ಆ್ಯಪ್ನಗರ

ಕೊಪ್ಪಳದಲ್ಲಿ ಕಾಲುವೆಗೆ ಉರುಳಿದ ಟ್ರಾಕ್ಟರ್: ಚಾಲಕ ಪಾರು

ತುಂಗಭದ್ರಾ ಎಡದಂಡೆ ಕಾಲುವೆಯಲ್ಲಿ ಟ್ರ್ಯಾಕ್ಟರ್ ಪಲ್ಟಿಯಾಗಿದ್ದು, ಅದೃಷ್ಟವಶಾತ್ ಚಾಲಕ ಪಾರಾಗಿರುವ ಘಟನೆ ಗಂಗಾವತಿ ತಾಲೂಕಿನ ದಾಸನಾಳ ಗ್ರಾಮದಲ್ಲಿ ನಡೆದಿದೆ.

Vijaya Karnataka Web 3 Sep 2019, 8:44 pm
ಕೊಪ್ಪಳ: ಗಂಗಾವತಿ ತಾಲೂಕಿನ ದಾಸನಾಳ ಗ್ರಾಮ ಸಮೀಪದ ತುಂಗಭದ್ರಾ ಎಡದಂಡೆ ಕಾಲುವೆಯಲ್ಲಿ ಟ್ರ್ಯಾಕ್ಟರ್ ಪಲ್ಟಿಯಾಗಿದ್ದು, ಅದೃಷ್ಟವಶಾತ್ ಚಾಲಕ ಪಾರಾಗಿದ್ದಾನೆ.
Vijaya Karnataka Web koppal


ಕಲ್ಲಿನ‌ ಪುಡಿ ತುಂಬಿಕೊಂಡು‌ ಹೋಗುತ್ತಿರುವ ವೇಳೆಯಲ್ಲಿ ಟ್ರ್ಯಾಕ್ಟರ್ ಪಲ್ಟಿಯಾಗಿದೆ. ಬಸಾಪಟ್ಟಣ ಮೂಲದ ಸಂಗನಬಸಯ್ಯ ಹಿರೇಮಠ ಎನ್ನುವವರ ಟ್ರ್ಯಾಕ್ಟರ್ ಎಂದು ತಿಳಿದು ಬಂದಿದೆ.

ಮಹೆಬೂಬ್ ಎನ್ನುವ ಚಾಲಕ ಕಲ್ಲಿನ‌ ಕ್ರಷರ್ ಮಷಿನ್‌ನಿಂದ ಕಲ್ಲಿನ‌ ಪುಡಿ ಟ್ರ್ಯಾಕ್ಟರ್ ನಲ್ಲಿ ತುಂಬಿಕೊಂಡು ಹೋಗುತ್ತಿದ್ದ. ಆದರೆ, ಕಾಲುವೆಯ ತಡೆಗೋಡೆಯ ಮೇಲೆ ಸ್ಟೇರಿಂಗ್ ಕಟ್ಟಾದ ಹಿನ್ನೆಲೆಯಲ್ಲಿ ಕಾಲುವೆಗೆ ಬಿದ್ದಿದೆ.

ಚಾಲಕನು ಪ್ರಾಣಾಪಾಯದಿಂದ ಪಾರಾಗಿದ್ದು, ಸುಮಾರು ಎರಡು ಗಂಟೆಗಳ ನಂತರ ಟ್ರ್ಯಾಕ್ಟರ್ ಕಾಲುವೆಯಿಂದ ತೆಗೆಯಲಾಗಿದೆ. ಗಂಗಾವತಿ ಗ್ರಾಮೀಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ