ಆ್ಯಪ್ನಗರ

ಬಾಕಿ ವೇತನ ನೀಡಲು ಆಗ್ರಹಿಸಿ ಪ್ರತಿಭಟನೆ

ಬಾಕಿ ವೇತನ ನೀಡಲು ಆಗ್ರಹಿಸಿ ಗುತ್ತಿಗೆ ಪೌರಕಾರ್ಮಿಕರು ನಗರಸಭೆ ಎದುರು ಶನಿವಾರ ಪ್ರತಿಭಟನೆ ನಡೆಸಿದರು.

Vijaya Karnataka 16 Sep 2018, 5:00 am
ಗಂಗಾವತಿ : ಬಾಕಿ ವೇತನ ನೀಡಲು ಆಗ್ರಹಿಸಿ ಗುತ್ತಿಗೆ ಪೌರಕಾರ್ಮಿಕರು ನಗರಸಭೆ ಎದುರು ಶನಿವಾರ ಪ್ರತಿಭಟನೆ ನಡೆಸಿದರು.
Vijaya Karnataka Web KPL-KPL15CM10


ಕಾರ್ಮಿಕ ಮುಖಂಡ ಜೆ.ಭಾರದ್ವಾಜ ಮಾತನಾಡಿ, ನಗರಸಭೆಯಲ್ಲಿ ಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುತ್ತಿರುವ ಪೌರಕಾರ್ಮಿಕರ 8 ತಿಂಗಳಿನಿಂದ ವೇತನ ನೀಡಿಲ್ಲ. ನಗರಸಭೆಯಲ್ಲಿ ಗುತ್ತಿಗೆ ಆಧಾರದ ಮೇಲೆ 100ಕ್ಕೂ ಹೆಚ್ಚು

ಪೌರ ಕಾರ್ಮಿಕರು ಸೇವೆ ಸಲ್ಲಿಸುತ್ತಿದ್ದಾರೆ. ಆದರೆ ಅಂದಾಜು 8 ತಿಂಗಳಿನಿಂದ ವೇತನ ನೀಡಿಲ್ಲ. ವೇತನ ನೀಡಲು ನಗರಸಭೆ ಅಧಿಕಾರಿಗಳು ಮುಂದಾಗಿಲ್ಲ. ನಗರಸಭೆಯಲ್ಲಿ ಅನುದಾನ ಕೊರತೆ ಇದೆ. ಸದ್ಯ ವೇತನ ನೀಡಲು ಸಾಧ್ಯ ಇಲ್ಲ ಎಂದು ಹೇಳುತ್ತಿದ್ದಾರೆ. ವೇತನ ನೀಡದ ಪರಿಣಾಮ ಕುಟುಂಬ ನಿರ್ವಹಣೆ ಕಾರ್ಮಿಕರು ಪರದಾಡುವಂತಾಗಿದೆ. ಮಕ್ಕಳ ವಿದ್ಯಾಭ್ಯಾಸಕ್ಕೆ ಸಮಸ್ಯೆ ಉಂಟಾಗಿದೆ. ಕೂಡಲೇ ಜಿಲ್ಲಾಧಿಕಾರಿಗಳು, ಪೌರ ಕಾರ್ಮಿಕರ ಬಾಕಿ ವೇತನ ನೀಡಬೇಕು ಎಂದು ಆಗ್ರಹಿಸಿದರು.

ಕಾರ್ಮಿಕರಾದ ಪರಶುರಾಮ, ಲಕ್ಷ ್ಮಣ, ಹುಲುಗೇಶ, ಬುಡ್ಡಪ್ಪ, ಹುಲಿಗೆಮ್ಮ, ದುರುಗಮ್ಮ, ನಾಗಮ್ಮ, ಯಂಕೋಬಪ್ಪ ಇದ್ದರು.


ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ