ಗಂಗಾಧರ ಬಂಡಿಹಾಳ, ಕೊಪ್ಪಳ
ಹೊಸ ಸರಕಾರ ರಚನೆಯೊಂದಿಗೆ ಸಾಲ ಮನ್ನಾ ಭರವಸೆ ವ್ಯಕ್ತವಾಗಿದೆ. ನೇಕಾರಿಕೆ ಉದ್ದೇಶಕ್ಕೆ ರಾಜ್ಯದ ನೇಕಾರರು ನಾನಾ ಸಹಕಾರಿ ಸಂಘ ಹಾಗೂ ರಾಷ್ಟ್ರೀಕೃತ ಬ್ಯಾಂಕ್ಗಳಲ್ಲಿ ಪಡೆದ ಸಾಲದ ಮಾಹಿತಿಯನ್ನು ಕೈ ಮಗ್ಗ ಮತ್ತು ಜವಳಿ ಇಲಾಖೆ ಸಂಗ್ರಹಿಸುತ್ತಿರುವುದೇ ಇಂತಹ ನಿರೀಕ್ಷೆ ಮೂಡಿದೆ.
ರಾಜ್ಯಾದ್ಯಂತ ಬಹುತೇಕ ಕಡೆ ಸಾವಿರಾರು ನೇಕಾರರು, ಕೈ ಮಗ್ಗ ಹಾಗೂ ವಿದ್ಯುತ್ ಮಗ್ಗ ಅಳವಡಿಸಲು ವೈಯಕ್ತಿಕ ಹಾಗೂ ಸಹಕಾರಿ ಸಂಘಗಳ ಮೂಲಕ ಬ್ಯಾಂಕ್ಗಳಲ್ಲಿ ಸಾಲ ಪಡೆದಿದ್ದಾರೆ. ಹೊಸ ಸರಕಾರ ರಚನೆ ನಂತರ ನೇಕಾರರ ಸಾಲ ಮನ್ನಾ ಸಂಭವವಿದೆ. ಈ ಹಿನ್ನೆಲೆಯಲ್ಲಿ ಕೈ ಮಗ್ಗ ಮತ್ತು ಜವಳಿ ಇಲಾಖೆ ಅಭಿವೃದ್ಧಿ ಆಯುಕ್ತರು, ಆಯಾ ಜಿಲ್ಲೆಯ ಜಂಟಿ ನಿರ್ದೇಶಕರು, ಉಪನಿರ್ದೇಶಕರು ಹಾಗೂ ಸಹಾಯಕ ನಿರ್ದೇಶಕರಿಗೆ ಮೇ 17ರಂದು ಪತ್ರ ಬರೆದಿದ್ದಾರೆ. ನಾನಾ ಕಡೆ ನೇಕಾರರು, ನೇಕಾರಿಕೆ ಉದ್ದೇಶಕ್ಕಾಗಿ ಪಡೆದಿರುವ ಸಾಲದ ಬಗ್ಗೆ ಮಾಹಿತಿ ಒದಗಿಸುವಂತೆ ಕೋರಿದ್ದಾರೆ.
ನೇಕಾರರು ಸಹಕಾರ ಸಂಘಗಳು, ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್, ಪಟ್ಟಣ ಸಹಕಾರಿ ಬ್ಯಾಂಕ್, ಕೃಷಿಯೇತರ ಪತ್ತಿನ ಸಹಕಾರ ಸಂಘ, ವಿವಿಧೋದ್ದೇಶ ಸಹಕಾರ ಸಂಘಗಳು, ಕೈಗಾರಿಕಾ ಸಹಕಾರ ಬ್ಯಾಂಕ್ಗಳು, ಇತರ ಸಹಕಾರಿ ಬ್ಯಾಂಕ್, ಸೌಹಾರ್ದ ಸಹಕಾರಿ ಬ್ಯಾಂಕ್, ಕೃಷಿ ಪತ್ತಿನ ಸಹಕಾರಿ ಸಂಘ, ರಾಷ್ಟ್ರೀಕೃತ ಬ್ಯಾಂಕ್ಗಳಿಂದ ಅಲ್ಪಾವಧಿ ಮತ್ತು ಮಧ್ಯಮಾವಧಿ ಸಾಲ ಪಡೆದಿರುವ ಮಾಹಿತಿ ಸಂಗ್ರಹಿಸಿ ಸಲ್ಲಿಸುವಂತೆ ಇಲಾಖೆ ಅಭಿವೃದ್ಧಿ ಆಯುಕ್ತರು ಸೂಚಿಸಿದ್ದಾರೆ.
ಮಾರ್ಚ್ ಅಂತ್ಯಕ್ಕೆ ಅನ್ವಯ: ಆರ್ಥಿಕ ವರ್ಷದ ಅಂತ್ಯಕ್ಕೆ ಸಂಬಂಧಿಸಿ ಹೊರ ಬಾಕಿಯಲ್ಲಿ 1ಲಕ್ಷ ರೂ.ವರೆಗಿನ ಸಾಲ ಮನ್ನಾ ಪ್ರಸ್ತಾವನೆಯನ್ನು ನಿಗದಿತ ನಮೂನೆಯಲ್ಲಿ ಕ್ರೋಢೀಕರಿಸಿ ಸಲ್ಲಿಸಬೇಕು. ಅಧಿಕಾರಿಗಳಿಗೆ ನೀಡಿದ ನಿಗದಿತ ನಮೂನೆಗಳಲ್ಲೇ ಮಾಹಿತಿ ಸಲ್ಲಿಸಬೇಕಿದೆ. ನೇಕಾರರ ಸಹಕಾರ ಸಂಘಗಳು, ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್, ಪಟ್ಟಣ ಸಹಕಾರಿ ಬ್ಯಾಂಕ್, ಕೃಷಿಯೇತರ ಪತ್ತಿನ ಸಹಕಾರಿ ಸಂಘಗಳಲ್ಲಿ 2017, ಜುಲೈ 1ರಿಂದ 2018, ಮಾರ್ಚ್ 31ರವರೆಗೆ ಪಡೆದ ಅಲ್ಪಾವಧಿ ಮತ್ತು ಮಧ್ಯಮಾವಧಿ ಸಾಲಗಳ ಮಾಹಿತಿ ಸಂಗ್ರಹಿಸಲಾಗುತ್ತಿದೆ. ನೇಕಾರರ ಸಹಕಾರಿ ಸಂಘಗಳ ಹೆಸರು, ಎಷ್ಟು ಸದಸ್ಯರನ್ನು ಒಳಗೊಂಡಿದೆ? ಎಷ್ಟು ಮೊತ್ತ ಕಟ್ಟಬೇಕಾಗಿದೆ? ಎಂಬ ಮಾಹಿತಿಯನ್ನು ಇಲಾಖೆಗೆ ಸಲ್ಲಿಸಬೇಕಿದೆ.
ರಾಷ್ಟ್ರೀಕೃತ ಬ್ಯಾಂಕಿನ ಮಾಹಿತಿ ಪ್ರತ್ಯೇಕ: ರಾಷ್ಟ್ರೀಕೃತ ಬ್ಯಾಂಕಿಗೆ ಸಂಬಂಧಿಸಿ ಪ್ರತ್ಯೇಕ ಮಾಹಿತಿ ಸಲ್ಲಿಸಬೇಕಿದೆ. ಬ್ಯಾಂಕಿನ ಹೆಸರು, ತಾಲೂಕಿನ ಹೆಸರು, ಅರ್ಹತೆ ಪಡೆದ ಸದಸ್ಯರ ಸಂಖ್ಯೆ, ಸಾಲದ ಮೊತ್ತ, ಬಡ್ಡಿ ಮೊತ್ತ, 2018, ಮಾರ್ಚ್ 31ರವರೆಗೆ ಇರುವ ಮಾಹಿತಿ ಸಂಗ್ರಹಿಸಿ ಕಳುಹಿಸುವಂತೆ ಸೂಚಿಸಿದೆ. ಈಗಾಗಲೇ ಎಲ್ಲ ಜಿಲ್ಲೆಗಳಲ್ಲೂ ರಾಷ್ಟ್ರೀಕೃತ ಹಾಗೂ ಸಹಕಾರಿ ಕ್ಷೇತ್ರದ ಸಾಲದ ಬಗ್ಗೆ ಮಾಹಿತಿ ಕಲೆಹಾಕುತ್ತಿರುವ ಅಧಿಕಾರಿಗಳು ಪ್ರಸ್ತಾವನೆ ಸಲ್ಲಿಸಲು ಸಿದ್ಧತೆ ನಡೆಸಿದ್ದಾರೆ. ಹೊಸ ಸರಕಾರ ರಚನೆಯಾಗುತ್ತಿದ್ದಂತೆ ಸಾಲ ಮನ್ನಾ ಸಾಧ್ಯತೆ ಇರುವುದರಿಂದ ಅಧಿಕಾರಿಗಳು ತಮ್ಮ ಹಂತದಲ್ಲಿ ಕಾರ್ಯೋನ್ಮುಖರಾಗಿದ್ದಾರೆ.
...............
ರಾಷ್ಟ್ರೀಕೃತ ಬ್ಯಾಂಕ್ಗಳಲ್ಲಿ ನೇಕಾರರು ನೇಕಾರಿಕೆ ಉದ್ದೇಶಕ್ಕೆ ಪಡೆದ ಮಾಹಿತಿಯನ್ನು ಸಂಗ್ರಹಿಸಲಾಗಿದೆ. ಸಹಕಾರಿ ಕ್ಷೇತ್ರದಲ್ಲಿ ಸಾಲ ಪಡೆದ ಮಾಹಿತಿ ಸಂಗ್ರಹಿಸಿ ಮೇಲಧಿಕಾರಿಗಳಿಗೆ ಸಲ್ಲಿಸಲಾಗುವುದು.
- ಕೀರ್ತೆಪ್ಪ ಗೋಟೂರು, ಉಪನಿರ್ದೇಶಕರು, ಕೈ ಮಗ್ಗ ಮತ್ತು ಜವಳಿ ಇಲಾಖೆ, ಕೊಪ್ಪಳ
ಹೊಸ ಸರಕಾರ ರಚನೆಯೊಂದಿಗೆ ಸಾಲ ಮನ್ನಾ ಭರವಸೆ ವ್ಯಕ್ತವಾಗಿದೆ. ನೇಕಾರಿಕೆ ಉದ್ದೇಶಕ್ಕೆ ರಾಜ್ಯದ ನೇಕಾರರು ನಾನಾ ಸಹಕಾರಿ ಸಂಘ ಹಾಗೂ ರಾಷ್ಟ್ರೀಕೃತ ಬ್ಯಾಂಕ್ಗಳಲ್ಲಿ ಪಡೆದ ಸಾಲದ ಮಾಹಿತಿಯನ್ನು ಕೈ ಮಗ್ಗ ಮತ್ತು ಜವಳಿ ಇಲಾಖೆ ಸಂಗ್ರಹಿಸುತ್ತಿರುವುದೇ ಇಂತಹ ನಿರೀಕ್ಷೆ ಮೂಡಿದೆ.
ರಾಜ್ಯಾದ್ಯಂತ ಬಹುತೇಕ ಕಡೆ ಸಾವಿರಾರು ನೇಕಾರರು, ಕೈ ಮಗ್ಗ ಹಾಗೂ ವಿದ್ಯುತ್ ಮಗ್ಗ ಅಳವಡಿಸಲು ವೈಯಕ್ತಿಕ ಹಾಗೂ ಸಹಕಾರಿ ಸಂಘಗಳ ಮೂಲಕ ಬ್ಯಾಂಕ್ಗಳಲ್ಲಿ ಸಾಲ ಪಡೆದಿದ್ದಾರೆ. ಹೊಸ ಸರಕಾರ ರಚನೆ ನಂತರ ನೇಕಾರರ ಸಾಲ ಮನ್ನಾ ಸಂಭವವಿದೆ. ಈ ಹಿನ್ನೆಲೆಯಲ್ಲಿ ಕೈ ಮಗ್ಗ ಮತ್ತು ಜವಳಿ ಇಲಾಖೆ ಅಭಿವೃದ್ಧಿ ಆಯುಕ್ತರು, ಆಯಾ ಜಿಲ್ಲೆಯ ಜಂಟಿ ನಿರ್ದೇಶಕರು, ಉಪನಿರ್ದೇಶಕರು ಹಾಗೂ ಸಹಾಯಕ ನಿರ್ದೇಶಕರಿಗೆ ಮೇ 17ರಂದು ಪತ್ರ ಬರೆದಿದ್ದಾರೆ. ನಾನಾ ಕಡೆ ನೇಕಾರರು, ನೇಕಾರಿಕೆ ಉದ್ದೇಶಕ್ಕಾಗಿ ಪಡೆದಿರುವ ಸಾಲದ ಬಗ್ಗೆ ಮಾಹಿತಿ ಒದಗಿಸುವಂತೆ ಕೋರಿದ್ದಾರೆ.
ನೇಕಾರರು ಸಹಕಾರ ಸಂಘಗಳು, ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್, ಪಟ್ಟಣ ಸಹಕಾರಿ ಬ್ಯಾಂಕ್, ಕೃಷಿಯೇತರ ಪತ್ತಿನ ಸಹಕಾರ ಸಂಘ, ವಿವಿಧೋದ್ದೇಶ ಸಹಕಾರ ಸಂಘಗಳು, ಕೈಗಾರಿಕಾ ಸಹಕಾರ ಬ್ಯಾಂಕ್ಗಳು, ಇತರ ಸಹಕಾರಿ ಬ್ಯಾಂಕ್, ಸೌಹಾರ್ದ ಸಹಕಾರಿ ಬ್ಯಾಂಕ್, ಕೃಷಿ ಪತ್ತಿನ ಸಹಕಾರಿ ಸಂಘ, ರಾಷ್ಟ್ರೀಕೃತ ಬ್ಯಾಂಕ್ಗಳಿಂದ ಅಲ್ಪಾವಧಿ ಮತ್ತು ಮಧ್ಯಮಾವಧಿ ಸಾಲ ಪಡೆದಿರುವ ಮಾಹಿತಿ ಸಂಗ್ರಹಿಸಿ ಸಲ್ಲಿಸುವಂತೆ ಇಲಾಖೆ ಅಭಿವೃದ್ಧಿ ಆಯುಕ್ತರು ಸೂಚಿಸಿದ್ದಾರೆ.
ಮಾರ್ಚ್ ಅಂತ್ಯಕ್ಕೆ ಅನ್ವಯ: ಆರ್ಥಿಕ ವರ್ಷದ ಅಂತ್ಯಕ್ಕೆ ಸಂಬಂಧಿಸಿ ಹೊರ ಬಾಕಿಯಲ್ಲಿ 1ಲಕ್ಷ ರೂ.ವರೆಗಿನ ಸಾಲ ಮನ್ನಾ ಪ್ರಸ್ತಾವನೆಯನ್ನು ನಿಗದಿತ ನಮೂನೆಯಲ್ಲಿ ಕ್ರೋಢೀಕರಿಸಿ ಸಲ್ಲಿಸಬೇಕು. ಅಧಿಕಾರಿಗಳಿಗೆ ನೀಡಿದ ನಿಗದಿತ ನಮೂನೆಗಳಲ್ಲೇ ಮಾಹಿತಿ ಸಲ್ಲಿಸಬೇಕಿದೆ. ನೇಕಾರರ ಸಹಕಾರ ಸಂಘಗಳು, ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್, ಪಟ್ಟಣ ಸಹಕಾರಿ ಬ್ಯಾಂಕ್, ಕೃಷಿಯೇತರ ಪತ್ತಿನ ಸಹಕಾರಿ ಸಂಘಗಳಲ್ಲಿ 2017, ಜುಲೈ 1ರಿಂದ 2018, ಮಾರ್ಚ್ 31ರವರೆಗೆ ಪಡೆದ ಅಲ್ಪಾವಧಿ ಮತ್ತು ಮಧ್ಯಮಾವಧಿ ಸಾಲಗಳ ಮಾಹಿತಿ ಸಂಗ್ರಹಿಸಲಾಗುತ್ತಿದೆ. ನೇಕಾರರ ಸಹಕಾರಿ ಸಂಘಗಳ ಹೆಸರು, ಎಷ್ಟು ಸದಸ್ಯರನ್ನು ಒಳಗೊಂಡಿದೆ? ಎಷ್ಟು ಮೊತ್ತ ಕಟ್ಟಬೇಕಾಗಿದೆ? ಎಂಬ ಮಾಹಿತಿಯನ್ನು ಇಲಾಖೆಗೆ ಸಲ್ಲಿಸಬೇಕಿದೆ.
ರಾಷ್ಟ್ರೀಕೃತ ಬ್ಯಾಂಕಿನ ಮಾಹಿತಿ ಪ್ರತ್ಯೇಕ: ರಾಷ್ಟ್ರೀಕೃತ ಬ್ಯಾಂಕಿಗೆ ಸಂಬಂಧಿಸಿ ಪ್ರತ್ಯೇಕ ಮಾಹಿತಿ ಸಲ್ಲಿಸಬೇಕಿದೆ. ಬ್ಯಾಂಕಿನ ಹೆಸರು, ತಾಲೂಕಿನ ಹೆಸರು, ಅರ್ಹತೆ ಪಡೆದ ಸದಸ್ಯರ ಸಂಖ್ಯೆ, ಸಾಲದ ಮೊತ್ತ, ಬಡ್ಡಿ ಮೊತ್ತ, 2018, ಮಾರ್ಚ್ 31ರವರೆಗೆ ಇರುವ ಮಾಹಿತಿ ಸಂಗ್ರಹಿಸಿ ಕಳುಹಿಸುವಂತೆ ಸೂಚಿಸಿದೆ. ಈಗಾಗಲೇ ಎಲ್ಲ ಜಿಲ್ಲೆಗಳಲ್ಲೂ ರಾಷ್ಟ್ರೀಕೃತ ಹಾಗೂ ಸಹಕಾರಿ ಕ್ಷೇತ್ರದ ಸಾಲದ ಬಗ್ಗೆ ಮಾಹಿತಿ ಕಲೆಹಾಕುತ್ತಿರುವ ಅಧಿಕಾರಿಗಳು ಪ್ರಸ್ತಾವನೆ ಸಲ್ಲಿಸಲು ಸಿದ್ಧತೆ ನಡೆಸಿದ್ದಾರೆ. ಹೊಸ ಸರಕಾರ ರಚನೆಯಾಗುತ್ತಿದ್ದಂತೆ ಸಾಲ ಮನ್ನಾ ಸಾಧ್ಯತೆ ಇರುವುದರಿಂದ ಅಧಿಕಾರಿಗಳು ತಮ್ಮ ಹಂತದಲ್ಲಿ ಕಾರ್ಯೋನ್ಮುಖರಾಗಿದ್ದಾರೆ.
...............
ರಾಷ್ಟ್ರೀಕೃತ ಬ್ಯಾಂಕ್ಗಳಲ್ಲಿ ನೇಕಾರರು ನೇಕಾರಿಕೆ ಉದ್ದೇಶಕ್ಕೆ ಪಡೆದ ಮಾಹಿತಿಯನ್ನು ಸಂಗ್ರಹಿಸಲಾಗಿದೆ. ಸಹಕಾರಿ ಕ್ಷೇತ್ರದಲ್ಲಿ ಸಾಲ ಪಡೆದ ಮಾಹಿತಿ ಸಂಗ್ರಹಿಸಿ ಮೇಲಧಿಕಾರಿಗಳಿಗೆ ಸಲ್ಲಿಸಲಾಗುವುದು.
- ಕೀರ್ತೆಪ್ಪ ಗೋಟೂರು, ಉಪನಿರ್ದೇಶಕರು, ಕೈ ಮಗ್ಗ ಮತ್ತು ಜವಳಿ ಇಲಾಖೆ, ಕೊಪ್ಪಳ