ಆ್ಯಪ್ನಗರ

Gangavathi: ಅಂಜನಾದ್ರಿಗೆ ಸಿಎಂ ಬೊಮ್ಮಾಯಿ ಭೇಟಿ- ಬಿಗಿ ಭದ್ರತೆ, ಸಿಸಿ ಕ್ಯಾಮೆರಾ ಅಳವಡಿಕೆ

Gangavathi: ಮಾರ್ಚ್ 14 ರಂದು ಸಿಎಂ ಬೊಮ್ಮಾಯಿ ಗಂಗಾವತಿಯ ಅಂಜನಾದ್ರಿ ಬೆಟ್ಟಕ್ಕೆ ಆಗಮಿಸಿತ್ತಿದ್ದು, ಕಾಮಗಾರಿಗಳ ಶಂಕು ಸ್ಥಾಪನೆ, ನಂತರ ಬಿಜೆಪಿ ಪಕ್ಷದ ಸಮಾವೇಶದಲ್ಲಿ ಭಾಗಿ ಆಗಲಿದ್ದಾರೆ. ಈ ಸಂಬಂಧ ಪೊಲೀಸ್ ಇಲಾಖೆ ಬಿಗಿ ಭದ್ರತೆ ಕೈಗೊಂಡಿದೆ.

Vijaya Karnataka 14 Mar 2023, 8:49 am

ಹೈಲೈಟ್ಸ್‌:

  • ಗಾಲಿ ಜನಾರ್ದನ ರೆಡ್ಡಿಯ ಗಂಗಾವತಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಗೆಲ್ಲಿಸಲು ಸಕಲ ತಯಾರಿ
  • ಬೃಹತ್ ಸಮಾವೇಶ, ಇಂದು ಸಿಎಂ ಬೊಮ್ಮಾಯಿ ಅಂಜನಾದ್ರಿಗೆ ಪ್ರವಾಸ
  • ಸಿಎಂ ಭೇಟಿ ಹಿನ್ನಲೆ, ಪೊಲೀಸ್‌ ಇಲಾಖೆಯಿಂದ ಬಿಗಿ ಭದ್ರತೆ, 20 ಅಧಿಕ ಕಾಮಗಾರಿಗಳಿಗೆ ಶಂಕು ಸ್ಥಾಪನೆ

ಹೈಲೈಟ್ಸ್‌ ಮಾತ್ರವೇ ಓದಲು ಆ್ಯಪ್‌ ಡೌನ್‌ಲೋಡ್‌ ಮಾಡಿ
Vijaya Karnataka Web ಸಿಎಂ ಬೊಮ್ಮಾಯಿ
ಸಿಎಂ ಬೊಮ್ಮಾಯಿ
ಗಂಗಾವತಿ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮಾರ್ಚ್ 14 ರಂದು ಗಂಗಾವತಿಗೆ ಆಗಮಿಸಲಿದ್ದು ನಗರದ, ಅಂಜನಾದ್ರಿ ಬೆಟ್ಟದ ಸುತ್ತ ಬಂದೋಬಸ್ತ್‌ಗಾಗಿ ಪೊಲೀಸ್ಇಲಾಖೆ ಕಣ್ಗಾವಲಿಟ್ಟಿದೆ.
2023 ರ ಕರ್ನಾಟಕ ವಿಧಾನಸಭಾ ಚುನಾವಣಾ ಹಿನ್ನಲೆ, ಕೊಪ್ಪಳದ ಗಂಗಾವತಿ ತಾಲೂಕಿನಲ್ಲಿ ಕಳೆದ ಎರಡ್ಮೂರು ತಿಂಗಳಿಂದ ರಾಜಕೀಯ ಚಟುವಟಿಕೆಗಳು ಬಿರುಸಿನಿಂದ ಸಾಗುತ್ತಿದ್ದು, ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ ಗಂಗಾವತಿ ಕ್ಷೇತ್ರದಿಂದ ಸ್ಪರ್ಧಿಸಲು ಸಕಲ ತಯಾರಿ ನಡೆಸಿದ್ದು, ಹೀಗಾಗಿ ಚುನಾವಣೆಯಲ್ಲಿ ಬಿಜೆಪಿ, ತನ್ನ ಅಭ್ಯರ್ಥಿಯನ್ನು ಗೆಲ್ಲಿಸಲು ಶತ ಪ್ರಯತ್ನ ನಡೆಸುತ್ತಿದೆ.

ನಗರದಿಂದಲೇ ಸಮಾವೇಶ

ಧರ್ಮದ ಆಧಾರದ ಮೇಲೆ ಚುನಾವಣೆ ಎದುರಿಸಲು ಹೊರಟಿರುವ ಬಿಜೆಪಿ, ಸಿಎಂ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಸಮಾವೇಶಗಳನ್ನು ಗಂಗಾವತಿಯಿಂದಲೇ ಆರಂಭ ಮಾಡಲಾಗುತ್ತಿದೆ. ಫಲಾನುಭವಿಗಳಿಗೆ ಹಕ್ಕು ಪತ್ರಗಳ ವಿತರಣೆ, ಜೊತೆಗೆ ಬೃಹತ್‌ ಕಾರ್ಯಕ್ರಮ ಹಮ್ಮಿಕೊಂಡು ಬೊಮ್ಮಾಯಿ ಅವರ ಸರಕಾರದ ಯೋಜನೆಗಳನ್ನು ಜನರಿಗೆ ಮುಟ್ಟಿಸಲು ಹೊರಟಿದ್ದಾರೆ ಎನ್ನಲಾಗಿದೆ.

20 ಅಧಿಕ ಕಾಮಗಾರಿಗಳಿಗೆ ಶಂಕು ಸ್ಥಾಪನೆ

ಸರಕಾರ ಅಂಜನಾದ್ರಿ ಅಭಿವೃದ್ಧಿಗೆ 120 ಕೋಟಿ ರೂ.ನೀಡಿದ್ದು, 20 ಕ್ಕೂ ಅಧಿಕ ಕಾಮಗಾರಿಗಳಿಗೆ ಶಂಕು ಸ್ಥಾಪನೆ ಮಾಡಲು ಸಿಎಂ ಬೊಮ್ಮಾಯಿ ಮಾರ್ಚ್ 14 ರಂದು ಆಗಮಿಸಲಿದ್ದು ಜಿಲ್ಲಾಡಳಿತ, ಪೊಲೀಸ್ ಇಲಾಖೆಗಳು ಸಕಲ ತಯಾರಿ ಮಾಡಿಕೊಂಡಿವೆ.

488 ಪೊಲೀಸ್‌ ಸಿಬ್ಬಂದಿನಿಯೋಜನೆ :

ಸಿಎಂ ಬೊಮ್ಮಾಯಿ ನೇತೃತ್ವದ ತಂಡ ಅಂಜನಾದ್ರಿ ಹಾಗೂ ಗಂಗಾವತಿಗೆ ಆಗಮಿಸುತ್ತಿರುವ ಹಿನ್ನಲೆ, ಯಾವುದೇ ರೀತಿಯ ಅವಘಡಗಳು ಸಂಭವಿಸಬಾರದು ಎನ್ನುವ ಉದ್ದೇಶದಿಂದ ಪೊಲೀಸ್ ಇಲಾಖೆಯಿಂದ ಬಿಗಿ ಬಂದೋಬಸ್ತ್‌ ನಿಯೋಜನೆ ಮಾಡಲಾಗಿದೆ. ಗಂಗಾವತಿ ನಗರದಲ್ಲಿ 488 ಸಿಬ್ಬಂದಿ ನಿಯೋಜನೆ ಮಾಡಲಾಗಿದೆ. ಒಬ್ಬ ಎಸ್ಪಿ, 4 ಜನ ಡಿವೈಎಸ್ಪಿ, 15 ಜನ ಸಿಪಿಐ, 30 ಜನ ಪಿಎಸ್ಐ, 350 ಕ್ಕೂ ಅಧಿಕ ಎಚ್‌ಸಿ ಪಿಸಿಗಳಿದ್ದಾರೆ. ಇನ್ನೂ ಅಂಜನಾದ್ರಿ ಬೆಟ್ಟ ಹಾಗು ಆನೆಗೊಂದಿ ಬಳಿ ಸುಮಾರು 300 ಜನ ಪೊಲೀಸ್‌ ಸಿಬ್ಬಂದಿ ಅನ್ನು ನಿಯೋಜನೆ ಮಾಡಲಾಗಿದೆ. ಡಿಆರ್‌ ವ್ಯಾನ್‌, ಕೆಎಸ್ಆರ್‌ಪಿ ತುಕುಡಿಗಳನ್ನು ನಿಯೋಜಿಸಲಾಗಿದೆ.

ಕಣ್ಗಾವಲಿಗೆ ಸಿಸಿ ಕ್ಯಾಮೆರಾ ಅಳವಡಿಕೆ

ಸಿಎಂ ಬೊಮ್ಮಾಯಿ ಅವರು ಅಂಜನಾದ್ರಿಗೆ ಭೇಟಿ ನೀಡಿ ಆಂಜನೇಯಸ್ವಾಮಿಗೆ ಪೂಜೆ ಸಲ್ಲಿಸಲಿದ್ದಾರೆ. ನಂತರ ಅಭಿವೃದ್ಧಿ ಕಾಮಗಾರಿಗಳಿಗೆ ಶಂಕು ಸ್ಥಾಪನೆ ನೆರವೇರಿಸಲಿದ್ದಾರೆ. ಈ ವೇಳೆ ಮುನ್ನೆಚ್ಚರಿಕೆ ವಹಿಸಲು ಆನೆಗೊಂದಿ ಉತ್ಸವ ಬಯಲು, ಚಿಕ್ಕರಾಂಪೂರ, ಅಂಜನಾದ್ರಿಯ ಮುಖ್ಯದ್ವಾರ, ಪೂಜಾ ಸ್ಥಳ ಸೇರಿದಂತೆ ನಾನಾ ಕಡೆ ಸಿಸಿ ಕ್ಯಾಮೆರಾ ಅಳವಡಿಕೆ ಮಡಲಾಗಿದೆ.

ಸಿಎಂ ಭೇಟಿ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಸಕಲ ತಯಾರಿ ಮಾಡಿಕೊಂಡಿದೆ. ಹೆಚ್ಚಿನ ಭದ್ರತೆ ದೃಷ್ಟಿಯಿಂದ ಪೊಲೀಸ್ ಇಲಾಖೆ ಸಾಕಷ್ಟು ಸಿಬ್ಬಂದಿ ನಿಯೋಜಿಸಿದೆ. ಸಿಎಂ ಅವರು ಅಂಜನಾದ್ರಿಯಲ್ಲಿ ಕಾಮಗಾರಿಗಳಿಗೆ ಶಂಕುಸ್ಥಾಪನೆ ಮಾಡಿ ನಂತರ ಪಕ್ಷದ ಬೃಹತ್‌ ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ