ಆ್ಯಪ್ನಗರ

ನೇರ ನೇಮಕಾತಿಗೆ ಆಗ್ರಹಿಸಿ ಪ್ರತಿಭಟನೆ

ಹೊರಗುತ್ತಿಗೆ ರದ್ದುಪಡಿಸಿ, ನೇರ ನೇಮಕಾತಿ ಮಾಡಿಕೊಳ್ಳುವಂತೆ ಆಗ್ರಹಿಸಿ ಕಿಮ್ಸ್‌ ಸಿಬ್ಬಂದಿ ನೌಕರರ ಸಂಘದಿಂದ ಕಿಮ್ಸ್‌ ಡಿ ಗ್ರೂಪ್‌ ನೌಕರರು ಹಾಗೂ ಅವರ ಕುಟುಂಬಸ್ಥರು ಕೊಪ್ಪಳ ವೈದ್ಯಕೀಯ ವಿಜ್ಞಾನ ಸಂಸ್ಥೆ ಎದುರು ಗುರುವಾರ ಪ್ರತಿಭಟನೆ ನಡೆಸಿದರು.

Vijaya Karnataka 28 Sep 2018, 5:00 am
ಕೊಪ್ಪಳ : ಹೊರಗುತ್ತಿಗೆ ರದ್ದುಪಡಿಸಿ, ನೇರ ನೇಮಕಾತಿ ಮಾಡಿಕೊಳ್ಳುವಂತೆ ಆಗ್ರಹಿಸಿ ಕಿಮ್ಸ್‌ ಸಿಬ್ಬಂದಿ ನೌಕರರ ಸಂಘದಿಂದ ಕಿಮ್ಸ್‌ ಡಿ ಗ್ರೂಪ್‌ ನೌಕರರು ಹಾಗೂ ಅವರ ಕುಟುಂಬಸ್ಥರು ಕೊಪ್ಪಳ ವೈದ್ಯಕೀಯ ವಿಜ್ಞಾನ ಸಂಸ್ಥೆ ಎದುರು ಗುರುವಾರ ಪ್ರತಿಭಟನೆ ನಡೆಸಿದರು.
Vijaya Karnataka Web KPL-KPL27PHOTO11


ಮುಖಂಡರಾದ ಕೆ.ಬಿ.ಗೋನಾಳ ಮಾತನಾಡಿ, ಕಿಮ್ಸ್‌ ಪ್ರಾರಂಭವಾದಾಗಿನಿಂದ 124 ಡಿ ಗ್ರೂಪ್‌ ನೌಕರರು ಕೆಲಸ ಮಾಡುತ್ತಿದ್ದಾರೆ.

ಈವರೆಗೂ ಮೂಲ ಸೌಕರ್ಯ ಕಲ್ಪಿಸಿಲ್ಲ. ಶುಚಿಗೊಳಿಸುವ ಕೆಲಸ, ಶವಾಗಾರ, ಲ್ಯಾಬ್‌ ಸೇರಿದಂತೆ ನಾನಾ ವಿಭಾಗದಲ್ಲಿ ಕೆಲಸ ನಿರ್ವಹಿಸುತ್ತಿದ್ದೇವೆ. ಕೆಲವರು ಪದವಿ ಶಿಕ್ಷಣ ಮಾಡಿಕೊಂಡಿದ್ದಾರೆ. ನಿರಂತರ ಸೇವೆ ಸಲ್ಲಿಸಿದರೂ ಮೇಲಧಿಕಾರಿಗಳು ಕೆಲಸದಿಂದ ತೆಗೆಯುತ್ತೇವೆ ಎಂದು ಹೆದರಿಕೆ ಹಾಕುತ್ತಿದ್ದಾರೆ. ಕೆಲಸ ನಂಬಿ ಬದುಕುತ್ತಿರುವ ನಮ್ಮ ಕುಟುಂಬವು ಆತಂಕದಲ್ಲಿ ದಿನ ಕಳೆಯುವಂತಾಗಿದೆ. ಮೂರು ವರ್ಷದಿಂದ ಸೇವೆ ಸಲ್ಲಿಸುತ್ತಿದ್ದು, ನಮ್ಮ ಸೇವೆ ಪರಿಗಣಿಸಿ ಕಾಯಂಗೊಳಿಸಬೇಕು ಎಂದು ಆಗ್ರಹಿಸಿದರು.

ಸರಕಾರ ಪೌರ ಕಾರ್ಮಿಕರನ್ನು ನೇರ ನೇಮಕಾತಿ ಮಾಡಿಕೊಂಡಿದೆ. ಅಲ್ಲದೇ ಕಿಮ್ಸ್‌ ನಿರ್ದೇಶಕರು ಸ್ಟಾಫ್‌ ನರ್ಸ್‌ಗಳನ್ನು ನೇರ ನೇಮಕ ಮಾಡಿಕೊಂಡಿದ್ದಾರೆ. ಅದರಂತೆ ನಮ್ಮನ್ನು ನೇರ ನೇಮಕಾತಿ ಮಾಡಿಕೊಳ್ಳಬೇಕು. ಉದ್ಯೋಗ ಭದ್ರತೆ ನೀಡಬೇಕು. ಸರಕಾರ ನಮ್ಮ ಬೇಡಿಕೆ ಈಡೇರಿಸಬೇಕು ಎಂದು ಒತ್ತಾಯಿಸಿದರು.

ಮುಖಂಡರಾದ ಕೆ.ಬಿ.ಗೋನಾಳ, ಮೂಕಪ್ಪ ಮೇಸಿ, ರತ್ನಮ್ಮ ಇದ್ದರು.


ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ