ಆ್ಯಪ್ನಗರ

ಹನುಮ ಜನ್ಮ ಸ್ಥಳ ಅಂಜನಾದ್ರಿ ಬೆಟ್ಟದಲ್ಲಿ ವಿಶೇಷ ಪೂಜೆ, ಹೋಮ ಹವನ

ಮಳೆಯನ್ನು ಲೆಕ್ಕಿಸದೇ ಭಕ್ತ ಸಾಗರ ಹರಿದು ಬರುತ್ತಿದೆ. ಶ್ರೀಕೃಷ್ಣ ದೇವರಾಯನ ವಂಶಸ್ಥರು ಪೂಜೆಯಲ್ಲಿ ಭಾಗಿಯಾಗಿದ್ದಾರೆ. ಸುಮಾರು ಮೂರು ಗಂಟೆಗೂ ಅಧಿಕ ಸಮಯ ಹೋಮ, ಹವನ ಕಾರ್ಯ ನಡೆಯಿತು.

Vijaya Karnataka Web 5 Aug 2020, 12:35 pm
ಕೊಪ್ಪಳ: ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರಕ್ಕೆ ಭೂಮಿ ಪೂಜೆ ಹಿನ್ನೆಲೆಯಲ್ಲಿ ಶ್ರೀ ಆಂಜನೇಯ ಜನ್ಮ ಸ್ಥಳ‌ ಅಂಜನಾದ್ರಿ ಬೆಟ್ಟದಲ್ಲಿ ವಿಶೇಷ ಪೂಜೆ, ಹೋಮ ಹವನ ನಡೆಯಿತು.
Vijaya Karnataka Web ಅಂಜನಾದ್ರಿ ಬೆಟ್ಟ
ಅಂಜನಾದ್ರಿ ಬೆಟ್ಟ


ಗಂಗಾವತಿ ತಾಲೂಕಿನ ಆನೆಗೊಂದಿ ಬಳಿಯ ಅಂಜನಾದ್ರಿಯಲ್ಲಿ ರಾಮ ನಾಮ ಪಠಣ, ಹೋಮ-ಹವನ ನಡೆಯುತ್ತಿದೆ.

ಮಳೆಯನ್ನು ಲೆಕ್ಕಿಸದೇ ಭಕ್ತ ಸಾಗರ ಹರಿದು ಬರುತ್ತಿದೆ. ಶ್ರೀಕೃಷ್ಣ ದೇವರಾಯನ ವಂಶಸ್ಥರು ಪೂಜೆಯಲ್ಲಿ ಭಾಗಿಯಾಗಿದ್ದಾರೆ. ಸುಮಾರು ಮೂರು ಗಂಟೆಗೂ ಅಧಿಕ ಹೋಮ, ಹವನ ಕಾರ್ಯ ನಡೆಯುತ್ತಿದೆ.

ಅಂಜನಾದ್ರಿ ಬೆಟ್ಟದಲ್ಲಿ ವಿಶೇಷ ಹೋಮ


ರಾಮನ ಭಕ್ತ ಹನುಮನ ನಾಡಿನಲ್ಲಿ ಭಕ್ತರ ಪೂಜಾ ಸಂಭ್ರಮ ಎದ್ದುಕಾಣುತ್ತಿದೆ. ಅಂಜನಾದ್ರಿ ಬೆಟ್ಟ ಕೇಸರಿಮಯವಾಗಿದೆ. ಅಂಜನಾದ್ರಿ ಬೆಟ್ಟದಲ್ಲಿ ಮಂಗಳವಾರದಿಂದಲೇ ವಿಶೇಷ ಪೂಜೆ, ರಾಮನಾಮ ಪಠಣ ನಡೆಯುತ್ತಿದೆ. ನೂರಾರು ಮಂದಿ ಕಳೆದ ಮೂರು ದಿನಗಳಿಂದ ಕೊಪ್ಪಳದಲ್ಲಿ ಬೀಡು ಬಿಟ್ಟು ಅಂಜನಾದ್ರಿ ಬೆಟ್ಟದಲ್ಲಿ ವಿಶೇಷ ಪೂಜಾ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ