ಆ್ಯಪ್ನಗರ

ರೇಷ್ಮೆ ಬೆಳೆಗಾರರಿಗೆ ಸೌಕರ್ಯ ಕಲ್ಪಿಸಲು ಮನವಿ

ತಾಲೂಕಿನ ರೇಷ್ಮೆ ಬೆಳೆಗಾರರಿಗೆ ಮೂಲ ಸೌಕರ್ಯ ಕಲ್ಪಿಸಬೇಕು ಎಂದು ಒತ್ತಾಯಿಸಿ, ತಾಲೂಕು ರೇಷ್ಮೆ ಬೆಳೆಗಾರರ ಸಂಘದಿಂದ ಶಾಸಕ ಹಾಲಪ್ಪ ಆಚಾರ್‌ ಅವರಿಗೆ ಇತ್ತೀಚೆಗೆ ಮನವಿಪತ್ರ ಸಲ್ಲಿಸಲಾಯಿತು.

Vijaya Karnataka 27 Jun 2018, 5:00 am
ಯಲಬುರ್ಗಾ : ತಾಲೂಕಿನ ರೇಷ್ಮೆ ಬೆಳೆಗಾರರಿಗೆ ಮೂಲ ಸೌಕರ್ಯ ಕಲ್ಪಿಸಬೇಕು ಎಂದು ಒತ್ತಾಯಿಸಿ, ತಾಲೂಕು ರೇಷ್ಮೆ ಬೆಳೆಗಾರರ ಸಂಘದಿಂದ ಶಾಸಕ ಹಾಲಪ್ಪ ಆಚಾರ್‌ ಅವರಿಗೆ ಇತ್ತೀಚೆಗೆ ಮನವಿಪತ್ರ ಸಲ್ಲಿಸಲಾಯಿತು.
Vijaya Karnataka Web request the comfort of silk growers
ರೇಷ್ಮೆ ಬೆಳೆಗಾರರಿಗೆ ಸೌಕರ್ಯ ಕಲ್ಪಿಸಲು ಮನವಿ


ಸಂಘದ ಅಧ್ಯಕ್ಷ ಅಮರಪ್ಪ ಕಲಬುರಗಿ ಮಾತನಾಡಿ, ತಾಲೂಕಿನ ಬಹುತೇಕ ಪ್ರದೇಶದಲ್ಲಿ ರೈತರು ರೇಷ್ಮೆ ಬೆಳೆಯುತ್ತಿದ್ದಾರೆ. ತಾಲೂಕು ಕೇಂದ್ರದಲ್ಲಿ ಕಾರ್ಯ ನಿರ್ವಹಿಸುವ ರೇಷ್ಮೆ ವಿಸ್ತರಣಾ ಕೇಂದ್ರದಲ್ಲಿ ಸಿಬ್ಬಂದಿ ಕೊರತೆ ಇದೆ. ಇದರಿಂದಾಗಿ ರೈತರಿಗೆ ಸಮರ್ಪಕ ಮಾಹಿತಿ ಸಿಗುತ್ತಿಲ್ಲ. ತಾಲೂಕಿನಲ್ಲಿ ಬೆಳೆದ ರೇಷ್ಮೆಗೆ ಸ್ಥಳೀಯವಾಗಿ ಮಾರುಕಟ್ಟೆ ವ್ಯವಸ್ಥೆ ಇಲ್ಲದ್ದರಿಂದ ಅನಿವಾರ್ಯವಾಗಿ ರಾಮನಗರಕ್ಕೆ ಮಾರಾಟಕ್ಕೆ ಒಯ್ಯಬೇಕಿದೆ. ಹಾಗಾಗಿ ಸಾಗಣೆ ಖರ್ಚು ಹೊರೆಯಾಗಿ ಪರಿಣಮಿಸಿದೆ. ಅತಿವೃಷ್ಟಿ ಮತ್ತು ಅನಾವೃಷ್ಟಿಯಿಂದಾಗಿ ರೈತರು ಬೆಳೆನಷ್ಟ ಅನುಭವಿಸಿದರೂ ಪರಿಹಾರ ಮತ್ತು ವಿಮಾ ಸೌಕರ್ಯ ಕಲ್ಪಿಸಿಲ್ಲ. ಸರಕಾರಗಳು ರೇಷ್ಮೆ ಬೆಳೆಗಾರರನ್ನು ಉತ್ತೇಜಿಸುವ ದೃಷ್ಟಿಯಿಂದ ಸವಲತ್ತು ಒದಗಿಸಬೇಕು ಎಂದು ಮನವಿ ಮಾಡಿದರು.

ಮನವಿಪತ್ರ ಸ್ವೀಕರಿಸಿ ಮಾತನಾಡಿದ ಶಾಸಕ ಹಾಲಪ್ಪ ಆಚಾರ್‌, ರೈತರ ಸಮಸ್ಯೆ ಪರಿಹಾರಕ್ಕೆ ಪ್ರಾಮಾಣಿಕವಾಗಿ ಸ್ಪಂದಿಸುವೆ. ರೇಷ್ಮೆ ವಿಸ್ತರಣಾ ಕೇಂದ್ರದಲ್ಲಿ ಕೊರತೆ ಇರುವ ಸಿಬ್ಬಂದಿ ಭರ್ತಿಗೆ ಸರಕಾರದ ಗಮನ ಸೆಳೆಯುವುದಾಗಿ ಭರವಸೆ ನೀಡಿದರು. ರೈತ ಮುಖಂಡರಾದ ಶಿವನಗೌಡ ಬನ್ನಪ್ಪಗೌಡ್ರ, ಭೀಮಪ್ಪ ಕರಮುಡಿ,ಸಂಗಪ್ಪ ಬಿಜಕಲ್‌, ಶರಣಪ್ಪ ಇತರರಿದ್ದರು.


ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ