ಆ್ಯಪ್ನಗರ

ಸದನದಲ್ಲಿ ಹಕ್ಕು ಚ್ಯುತಿ ಮಂಡಿಸುವೆ: ಶಾಸಕ

ಜಿಲ್ಲಾ ಉಸ್ತುವಾರಿ ಸಚಿವ ಕ್ಷೇತ್ರಕ್ಕೆ ಭೇಟಿ ನೀಡುವಾಗ ಅಲ್ಲಿನ ಶಾಸಕರಿಗೆ ಮಾಹಿತಿ ನೀಡಬೇಕೆನ್ನುವ ಶಿಷ್ಟಾಚಾರವನ್ನು ಜಿಲ್ಲಾ ಉಸ್ತುವಾರಿ ಸಚಿವ ಬಸವರಾಜ ರಾಯರಡ್ಡಿ ಮರೆತಿದ್ದು, ಮುಂದಿನ ಅಧಿವೇಶನದಲ್ಲಿ ಹಕ್ಕು ಚ್ಯುತಿ ಮಂಡಿಸುವೆ ಎಂದು ಶಾಸಕ ದೊಡ್ಡನಗೌಡ ಪಾಟೀಲ್ ಹೇಳಿದರು.

ವಿಕ ಸುದ್ದಿಲೋಕ 9 Nov 2016, 7:27 pm
ಕುಷ್ಟಗಿ: ಜಿಲ್ಲಾ ಉಸ್ತುವಾರಿ ಸಚಿವ ಕ್ಷೇತ್ರಕ್ಕೆ ಭೇಟಿ ನೀಡುವಾಗ ಅಲ್ಲಿನ ಶಾಸಕರಿಗೆ ಮಾಹಿತಿ ನೀಡಬೇಕೆನ್ನುವ ಶಿಷ್ಟಾಚಾರವನ್ನು ಜಿಲ್ಲಾ ಉಸ್ತುವಾರಿ ಸಚಿವ ಬಸವರಾಜ ರಾಯರಡ್ಡಿ ಮರೆತಿದ್ದು, ಮುಂದಿನ ಅಧಿವೇಶನದಲ್ಲಿ ಹಕ್ಕು ಚ್ಯುತಿ ಮಂಡಿಸುವೆ ಎಂದು ಶಾಸಕ ದೊಡ್ಡನಗೌಡ ಪಾಟೀಲ್ ಹೇಳಿದರು.
Vijaya Karnataka Web superseded the right to present it in the house lawmaker
ಸದನದಲ್ಲಿ ಹಕ್ಕು ಚ್ಯುತಿ ಮಂಡಿಸುವೆ: ಶಾಸಕ


ಪಟ್ಟಣದ ತಮ್ಮ ಕಚೇರಿಯಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿ, ಶಾಸಕನಾದ ನನ್ನ ಎದುರು ಸಚಿವರು ಬೇಕಾಬಿಟ್ಟಿಯಾಗಿ ಮಾತನಾಡಿರುವ ದಾಖಲೆಗಳಿದ್ದು, ಅವುಗಳನ್ನು ಸಲ್ಲಿಸುವೆ. ಉಳಿದ ಜನಪ್ರತಿನಿಧಿಗಳ ಹಕ್ಕಿಗೆ ಚ್ಯುತಿ ಬರುವಂತೆ ಜಿಲ್ಲಾ ಉಸ್ತುವಾರಿ ಸಚಿವರು ವರ್ತಿಸಿದ್ದಾರೆ. ತಾವೇ ಸರಕಾರ ಎಂದು ಹೇಳಿಕೊಂಡು ಇತರ ಜನಪ್ರತಿನಿಧಿಗಳನ್ನು ಕಡೆಗಣಿಸಿದ್ದಾರೆ. ಅಚ್ಚರಿಯ ಪ್ರವಾಸ ಎಂದು ಹೇಳಿದ್ದು, ಮೂರು ದಿನ ಮೊದಲೇ ಅಧಿಕಾರಿಗಳಿಗೆ ಪತ್ರ ಬರೆದಿದ್ದಾರೆ. ಗ್ರಾ.ಪಂ.ಪಿಡಿಒಗಳಿಗೆ ನೋಟಿಸ್ ನೀಡಿದ್ದಾರೆ. ಆದರೆ, ಅಲ್ಲಿನ ಗ್ರಾ.ಪಂ.ಅಧ್ಯಕ್ಷರು, ಶಾಸಕರಿಗೆ ಮಾಹಿತಿ ತಲುಪಿಲ್ಲಎಂದು ದೂರಿದರು. ರಾಯರಡ್ಡಿ ಅವರು ಮಂತ್ರಿ ಆಗುವುದಕ್ಕಿಂತ ಮೊದಲು ಜಿಲ್ಲೆಯ ಅಧಿಕಾರಿಗಳು ಸರಿ ಇಲ್ಲ. ಭ್ರಷ್ಟಾಚಾರ ತುಂಬಿ ತುಳುಕುತ್ತಿದೆ ಎಂದು ಹೇಳಿಕೆ ನೀಡಿದ್ದರು. ಈಗಲೂ ಅದೇ ಅಧಿಕಾರಿಗಳಿದ್ದಾರೆ. ಕನಕಗಿರಿ ಪ್ರದೇಶದಲ್ಲಿನ ಕೆರೆ ತುಂಬಿಸುವ ಕಾಮಗಾರಿಯಲ್ಲಿ ಅವ್ಯವಹಾರ ನಡೆದಿದೆ ಎಂದು ಹೇಳಿದ್ದರು. ಸಚಿವರಾದ ಮೇಲೆ ಅಲ್ಲಿಗೆ ಭೇಟಿ ನೀಡಲಿಲ್ಲ ಎಂದು ಆರೋಪಿಸಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ