ಆ್ಯಪ್ನಗರ

ಸದೃಢ ಆರೋಗ್ಯಕ್ಕೆ ಕ್ರೀಡೆ ಸಹಕಾರಿ

ಸದೃಢ ಆರೋಗ್ಯಕ್ಕೆ ಕ್ರೀಡೆ ಸಹಕಾರಿಯಾಗಿದ್ದು, ವಿದ್ಯಾರ್ಥಿಗಳು ಪಠ್ಯದ ಜತೆಗೆ ಪಠ್ಯೇತರ ಚಟುವಟಿಕೆಗಳಲ್ಲಿ ಭಾಗವಹಿಸಬೇಕು ಎಂದು ಸಂಸದ ಸಂಗಣ್ಣ ಕರಡಿ ಹೇಳಿದರು.

Vijaya Karnataka 29 Sep 2018, 5:00 am
ಕೊಪ್ಪಳ : ಸದೃಢ ಆರೋಗ್ಯಕ್ಕೆ ಕ್ರೀಡೆ ಸಹಕಾರಿಯಾಗಿದ್ದು, ವಿದ್ಯಾರ್ಥಿಗಳು ಪಠ್ಯದ ಜತೆಗೆ ಪಠ್ಯೇತರ ಚಟುವಟಿಕೆಗಳಲ್ಲಿ ಭಾಗವಹಿಸಬೇಕು ಎಂದು ಸಂಸದ ಸಂಗಣ್ಣ ಕರಡಿ ಹೇಳಿದರು.
Vijaya Karnataka Web KPL-KPL28MGB01


ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಜಿಲ್ಲಾ ಪಂಚಾಯಿತಿ, ಸಾರ್ವಜನಿಕ ಶಿಕ್ಷ ಣ ಇಲಾಖೆ, ಪ್ರಾಥಮಿಕ ಹಾಗೂ ಪ್ರೌಢ ಶಾಲಾ ದೈಹಿಕ ಶಿಕ್ಷ ಕರ ಸಂಘಗಳ ಸಂಯುಕ್ತಾಶ್ರಯಲ್ಲಿ ಆಯೋಜಿಸಿದ್ದ ಜಿಲ್ಲಾ ಮಟ್ಟದ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳ ಬಾಲಕ, ಬಾಲಕಿಯರ ಕ್ರೀಡಾಕೂಟದಲ್ಲಿ ಧ್ವಜಾರೋಹಣ ನೆರವೇರಿಸಿ ಶುಕ್ರವಾರ ಮಾತನಾಡಿದರು. ಯುವಜನಾಂಗ ದುಶ್ಚಟಗಳಿಗೆ ದಾಸರಾಗಬಾರದು. ಸದೃಢ ಆರೋಗ್ಯ ಬೆಳೆಸಿಕೊಳ್ಳಬೇಕು. ಪ್ರತಿಯೊಬ್ಬ ವಿದ್ಯಾರ್ಥಿಗ ಕ್ರೀಡೆಯಲ್ಲಿ ಭಾಗವಹಿಸಬೇಕು ಎಂದು ಹೇಳಿದರು.

ಕ್ರೀಡೆ ಜೀವನದ ಅವಿಭಾಜ್ಯ ಅಂಗವಾಗಿದ್ದು, ಕೇಂದ್ರ ಸರಕಾರ ಕ್ರೀಡೆಗೆ ಆದ್ಯತೆ ನೀಡಿದೆ. ಇತ್ತೀಚೆಗೆ ನಡೆದ ಏಷನ್‌ ಕ್ರೀಡಾಕೂಟದಲ್ಲಿ 15 ಬಂಗಾರ, 24 ಬೆಳ್ಳಿ ಹಾಗೂ 34 ಕಂಚು ಪದಕಗಳನ್ನು ದೇಶದ ಕ್ರೀಡಾಪಟುಗಳು ಪಡೆದಿದ್ದಾರೆ. ಅಲ್ಲದೇ ಹೇಮದಾಸ ಎಂಬ ಕ್ರೀಡಾ ಪಟು ಒಬ್ಬ ಉತ್ತಮ ರನ್ನರ್‌ ಆಗಿ ಹೊರಹೊಮ್ಮಿದ್ದಾರೆ. ಆಳ್ವಾಸ ಶಿಕ್ಷ ಣ ಸಂಸ್ಥೆಯಲ್ಲಿ ಇತ್ತೀಚೆಗೆ ನಡೆದ 16 ವರ್ಷದೊಳಗಿನ ಅಥ್ಲೆಟಿಕ್ಸ್‌ ರಾಜ್ಯಮಟ್ಟದ ಕ್ರೀಡಾಕೂಟದ 2 ಸಾವಿರ ಮೀಟರ್‌ ಓಟದಲ್ಲಿ ಪ್ರಥಮ ಸ್ಥಾನ ಗಳಿಸಿದ ಜಿಲ್ಲಾ ಕ್ರೀಡಾ ವಸತಿ ಶಾಲೆಯ ಬಾಳಮ್ಮ ಮೇಟಿ ಅವರ ಪ್ರತಿಭೆಗೆ ಮೆಚ್ಚುಗೆ ವ್ಯಕ್ತಪಡಿಸಿದರು.

ಕ್ರೀಡೆಯಲ್ಲಿ ಭಾಗವಹಿಸಲು ಕೆಲ ವರ್ಗದವರು ಹಿಂದೆಮುಂದೆ ನೋಡುತ್ತಿದ್ದಾರೆ. ಬೇಧ -ಭಾವ ಮರೆತು ಕ್ರೀಡಾಕೂಟದಲ್ಲಿ ಕ್ರೀಡಾಪಟುಗಳು ಭಾಗವಹಿಸಬೇಕು ಎಂದು ಹೇಳಿದರು.

ಪ್ರಾಥಮಿಕ ಶಾಲಾ ಶಿಕ್ಷ ಕರ ಸಂಘದ ರಾಜ್ಯ ಉಪಾಧ್ಯಕ್ಷ ಶಂಭುಲಿಂಗನಗೌಡ ಪಾಟೀಲ್‌ ಮಾತನಾಡಿ, ರಾಜ್ಯ ಸರಕಾರ ಕ್ರೀಡೆಗೆ ಮೊದಲ ಆದ್ಯತೆ ನೀಡಿದೆ. ಕ್ರೀಡೆಗಾಗಿ ನಾನಾ ಯೋಜನೆಗಳನ್ನು ಜಾರಿಗೊಳಿಸಿದ್ದು, ಕ್ರೀಡಾಪಟುಗಳು ಸದುಪಯೋಗ ಪಡೆದುಕೊಳ್ಳಬೇಕು ಎಂದು ಹೇಳಿದರು.

ಡಿಡಿಪಿಐ ಬಿ. ಹನುಮಂತಪ್ಪ ಅಧ್ಯಕ್ಷತೆ ವಹಿಸಿದ್ದರು.

ಕರ್ನಾಟಕ ರಾಜ್ಯ ಪ್ರೌಢ ಶಾಲಾ ಸಹ ಶಿಕ್ಷ ಕರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ವೆಂಕಟೇಶ ಗೌಡರ, ಪ್ರಾಥಮಿಕ ಶಾಲಾ ಸಹ ಶಿಕ್ಷ ಕರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಶರಣೇಗೌಡ ಪೊಲೀಸ್‌ ಪಾಟೀಲ್‌, ಕ.ರಾ.ಸ.ನೌ. ಸಂಘದ ರಾಜ್ಯ ಕಾರ್ಯದರ್ಶಿ ಬೀರಪ್ಪ ಅಂಗಡಿ, ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ ಎಸ್‌.ಬಿ ಕುರಿ, ಪ್ರಾಥಮಿಕ ಶಾಲಾ ಸಹ ಶಿಕ್ಷ ಕರ ಸಂಘದ ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ ಶರಣಬಸವನಗೌಡ ಇದ್ದರು.

===

ಸದೃಢ ದೇಹ ಹಾಗೂ ಆರೋಗ್ಯಯುತ ಮನುಷ್ಯನಿಗೆ ಕ್ರೀಡೆ ಅತ್ಯವಶ್ಯಕವಾಗಿದ್ದು, ಎಲ್ಲರೂ ಕ್ರೀಡೆಯಲ್ಲಿ ತೊಡಗಿಸಿ ಕೊಳ್ಳಬೇಕು. ಯುವಜನಾಂಗ ಕ್ರೀಡಾಕೂಟದಲ್ಲಿ ಭಾಗವಹಿಸಬೇಕು.

ಸಂಗಣ್ಣ ಕರಡಿ,ಸಂಸದ, ಕೊಪ್ಪಳ



ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ