ಆ್ಯಪ್ನಗರ

ಪ್ರಧಾನಿ ನರೇಂದ್ರ ಮೋದಿ ಅವರಿಂದ ಮಾತ್ರ ದೇಶದ ಅಭಿವೃದ್ಧಿ ಸಾಧ್ಯ; ಸಚಿವ ಹಾಲಪ್ಪ

ಪ್ರಧಾನಿ ನರೇಂದ್ರ ಮೋದಿ ಅವರಿಂದ ಮಾತ್ರ ಅಭಿವೃದ್ಧಿ ಸಾಧ್ಯ. ಮಾಜಿ ಸಿಎಂ ಬಿ.ಎಸ್‌.ಯಡಿಯೂರಪ್ಪ, ಹಾಲಿ ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ಅವರು ರಾಜ್ಯದ ಅಭಿವೃದ್ಧಿಗೆ ಸಾಕಷ್ಟು ಕೆಲಸವನ್ನು ಮಾಡುತ್ತಿದ್ದಾರೆ. ಪಕ್ಷದ ನಾಯಕರು ಗುರುತಿಸುವಂತಹ ಬಿಜೆಪಿ ಪಕ್ಷದ ಅಭ್ಯರ್ಥಿಗೆ ಎಲ್ಲ ಗ್ರಾ. ಪಂ ಸದಸ್ಯರು ಮತ ನೀಡಬೇಕು ಎಂದು ಗಣಿ, ಭೂ ವಿಜ್ಞಾನ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸಚಿವ ಹಾಲಪ್ಪ ಆಚಾರ್‌ ಹೇಳಿದರು.

Vijaya Karnataka 13 Nov 2021, 2:18 pm
ಕುಕನೂರು: ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರಿಂದ ಮಾತ್ರ ಅಭಿವೃದ್ಧಿ ಸಾಧ್ಯ ಎಂದು ಗಣಿ, ಭೂ ವಿಜ್ಞಾನ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸಚಿವ ಹಾಲಪ್ಪ ಆಚಾರ್‌ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
Vijaya Karnataka Web Halappa Acharq


ತಾಲೂಕಿನ ಮಸಬಹಂಚಿನಾಳ ಗ್ರಾಮದ ಬಿಜೆಪಿ ಕಚೇರಿ ಆವರಣದಲ್ಲಿ ನಡೆದ ಬಿಜೆಪಿ ಪಕ್ಷದಿಂದ ವಿಧಾನ ಪರಿಷತ್‌ ಚುನಾವಣೆ ಪೂರ್ವ ಸಿದ್ಧತಾ ಸಭೆ ಉದ್ದೇಶಿಸಿ ಮಾತನಾಡಿದ ಅವರು, ಬುಡಬುಡುಕೆ ಆಡಿಸುವ ಕಾಂಗ್ರೆಸ್‌ನವರು ಉತ್ತರ ಕರ್ನಾಟಕವನ್ನು ಸತ್ಯನಾಶ ಮಾಡಿ, ರೈತ ವಿರೋಧಿಯಾಗಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರಿಂದ ಮಾತ್ರ ಅಭಿವೃದ್ಧಿ ಸಾಧ್ಯ. ಮಾಜಿ ಸಿಎಂ ಬಿ.ಎಸ್‌.ಯಡಿಯೂರಪ್ಪ, ಹಾಲಿ ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ಅವರು ರಾಜ್ಯದ ಅಭಿವೃದ್ಧಿಗೆ ಸಾಕಷ್ಟು ಕೆಲಸವನ್ನು ಮಾಡುತ್ತಿದ್ದಾರೆ. ಪಕ್ಷದ ನಾಯಕರು ಗುರುತಿಸುವಂತಹ ಬಿಜೆಪಿ ಪಕ್ಷದ ಅಭ್ಯರ್ಥಿಗೆ ಎಲ್ಲ ಗ್ರಾ. ಪಂ ಸದಸ್ಯರು ಮತ ನೀಡಬೇಕು ಎಂದು ಹೇಳಿದರು.

ತಾಲೂಕಿನ ಕಾಂಗ್ರೆಸ್‌ ಪಕ್ಷದ ನಾಯಕನಿಗೆ ನಾಲಿಗೆ, ನಡುವಳಿಕೆಯಲ್ಲಿ ಹಿಡಿತವಿಲ್ಲ ಎಂದ ಸಚಿವ ಹಾಲಪ್ಪ, ಇಂಥವರು ಹೇಗೆ ಸಾರ್ವಜನಿಕ ಜೀವನದಲ್ಲಿ ಕೆಲಸ ಮಾಡುತ್ತಾರೆ ಎಂದು ಗಣಿ, ಭೂ ವಿಜ್ಞಾನ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸಚಿವ ಹಾಲಪ್ಪ ಆಚಾರ್‌ ಅಸಮಧಾನ ವ್ಯಕ್ತಪಡಿಸಿದರು. ಅಲ್ಲದೇ ಕಾಂಗ್ರೆಸ್‌ ಪಕ್ಷದ ಮಾಜಿ ಸಚಿವ ನನ್ನ ಬಗ್ಗೆ ಹಗುರವಾಗಿ ಮಾತನಾಡಿ, ಕಂಡಲ್ಲಿ ಕೈ ಮುಗಿದು ನಂತರ ಕ್ಷಮಾರ್ಪಣೆ ಪತ್ರ ಬರೆಯುತ್ತಾನೆ. ಇಂಥಹ ಕಾಂಗ್ರೆಸ್‌ ಪಕ್ಷದ ನಾಯಕನ ನಾಲಿಗೆ, ನಡವಳಿಕೆಯಲ್ಲಿ ಹಿಡಿತವಿಲ್ಲದಂತಾಗಿದೆ. ಇವರು ತಾಲೂಕಿನ ಜನತೆಗೆ ಕಥೆಯನ್ನು ಹೇಳುತ್ತಾರೆ ಎಂದು ಹೇಳಿದರು.

ಈ ವೇಳೆ ಬಿಜೆಪಿ ಪಕ್ಷದ ಜಿಲ್ಲಾಧ್ಯಕ್ಷ ದೊಡ್ಡನಗೌಡ ಪಾಟೀಲ್‌, ಚಂದ್ರಶೇಖರಗೌಡ ಪಾಟೀಲ್‌, ಮುಖಂಡರಾದ ವಿಶ್ವನಾಥ ಮರಿಬಸಪ್ಪನವರ್‌, ರತನ್‌ ದೇಸಾಯಿ, ವೀರಣ್ಣ ಹುಬ್ಬಳ್ಳಿ, ಸಿ.ಎಚ್‌ ಪೋಲಿಸ್‌ ಪಾಟೀಲ್‌, ಶರಣಪ್ಪ ಬಣ್ಣದಬಾವಿ, ಕಳಕಪ್ಪ ಕಂಬಳಿ, ಮಾರುತಿ ಗಾವರಾಳ, ಬಸವನಗೌಡ ತೊಂಡಿಹಾಳ, ಮಂಜುನಾಥ ಗಟ್ಟೆಪ್ಪನವರ್‌, ಅಯ್ಯನಗೌಡ ಕೆಂಚಮ್ಮನವರ್‌, ಸಂಗಪ್ಪ, ಸುಧಾಕರ ದೇಸಾಯಿ, ರಸೂಲ್‌ಸಾಬ್‌ ದಮ್ಮೂರ ಸೇರಿ ಬಿಜೆಪಿ ಬೆಂಬಲಿತ ಗ್ರಾ.ಪಂ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು ಇದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ