ಆ್ಯಪ್ನಗರ

ಸಿಎಂ ಸಿದ್ದರಾಮಯ್ಯ ಸಮಾವೇಶ: ಹಳಸಿದ ಅನ್ನ ತಿಂದು ನೂರಾರು ಕುರಿಗಳ ಸಾವು!

ಮುಖ್ಯಮಂತ್ರಿ ಸಿದ್ದರಾಮಯ್ಯನವರ ಕಾರ್ಯಕ್ರಮದಲ್ಲಿ ಮಾಡಿಸಿದ್ದ ಅನ್ನ ತಿಂದು 100ಕ್ಕೂ ಅಧಿಕ ಕುರಿಗಳು ಸಾವನ್ನಪ್ಪಿರುವ ಘಟನೆ ಕೊಪ್ಪಳ ನಗರದ ಹೊಸಪೇಟೆ ರಸ್ತೆಯಲ್ಲಿ ನಡೆದಿದೆ.

Vijaya Karnataka 28 Sep 2017, 12:50 pm
ಕೊಪ್ಪಳ: ಮುಖ್ಯಮಂತ್ರಿ ಸಿದ್ದರಾಮಯ್ಯನವರ ಕಾರ್ಯಕ್ರಮದಲ್ಲಿ ಮಾಡಿಸಿದ್ದ ಅನ್ನ ತಿಂದು 100ಕ್ಕೂ ಅಧಿಕ ಕುರಿಗಳು ಸಾವನ್ನಪ್ಪಿರುವ ಘಟನೆ ಕೊಪ್ಪಳ ನಗರದ ಹೊಸಪೇಟೆ ರಸ್ತೆಯಲ್ಲಿ ನಡೆದಿದೆ.
Vijaya Karnataka Web sheeps died in koppal
ಸಿಎಂ ಸಿದ್ದರಾಮಯ್ಯ ಸಮಾವೇಶ: ಹಳಸಿದ ಅನ್ನ ತಿಂದು ನೂರಾರು ಕುರಿಗಳ ಸಾವು!


ಸೆಪ್ಟೆಂಬರ್ 22ರಂದು ಫಲಾನುಭವಿಗಳ ಬೃಹತ್ ಸಮಾವೇಶ ಹಾಗೂ 1500 ಕೋಟಿ ರೂಪಾಯಿ ಮೊತ್ತದ ಕಾಮಗಾರಿಗಳಿಗೆ ಚಾಲನೆ ಮತ್ತು ಶಂಕುಸ್ಥಾಪನೆ ಕಾರ್ಯಕ್ರಮ ಏರ್ಪಡಿಸಲಾಗಿತ್ತು. 996 ಸಾರಿಗೆ ಸಂಸ್ಥೆ ಬಸ್ ಹಾಗೂ ಸಾವಿರಾರು ಕಾರುಗಳಲ್ಲಿ ಸಮಾವೇಶಕ್ಕೆ ಬಂದಿದ್ದ ಫಲಾನುಭವಿಗಳಿಗೆ ಊಟದ ವ್ಯವಸ್ಥೆ ಕಲ್ಪಿಸಲಾಗಿತ್ತು. ಫಲಾನುಭವಿಗಳು ಊಟ ಮಾಡಿಬಿಟ್ಟ ಹಾಗೂ ಉಳಿದ ಅನ್ನವನ್ನೆಲ್ಲ ಸ್ಪಚ್ಛಗೊಳಿಸದೇ ವೇದಿಕೆ ಪಕ್ಕದಲ್ಲಿಯೇ ಬಿಸಾಡಿದರು. ಈ ಹಳಸಿದ ಅನ್ನ ತಿಂದು ಕುರಿಗಳು ಸಾವನ್ನಪ್ಪಿವೆ ಎಂದು ಕುರಿಗಾಹಿಗಳು ಆರೋಪಿಸಿದ್ದಾರೆ.

ಬೆಳಗಾವಿ ಜಿಲ್ಲೆ ಚಿಕ್ಕೋಡಿ ತಾಲೂಕಿನ ಶಿರಗಾವ್ ಗ್ರಾಮದ ಸೋಮಣ್ಣ ಪೂಜಾರ ಎಂಬುವರಿಗೆ ಸೇರಿದ ಕುರಿಗಳು ಸಾವನ್ನಪ್ಪಿವೆ. ಕುರಿ ಮೇಯಿಸಲು ಕುರಿಗಾಹಿ ಸೋಮಣ್ಣ ಅವರು ಕೊಪ್ಪಳಕ್ಕೆ ಆಗಮಿಸಿದ್ದರು. ಕಳೆದ ಎರಡು ದಿನಗಳಿಂದ ಕುರಿಗಳು ಸಾವುತ್ತಿರುವ ಕಾರಣ ಕುರಿಗಾಹಿ ಕುಟುಂಬ ಕಂಗಾಲಾಗಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ