆಯಿಂದ ಬೆಳೆಗಳು ಸಂಪೂರ್ಣ ಒಣಗಿದ್ದು, ರೈತರು ಸಂಕಷ್ಟ ಎದುರಿಸುತ್ತಿದ್ದಾರೆ. ಜನ ಗುಳೆ ಹೋಗುವ ಪರಿಸ್ಥಿತಿ ಬಂದಿದೆ. ಜಾನುವಾರುಗಳಿಗೆ ಮೇವಿನ ಕೊರತೆ ಎದುರಾಗಿದ್ದು, ರೈತರು ಜಾನುವಾರುಗಳನ್ನು ಮಾರಾಟ ಮಾಡುತ್ತಿದ್ದಾರೆ. ಸರಕಾರ ಎಚ್ಚೆತ್ತುಗೊಂಡು ಜಿಲ್ಲೆಯನ್ನು ಬರ ಪೀಡಿತ ಜಿಲ್ಲೆ ಎಂದು ಘೋಷಿಸಬೇಕು ಎಂದು ಆಗ್ರಹಿಸಿದರು.

ಪ್ರತಿಭಟನಾ ಸ್ಥಳಕ್ಕೆ ಎಸಿ ಸಿ.ಡಿ.ಗೀತಾ ಅವರು ಆಗಮಿಸಿ, ಮನವಿ ಪತ್ರ ಸ್ವೀಕರಿಸಿದರು.

ಶಾಸಕ ಹಾಲಪ್ಪ ಆಚಾರ್‌, ಮಾಜಿ ಶಾಸಕರಾದ ಕೆ.ಶರಣಪ್ಪ, ದೊಡ್ಡನಗೌಡ ಪಾಟೀಲ್‌, ಬಿಜೆಪಿ ಜಿಲ್ಲಾಧ್ಯಕ್ಷ ವಿರೂಪಾಕ್ಷಪ್ಪ ಸಿಂಗನಾಳ, ಮುಖಂಡರಾದ ಅಮರೇಶ ಕರಡಿ, ನವೀನ್‌ ಗುಳಗಣ್ಣನವರ, ರಾಜು ಬಾಕಳೆ, ತೋಟಪ್ಪ ಕಾಮನೂರು, ಬಸವರಾಜ ಕೊಪ್ಪಳ, ಬಸವರಾಜ ಈಶ್ವರಗೌಡ, ಚಂದ್ರಕಾಂತ ನಾಯ್ಕ, ಪಾಲಾಕ್ಷಪ್ಪ ಗೂಗಾಡಿ, ಕರಿಯಪ್ಪ ಗೂಗಿನಮರಿ, ಗವಿಸಿದ್ದಪ್ಪ ಗೊರವರ, ಸೋಮನಗೌಡ ಸೋಂಪುರ, ಗಿರೀಶಾನಂದ ಜ್ಞಾನಸುಂದರ್‌ ಇದ್ದರು.

-----

ಮಳೆ ಕೊರತೆಯಿಂದ ಜನ ಗುಳೆ ಹೋಗುತ್ತಿದ್ದಾರೆ. ಜನರಿಗೆ ಉದ್ಯೋಗ ನೀಡಬೇಕು. ಅಲ್ಲದೇ ಜಾನುವಾರುಗಳಿಗೆ ಗೋಶಾಲೆ ಪ್ರಾರಂಭಿಸಬೇಕು. ಗ್ರಾಮೀಣ ಪ್ರದೇಶಗಳಲ್ಲಿ ಕುಡಿವ ನೀರಿನ ವ್ಯವಸ್ಥೆ, ಬರ ಪರಿಹಾರ ನೀಡಬೇಕು.

-ಪರಣ್ಣಮುನವಳ್ಳಿ, ಶಾಸಕ, ಗಂಗಾವತಿ

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ