ಆ್ಯಪ್ನಗರ

ಬಾಕಿ ವೇತನ ಪಾವತಿಗೆ ಒತ್ತಾಯಿಸಿ ಪ್ರತಿಭಟನೆ

ನಗರಸಭೆಯಲ್ಲಿ ಹಂಗಾಮಿ ನೌಕರರರಾಗಿ ಸೇವೆ ಸಲ್ಲಿಸುತ್ತಿರುವ ಪೌರಕಾರ್ಮಿಕರು ಹಾಗೂ ಸಿಬ್ಬಂದಿಯ ಬಾಕಿ ವೇತನ ಪಾವತಿಗೆ ಆಗ್ರಹಿಸಿ ಹೈದರಾಬಾದ್‌ ಕರ್ನಾಟಕ ಪ್ರದೇಶ ಪೌರ ಸೇವಾ ನೌಕರರ ಸಂಘದ ಪದಾಧಿಕಾರಿಗಳು ನಗರಸಭೆ ಎದುರು ಸೋಮವಾರ ಪ್ರತಿಭಟನೆ ನಡೆಸಿದರು.

Vijaya Karnataka 21 Aug 2018, 5:00 am
ಗಂಗಾವತಿ : ನಗರಸಭೆಯಲ್ಲಿ ಹಂಗಾಮಿ ನೌಕರರರಾಗಿ ಸೇವೆ ಸಲ್ಲಿಸುತ್ತಿರುವ ಪೌರಕಾರ್ಮಿಕರು ಹಾಗೂ ಸಿಬ್ಬಂದಿಯ ಬಾಕಿ ವೇತನ ಪಾವತಿಗೆ ಆಗ್ರಹಿಸಿ ಹೈದರಾಬಾದ್‌ ಕರ್ನಾಟಕ ಪ್ರದೇಶ ಪೌರ ಸೇವಾ ನೌಕರರ ಸಂಘದ ಪದಾಧಿಕಾರಿಗಳು ನಗರಸಭೆ ಎದುರು ಸೋಮವಾರ ಪ್ರತಿಭಟನೆ ನಡೆಸಿದರು.
Vijaya Karnataka Web KPL-KPL20CM02


ಸಂಘಟನೆ ತಾಲೂಕು ಅಧ್ಯಕ್ಷ ರಮೇಶ ಮಾತನಾಡಿ, ನಗರಸಭೆಯಲ್ಲಿ ಕಳೆದ 25 ವರ್ಷಗಳಿಂದ ಹಂಗಾಮಿಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಆದರೆ ಸರಕಾರದಿಂದ ಯಾವುದೇ ಸೌಲಭ್ಯ ದೊರಕಿಲ್ಲ. ನೌಕರರಿಗೆ ಸೇವಾ ಭದ್ರತೆ ನೀಡಿಲ್ಲ. ಅಲ್ಲದೇ ನಾಲ್ಕೈದು ತಿಂಗಳಿಂದ ವೇತನ ನೀಡಿಲ್ಲ. ನೌಕರರು ಸಂಕಷ್ಟದಲಿದ್ದಾರೆ. ವೇತನ ಪಾವತಿಸಿ ಎಂದು ಎಂದು ಪೌರಾಯುಕ್ತರಿಗೆ ಕೇಳಿದರೆ ಕ್ಯಾರೆ ಎನ್ನುತ್ತಿಲ್ಲ ಎಂದು ದೂರಿದರು.

ಬಾಕಿ ವೇತನ ಪಾವತಿಸಬೇಕು. ಕಾರ್ಮಿಕರಿಗೆ 3,500 ರೂ. ವಿಶೇಷ ಭತ್ಯೆ ನೀಡಬೇಕು. ಪೌರಕಾರ್ಮಿಕರಿಗೆ ವೈದ್ಯಕೀಯ ವೆಚ್ಚ ನೀಡಬೇಕು. ವಿಶೇಷ ರಜೆಗಳಿಗೆ ವೇತನ ಸೇರಿದಂತೆ ನಾನಾ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಆಗ್ರಹಿಸಿದರು.

ನಗರಸಭೆಯಲ್ಲಿ ಹಂಗಾಮಿ ನೌಕರರಾದ ರಗಡಪ್ಪ, ಗುರುರಾಜ ದಾಸನಾಳ, ಕನಕರಾಯ, ಖಾಸಿಂಸಾಬ್‌, ಮಲ್ಲಮ್ಮ, ಹುಲಿಗೆಮ್ಮ, ಪಂಪಾಪತಿ ಇದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ