ಆ್ಯಪ್ನಗರ

ಉದ್ಯೋಗ ಭದ್ರತೆಗೆ ಆಗ್ರಹಿಸಿ ಮನವಿ

ಕೇಂದ್ರ ಹಾಗೂ ರಾಜ್ಯ ಸರಕಾರಗಳು ಅನುಸರಿಸುತ್ತಿರುವ ಕಾರ್ಮಿಕ ವಿರೋಧಿ ನೀತಿ ಖಂಡಿಸಿ ಹಾಗೂ ಪೌರ ಕಾರ್ಮಿಕರಿಗೆ ಉದ್ಯೋಗ ಭದ್ರತೆಗೆ ಆಗ್ರಹಿಸಿ ಭಾರತ ಕಮ್ಯುನಿಸ್ಟ್‌ ಪಕ್ಷ ದ ಕಾರ್ಯಕರ್ತರು ನಗರದ ಪ್ರಮುಖ ವೃತ್ತಗಳಲ್ಲಿ ಶುಕ್ರವಾರ ರಾರ‍ಯಲಿ ನಡೆಸಿ, ತಹಸೀಲ್ದಾರ್‌ ವೀರೇಶ ಬಿರಾದಾರಿಗೆ ಮನವಿ ಸಲ್ಲಸಿದರು.

Vijaya Karnataka 29 Sep 2018, 5:00 am
ಗಂಗಾವತಿ : ಕೇಂದ್ರ ಹಾಗೂ ರಾಜ್ಯ ಸರಕಾರಗಳು ಅನುಸರಿಸುತ್ತಿರುವ ಕಾರ್ಮಿಕ ವಿರೋಧಿ ನೀತಿ ಖಂಡಿಸಿ ಹಾಗೂ ಪೌರ ಕಾರ್ಮಿಕರಿಗೆ ಉದ್ಯೋಗ ಭದ್ರತೆಗೆ ಆಗ್ರಹಿಸಿ ಭಾರತ ಕಮ್ಯುನಿಸ್ಟ್‌ ಪಕ್ಷ ದ ಕಾರ್ಯಕರ್ತರು ನಗರದ ಪ್ರಮುಖ ವೃತ್ತಗಳಲ್ಲಿ ಶುಕ್ರವಾರ ರಾರ‍ಯಲಿ ನಡೆಸಿ, ತಹಸೀಲ್ದಾರ್‌ ವೀರೇಶ ಬಿರಾದಾರಿಗೆ ಮನವಿ ಸಲ್ಲಸಿದರು.
Vijaya Karnataka Web KPL-KPL27CM07


ಕಾರ್ಮಿಕ ಮುಖಂಡ ಜೆ.ಭಾರಧ್ವಾಜ್‌ ಮಾತನಾಡಿ, ರಾಜ್ಯದಲ್ಲಿರುವ ಪೌರ ಕಾರ್ಮಿಕರಿಗೆ ಹಾಗೂ ಕಾರ್ಮಿಕರಿಗೆ ಕೇಂದ್ರ ಹಾಗೂ ರಾಜ್ಯ ಸರಕಾರ ಜೀವವಿಮೆ, ಪಿಎಫ್‌ ಹಾಗೂ ಉದ್ಯೋಗ ಭದ್ರತೆ ನೀಡಿಲ್ಲ. ಕಾರ್ಮಿಕ ವಿರೋಧಿ ನೀತಿಯನ್ನು ಅನುಸರಿಸುತ್ತಿದೆ. ಕಾರ್ಮಿಕರಿಗೆ ಉದ್ಯೋಗದಲ್ಲಿ ಭವಿಷ್ಯ ವಿಲ್ಲದಂತೆಯಾಗಿದೆ. ಕಾರ್ಮಿಕರು ಹೋರಾಟಕ್ಕೆ ಇಳಿಯುವ ಮೊದಲೇ ರಾಜ್ಯ ಸರಕಾರ ಎಚ್ಚೆತ್ತುಕೊಂಡು ಕಾರ್ಮಿಕರ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಆಗ್ರಹಿಸಿದರು.

ಕನಿಷ್ಠ ವೇತನ, ಜೀವನ ಭದ್ರತೆ, ಗುಡಿ ಕೈಗಾರಿಕೆ ಕಾರ್ಮಿಕರಿಗೆ ನಿವೇಶನ ಹಂಚಿಕೆ, ಕೃಷಿ ಕಾರ್ಮಿಕರು ಮೃತ ಪಟ್ಟರೆ 10 ಲಕ್ಷ ರೂ. ಪರಿಹಾರ, ಬೀದಿ ವ್ಯಾಪಾರಿಗಳಿಗೆ ಕಲ್ಯಾಣ ಸಮಿತಿ ರಚಿಸಬೇಕು ಎಂದು ಒತ್ತಾಯಿಸಿದರು.

ಎಐಸಿಸಿಟಿಯು ಸಂಘಟನೆಯ ರಾಜ್ಯ ಪ್ರಧಾನ ಕಾರ್ಯದರ್ಶಿ ಮೈತ್ರಿಯಾ, ಜಿಲ್ಲಾಧ್ಯಕ್ಷ ಡಿ.ವಿಜಯ್‌, ಮುಖಂಡರಾದ ಕೆಂಚಪ್ಪ ಹಿರೇಖೇಡ್‌, ಷಣ್ಮುಖ, ಪರಶುರಾಮ, ರಮೇಶ, ರೇಣುಕಾ, ಕವಿತಾ ಇದ್ದರು.


ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ