ಕೊಪ್ಪಳ: ಎಸ್. ಎಂ. ಕೃಷ್ಣ ಅವರು ರಾಜೀನಾಮೆ ನೀಡಿದ್ದರಿಂದ ಪಕ್ಷಕ್ಕೆ ಹಾನಿಯಾಗಿದೆ. ಆದರೆ ಮುಂಬರುವ ದಿನಗಳಲ್ಲಿ ಪಕ್ಷವನ್ನು ಸಂಘಟಿಸಿ ಅಧಿಕಾರಕ್ಕೆ ತರಲಾಗುವುದು ಎಂದು ಗೃಹ ಸಚಿವ ಡಾ.ಜಿ ಪರಮೇಶ್ವರ ಹೇಳಿದರು.
ಖಾಸಗಿ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು, ಮುಂದಿನ ಚುನಾವಣೆಗೆ ಇನ್ನೂ ಕಾಲಾವಕಾಶವಿದೆ. ಬರುವ ದಿನಗಳಲ್ಲಿ ಪಕ್ಷವನ್ನು ಇನ್ನಷ್ಟು ಬಲಗೊಳಿಸುತ್ತೇವೆ.
ಒಳಮೀಸಲಿನಲ್ಲಿ ಮಾದಿಗ ಹಾಗೂ ಛಲವಾದಿ ಸಮುದಾಯಗಳನ್ನು ಒಳಪಡಿಸುವ ನಿಟ್ಟಿನಲ್ಲಿ ಸರಕಾರ ಅಂತಿಮ ನಿರ್ಧಾರಗಳನ್ನು ತೆಗೆದುಕೊಳ್ಳಲಿದೆ. ಸಾಮೂಹಿಕ ನಾಯಕತ್ವದಲ್ಲಿ ಮುಂದಿನಚುನಾವಣೆ ಎದುರಿಸುತ್ತೇವೆ. ಕಾಂಗ್ರೆಸ್ ಅಧಿಕಾರಕ್ಕೆ ಬರುವುದು ಶತಸಿದ್ದ ಎಂದರು.
ಜೆಡಿಎಸ್ ನಿಂದ ಉಚ್ಛಾಟಿರಾಗಿರುವ ಶಾಸಕರನ್ನು ಕಾಂಗ್ರೆಸ್ಗೆ ಸೇರಿಸಿಕೊಳ್ಳುವ ಬಗ್ಗೆ ಪಕ್ಷದಲ್ಲಿ ಚರ್ಚೆಯಾಗಿಲ್ಲ. ಕಾಂಗ್ರೆಸ್ನ ಹಿರಿಯ ನಾಯಕರ ಅಭಿಪ್ರಾಯ ಅವರ ವೈಯಕ್ತಿಕ ಅಭಿಪ್ರಾಯವಾಗಿದೆ. ರಾಜ್ಯದಲ್ಲಿ ಕುರುಬರ ಆಡಳಿತವಿದೆ ಎಂಬಜಾಫರ ಷರೀಫ್ ಅವರ ಹೇಳಿಕೆ ಅವರ ವೈಯಕ್ತಿಕ ಅಭಿಪ್ರಾಯ. ಎಸ್ ಎಂ ಕೃಷ್ಣ ಬಿಜೆಪಿಗೆ ಸೇರುವ ಬಗ್ಗೆ ಮಾಹಿತಿ ಇಲ್ಲ.
ಹೈ ಕ ಭಾಗದಲ್ಲಿ ಪೊಲೀಸ ನೇಮಕಾತಿ ಹಾಗೂ ಬಡ್ತಿಯಲ್ಲಿ ಯಾವುದೇ ಅನ್ಯಾಯವಾಗಿಲ್ಲ ಎಂದು ಪರಮೇಶ್ವರ್ ಹೇಳಿದರು.
ಖಾಸಗಿ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು, ಮುಂದಿನ ಚುನಾವಣೆಗೆ ಇನ್ನೂ ಕಾಲಾವಕಾಶವಿದೆ. ಬರುವ ದಿನಗಳಲ್ಲಿ ಪಕ್ಷವನ್ನು ಇನ್ನಷ್ಟು ಬಲಗೊಳಿಸುತ್ತೇವೆ.
ಒಳಮೀಸಲಿನಲ್ಲಿ ಮಾದಿಗ ಹಾಗೂ ಛಲವಾದಿ ಸಮುದಾಯಗಳನ್ನು ಒಳಪಡಿಸುವ ನಿಟ್ಟಿನಲ್ಲಿ ಸರಕಾರ ಅಂತಿಮ ನಿರ್ಧಾರಗಳನ್ನು ತೆಗೆದುಕೊಳ್ಳಲಿದೆ. ಸಾಮೂಹಿಕ ನಾಯಕತ್ವದಲ್ಲಿ ಮುಂದಿನಚುನಾವಣೆ ಎದುರಿಸುತ್ತೇವೆ. ಕಾಂಗ್ರೆಸ್ ಅಧಿಕಾರಕ್ಕೆ ಬರುವುದು ಶತಸಿದ್ದ ಎಂದರು.
ಜೆಡಿಎಸ್ ನಿಂದ ಉಚ್ಛಾಟಿರಾಗಿರುವ ಶಾಸಕರನ್ನು ಕಾಂಗ್ರೆಸ್ಗೆ ಸೇರಿಸಿಕೊಳ್ಳುವ ಬಗ್ಗೆ ಪಕ್ಷದಲ್ಲಿ ಚರ್ಚೆಯಾಗಿಲ್ಲ. ಕಾಂಗ್ರೆಸ್ನ ಹಿರಿಯ ನಾಯಕರ ಅಭಿಪ್ರಾಯ ಅವರ ವೈಯಕ್ತಿಕ ಅಭಿಪ್ರಾಯವಾಗಿದೆ. ರಾಜ್ಯದಲ್ಲಿ ಕುರುಬರ ಆಡಳಿತವಿದೆ ಎಂಬಜಾಫರ ಷರೀಫ್ ಅವರ ಹೇಳಿಕೆ ಅವರ ವೈಯಕ್ತಿಕ ಅಭಿಪ್ರಾಯ. ಎಸ್ ಎಂ ಕೃಷ್ಣ ಬಿಜೆಪಿಗೆ ಸೇರುವ ಬಗ್ಗೆ ಮಾಹಿತಿ ಇಲ್ಲ.
ಹೈ ಕ ಭಾಗದಲ್ಲಿ ಪೊಲೀಸ ನೇಮಕಾತಿ ಹಾಗೂ ಬಡ್ತಿಯಲ್ಲಿ ಯಾವುದೇ ಅನ್ಯಾಯವಾಗಿಲ್ಲ ಎಂದು ಪರಮೇಶ್ವರ್ ಹೇಳಿದರು.