ಆ್ಯಪ್ನಗರ

ಆಸ್ಪತ್ರೆ ಸಿಬ್ಬಂದಿಗೆ ಸಾರ್ವಜನಿಕರ ತರಾಟೆ

ಇಲ್ಲಿನ ಸರಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದ ಸಿಬ್ಬಂದಿಯ ವರ್ತನೆಗೆ ಬೇಸತ್ತ ರೋಗಿಗಳು, ಸಿಬ್ಬಂದಿಯನ್ನು ಶುಕ್ರವಾರ ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಂಡರು.

Vijaya Karnataka 29 Oct 2017, 4:18 pm

ಮುದೇನೂರು: ಇಲ್ಲಿನ ಸರಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದ ಸಿಬ್ಬಂದಿಯ ವರ್ತನೆಗೆ ಬೇಸತ್ತ ರೋಗಿಗಳು, ಸಿಬ್ಬಂದಿಯನ್ನು ಶುಕ್ರವಾರ ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಂಡರು.

ಯಾರೂ ಇಲ್ಲದ್ದರಿಂದ ಚಿಕಿತ್ಸೆ ನೀಡಲು ಆಸ್ಪತ್ರೆಗೆ ಬರುವಂತೆ ಮನೆಗೆ ತೆರಳಿ ಕೋರಿದರೆ ಆರೋಗ್ಯ ಇಲಾಖೆ ಸಿಬ್ಬಂದಿ ಸ್ಪಂದಿಸಿಲ್ಲ ಎಂದು ದೂರಿದರು. ಸ್ಥಳೀಯ ಗೋವಿಂದಪ್ಪ ಉಳ್ಳಾಗಡ್ಡಿ ವ್ಯವಸ್ಥೆ ಬಗ್ಗೆ ಬೇಸರ ವ್ಯಕ್ತಪಡಿಸಿದರು. ರೋಗಿಯ ಸಂಬಂಧಿಯೊಬ್ಬರಿಂದ ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿದ ಸ್ಥಳೀಯ ಗ್ರಾ.ಪಂ.ಸದಸ್ಯ ಆದಪ್ಪ ಎಸ್‌.ಉಳ್ಳಾಗಡ್ಡಿ, ದೂರವಾಣಿ ಮೂಲಕ ಸಮಸ್ಯೆ ಬಗ್ಗೆ ಪ್ರಸ್ತಾಪಿಸಿದಾಗಲೂ ವೈದ್ಯಾಧಿಕಾರಿ ಡಾ.ನೀಲಪ್ಪ ಕಟ್ಟಿಮನಿ ಉಡಾಫೆ ಉತ್ತರ ನೀಡಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಇಲ್ಲಿನ ಸಿಬ್ಬಂದಿ ಆಡಿದ್ದೇ ಆಟವಾಗಿದ್ದು, ಸಾರ್ವಜನಿಕರಿಗೆ ತುಂಬಾ ತೊಂದರೆಯಾಗುತ್ತಿದೆ. ಈ ಬಗ್ಗೆ ಡಿಎಚ್‌ಒ ಅವರಿಗೆ ದೂರು ನೀಡಲಾಗುತ್ತದೆ ಎಂದರು. ಸದಸ್ಯರೊಂದಿಗೆ ರೋಗಿಗಳೆಲ್ಲ ಸೇರಿ ಆಸ್ಪತ್ರೆ ಬಾಗಿಲು ಮುಚ್ಚಿ, ಅರ್ಧಗಂಟೆ ಕಾದು ಕುಳಿತರು. ಬಳಿಕ ಆಸ್ಪತ್ರೆ ಸಿಬ್ಬಂದಿ ಆಗಮಿಸಿ ತಪ್ಪೊಪ್ಪಿಕೊಂಡರು. ಇನ್ಮುಂದೆ ಹೀಗಾಗದಂತೆ ಎಚ್ಚರವಹಿಸಲಾಗುವುದು ಎಂದು ಭರವಸೆ ನೀಡಿದರು. ಸ್ಥಳದಲ್ಲಿದ್ದ ಜನರು ಪರಿಸ್ಥಿತಿ ಮರುಕಳಿಸಿದರೆ ಮೇಲಧಿಕಾರಿಗಳಿಗೆ ದೂರು ನೀಡಲಾಗುತ್ತದೆ ಎಂದು ಎಚ್ಚರಿಕೆ ನೀಡಿ, ಆಸ್ಪತ್ರೆ ಬಾಗಿಲು ತೆರೆದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ