ಆ್ಯಪ್ನಗರ

ಕೊಪ್ಪಳ: ಕಾರು ಪಲ್ಟಿ, ಕುಟುಂಬದ ಮೂವರು ಸಾವು

ನವಲಗುಂದಕ್ಕೆ ಹೋಗಿ ಹರಕೆ ತೀರಿಸಿ ಮರಳುವಾಗ ಕಾರು ಪಲ್ಟಿಯಾಗಿ ಕುಟುಂಬದ ಮೂವರು ಸಾವನ್ನಪ್ಪಿದ ಘಟನೆ ಗದಗ ಜಿಲ್ಲೆಯ ಲಕ್ಕುಂಡಿ ಸಮೀಪದ ಬೂದಿ ಬಸವೇಶ್ವರ ದೇವಸ್ಥಾನದ ಬಳಿ ನಡೆದಿದೆ. ಕಾಮಣ್ಣನಿಗೆ ಹರಕೆ ತೀರಿಸಿ ಕೊಪ್ಪಳಕ್ಕೆ ವಾಪಸ್‌ ತೆರಳುತ್ತಿದ್ದಾಗ, ವೇಗವಾಗಿ ಚಲಿಸುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಪಕ್ಕಕ್ಕೆ ಉರುಳಿ ಬಿದ್ದು ಈ ದುರ್ಘಟನೆ ನಡೆದಿದೆ.

Vijaya Karnataka Web 10 Mar 2020, 12:16 pm
ಕೊಪ್ಪಳ: ದೇವರ ಹರಕೆ ತೀರಿಸಿ ಮರಳಿ ಊರಿಗೆ ತೆರಳುತ್ತಿದ್ದ ವೇಳೆ ಕಾರು ಪಲ್ಟಿಯಾಗಿ ಒಂದೇ ಕುಟುಂಬದ ಮೂವರು ಮೃತಪಟ್ಟಿರುವ ಘಟನೆ ಗದಗ ಜಿಲ್ಲೆಯ ಲಕ್ಕುಂಡಿ ಸಮೀಪದ ಬೂದಿ ಬಸವೇಶ್ವರ ದೇವಸ್ಥಾನದ ಬಳಿ ಸೋಮವಾರ ಮಧ್ಯಾಹ್ನ ನಡೆದಿದೆ.
Vijaya Karnataka Web three of a koppal family killed in accident


ಕೊಪ್ಪಳ ನಗರದ ಪ್ರಮೀಳಾ (68), ಪೂರ್ಣಿಮಾ ಹಕ್ಕಾಪಕ್ಕಿ(43) ಹಾಗೂ ಅವಳಿ ಮಕ್ಕಳ ಪೈಕಿ ಗಂಡು ಮಗು ಆರ್ಯ (17 ತಿಂಗಳು) ಎಂಬುವರೇ ಮೃತಪಟ್ಟವರು..

ಕೊಪ್ಪಳ ನಗರ ಬಿಜೆಪಿ ಘಟಕದ ಮಾಜಿ ಅಧ್ಯಕ್ಷ ಹಾಗೂ ವಿಎಚ್‌ಪಿ ಜಿಲ್ಲಾಅಧ್ಯಕ್ಷ ಶಿವಕುಮಾರ ಹಕ್ಕಾಪಕ್ಕಿ ಹಾಗೂ ಹೆಣ್ಣು ಮಗು ಗಾಯಗೊಂಡಿದ್ದು, ಗದಗ ಜಿಲ್ಲಾಆಸ್ಪತ್ರೆಗೆ ದಾಖಲಿಸಲಾಗಿದೆ. ಶಿವಕುಮಾರ ಅವರ ಅತ್ತೆ, ಹೆಂಡತಿ ಹಾಗೂ ಮಗು ದುರುಂತದಲ್ಲಿ ಸಾವನ್ನಪ್ಪಿದ್ದಾರೆ.

ಶಿವಕುಮಾರ ಹಕ್ಕಾಪಕ್ಕಿ ದಂಪತಿಗೆ ಹಲವು ವರ್ಷಗಳಿಂದ ಮಕ್ಕಳಾಗಿರಲಿಲ್ಲ. ಈ ಹಿನ್ನೆಲೆಯಲ್ಲಿ ನವಲಗುಂದದ ರಾಮಲಿಂಗ ಕಾಮಣ್ಣನಿಗೆ ಹರಕೆ ಕಟ್ಟಿಕೊಂಡಿದ್ದರು. ಮಕ್ಕಳಾದ ಸಂತಸದಲ್ಲಿ ಒಂದೂವರೆ ವರ್ಷದ ನಂತರ ಕಾಮಣ್ಣನಿಗೆ ಸೋಮವಾರ ಹರಕೆ ತೀರಿಸಿ ಕೊಪ್ಪಳಕ್ಕೆ ವಾಪಸ್‌ ತೆರಳುತ್ತಿದ್ದಾಗ ವೇಗವಾಗಿ ಚಲಿಸುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಪಕ್ಕಕ್ಕೆ ಉರುಳಿ ಬಿದ್ದು ಈ ದುರ್ಘಟನೆ ನಡೆದಿದೆ.

ಅಪಘಾತದ ರಭಸಕ್ಕೆ ಸುಮಾರು ಐದಾರು ಬಾರಿ ಕಾರ್‌ ಪಲ್ಟಿಯಾಗಿ ನಜ್ಜುಗುಜ್ಜಾಗಿದೆ. ಸ್ಥಳದಲ್ಲಿ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿತ್ತು. ಗದಗ ಗ್ರಾಮೀಣ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ