ಕೊಪ್ಪಳ : ತೋಟಗಾರಿಕೆಯಲ್ಲಿ ಆಧುನಿಕ ತಂತ್ರಜ್ಞಾನ ಅಳವಡಿಸಿ ರೈತರು ಆರ್ಥಿಕ ಲಾಭ ಪಡೆಯುವಂತಾಗಲು ರೈತರಿಗೆ ತರಬೇತಿ ನೀಡುವ ಕಾರ್ಯಕ್ರಮಗಳಿಗೆ ಒತ್ತು ನೀಡಬೇಕು ಎಂದು ಸಂಸದ ಕರಡಿ ಸಂಗಣ್ಣ ಅವರು ಅಧಿಕಾರಿಗಳಿಗೆ ಸೂಚಿಸಿದರು.
ನಗರದ ಜಿಲ್ಲಾಡಳಿತ ಭವನದ ಕೃಷಿ ಇಲಾಖೆ ಸಭಾ ಭವನದಲ್ಲಿ ಸೋಮವಾರ ಏರ್ಪಡಿಸಿದ್ದ ಪ್ರಧಾನಮಂತ್ರಿಗಳ 15 ಅಂಶಗಳ ಕಾರ್ಯಕ್ರಮ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷ ತೆ ವಹಿಸಿ ಮಾತನಾಡಿದರು.
2017-18 ಆರ್ಥಿಕ ವರ್ಷದಲ್ಲಿ ಹೊಸ ತೋಟಗಳ ಪ್ರದೇಶ ವಿಸ್ತರಣೆ ಕಾರ್ಯಕ್ರಮದಡಿ ಅಲ್ಪಸಂಖ್ಯಾತರ 50 ಫಲಾನುಭವಿಗಳಿಗೆ ಆರ್ಥಿಕ ಸೌಲಭ್ಯ ಒದಗಿಸಲಾಗಿದೆ. ಸಮಗ್ರ ಪೋಷಕಾಂಶ, ಕೀಟ ನಿರ್ವಹಣೆಗೆ ಪ್ರೋತ್ಸಾಹ ನೀಡುವ ಯೋಜನೆಯಡಿ ಅಲ್ಪಸಂಖ್ಯಾತರ ಸಮುದಾಯದ 17 ಫಲಾನುಭವಿಗಳಿಗೆ ಸೌಲಭ್ಯ ಒದಗಿಸಲಾಗಿದೆ. ಜೇನು ಕೃಷಿ ಮತ್ತು ಮಧುವನ ನಿರ್ಮಾಣಕ್ಕೂ ಉತ್ತೇಜನ ನೀಡಲಾಗುತ್ತಿದೆ. ಜೇನು ಬೆಳೆಗಾರರ ಸಂಘವನ್ನು ಮೊದಲ ಬಾರಿಗೆ ರಚಿಸಿದೆ. ಶುದ್ಧ ಜೇನುತುಪ್ಪಕ್ಕೆ ಸುಮಾರು 500 ರೂ. ದಿಂದ 1 ಸಾವಿರ ರೂ.ವರೆಗೆ ಲಭ್ಯವಾಗುತ್ತದೆ ಎಂದು ತೋಟಗಾರಿಕೆ ಉಪನಿರ್ದೇಶಕ ಕೃಷ್ಣ ಉಕ್ಕುಂದ ಅವರು ಮಾಹಿತಿ ನೀಡಿದರು.
ಇದಕ್ಕೆ ಪ್ರತಿಕ್ರಿಯಿಸಿದ ಸಂಸದ ಕರಡಿ ಸಂಗಣ್ಣ, ಜೇನು ಬೆಳೆಗಾರರ ಸಂಘಗಳ ಸದಸ್ಯರಿಗೆ ಹೆಚ್ಚಿನ ತರಬೇತಿ ಅಗತ್ಯವಿದೆ. ಜಿಲ್ಲೆಯಲ್ಲಿ ದ್ರಾಕ್ಷಿ ಮತ್ತು ದಾಳಿಂಬೆ ಬೆಳೆಗಾರರಿಗೆ ಬೆಳೆಗಳ ಮೌಲ್ಯವರ್ಧನೆ ಕುರಿತು ಹೆಚ್ಚಿನ ತರಬೇತಿಯ ಅಗತ್ಯವಿದೆ. ರೈತರು ದ್ರಾಕ್ಷಿ ಸಂಸ್ಕರಣೆ ಮಾಡಲು ಮುಂದಾಗಬೇಕು. ಒಣ ದ್ರಾಕ್ಷಿ ಘಟಕ ಕೈಗೊಂಡಲ್ಲಿ ಒಳ್ಳೆಯ ಲಾಭ ದೊರೆಯುತ್ತದೆ. ಒಳ್ಳೆಯ ತಂತ್ರಜ್ಞಾನ ಬಳಸಿದಲ್ಲಿ ಒಣದ್ರಾಕ್ಷಿ ಗುಣಮಟ್ಟದ್ದಾಗಲಿದ್ದು, ದರ ಮತ್ತು ಆರ್ಥಿಕ ಲಾಭ ಕಂಡುಕೊಳ್ಳಬಹುದು. ಆಧುನಿಕ ತಂತ್ರಜ್ಞಾನ ಅಳವಡಿಕೆ, ಮೌಲ್ಯವರ್ಧನೆ, ಮಾರುಕಟ್ಟೆ ವ್ಯವಸ್ಥೆ ಕುರಿತಂತೆ ರೈತರಿಗೆ ಹೆಚ್ಚಿನ ತರಬೇತಿ ಕಾರ್ಯಕ್ರಮ ಹಮ್ಮಿಕೊಳ್ಳಬೇಕು.
ಜಾನುವಾರು ಪರಿಸ್ಥಿತಿ ವರದಿ: ಪಶುಸಂಗೋಪನೆ ಇಲಾಖೆಯಿಂದ ಹೈನುಗಾರಿಕೆ ಮತ್ತು ಕುರಿ, ಕೋಳಿ, ಮೇಕೆ ಸಾಕಾಣಿಕೆ ಕುರಿತಂತೆ ನಾನಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗುತ್ತಿದೆ. ಪಶುಭಾಗ್ಯ, ಅಮೃತ ಯೋಜನೆ, ಕೋಳಿ ಸಾಕಾಣಿಕೆ ಯೋಜನೆಗಳಡಿ ಫಲಾನುಭವಿಗಳಿಗೆ ಸಹಾಯಧನ ನೀಡಲಾಗುತ್ತಿದೆ. ಆದರೆ ಯೋಜನೆ ಲಾಭ ಪಡೆದ ಮೇಲೆ ಹೈನುಗಾರಿಕೆ ಕ್ಷೇತ್ರದಲ್ಲಿ ಆಗುತ್ತಿರುವ ಸುಧಾರಣೆ, ಮಹಿಳಾ ರೈತರ ಆರ್ಥಿಕ ಸ್ಥಿತಿಗತಿಯ ಸುಧಾರಣೆ, ಜಾನುವಾರುಗಳ ಸಂಖ್ಯೆಯಲ್ಲಿ ಹೆಚ್ಚಳವಾಗಿದೆಯೇ ಎನ್ನುವುದರ ಬಗ್ಗೆ ಪರಾಮರ್ಶೆ ಆಗಬೇಕಿದೆ ಎಂದರು.
ಪಶುಸಂಗೋಪನೆ ಇಲಾಖೆ ಅಧಿಕಾರಿ ಡಾ. ಸಾಲಿ, ಜಿಲ್ಲೆಯಲ್ಲಿ ಕಳೆದ ವರ್ಷ ಕೈಗೊಂಡ ಜಾನುವಾರು ಗಣತಿಯಲ್ಲಿ ಸುಮಾರು 2. 75 ಲಕ್ಷ ಜಾನುವಾರು ಹಾಗೂ 12 ಲಕ್ಷ ಕೋಳಿ ಇರುವ ಬಗ್ಗೆ ಸಮೀಕ್ಷೆ ಕೈಗೊಳ್ಳಲಾಗಿತ್ತು. ಈ ವರ್ಷದ ಜಾನುವಾರು ಗಣತಿ ಜುಲೈನಲ್ಲಿ ಕೈಗೊಳ್ಳಲಾಗುತ್ತಿದ್ದು, ಸಮೀಕ್ಷೆ ಬಳಿಕ ವರದಿ ಸಲ್ಲಿಸಲಾಗುವುದು ಎಂದರು.
ಕಾರ್ಯವೈಖರಿಗೆ ಅಸಮಾಧಾನ : ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಡಿ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ವತಿಯಿಂದ ಮಹಿಳೆಯರಿಗೆ ಸ್ವಯಂ ಉದ್ಯೋಗಕ್ಕಾಗಿ 2017-18 ನೇ ಸಾಲಿನಲ್ಲಿ ನೀಡುವ ಸಾಲ ಯೋಜನೆಗಳಡಿ ಜಿಲ್ಲೆಯಲ್ಲಿ ಈವರೆಗೆ ಫಲಾನುಭವಿಗಳ ಆಯ್ಕೆ ಪ್ರಕ್ರಿಯೆ ಪೂರ್ಣಗೊಳ್ಳದಿರುವುದಕ್ಕೆ ಅಸಮಾಧಾನ ವ್ಯಕ್ತಪಡಿಸಿದ ಸಂಸದ ಕರಡಿ ಸಂಗಣ್ಣ, ಮಹಿಳೆಯರು ಆರ್ಥಿಕ ಸ್ವಾವಲಂಬಿಗಳಾಗಲು ಸಾಲ ಯೋಜನೆ ರೂಪಿಸಿ, ಜಾರಿಗೊಳಿಸುತ್ತವೆ. ಆದರೆ ಅಧಿಕಾರಿಗಳ ವಿಳಂಬ ಧೋರಣೆಯಿಂದಾಗಿ ಯೋಜನೆ ನಿರೀಕ್ಷಿತ ಉದ್ದೇಶ ತಲುಪಲು ವಿಫಲವಾಗುತ್ತವೆ. ನಿಯಮಾನುಸಾರ ಆಯ್ಕೆ ಪ್ರಕ್ರಿಯೆ ಪೂರ್ಣಗೊಳಿಸಿ, ಕೂಡಲೆ ಫಲಾನುಭವಿಗಳಿಗೆ ಇನ್ನಾದರೂ ಸೌಲಭ್ಯ ತಲುಪಿಸಿ ಎಂದು ತಾಕೀತು ಮಾಡಿದರು.
ಅಸಮಧಾನ: ಗಂಗಾ ಕಲ್ಯಾಣ ಯೋಜನೆಯಡಿ ಅಲ್ಪಸಂಖ್ಯಾತರರಿಗೆ ಕಳೆದ ವರ್ಷ 2 ಫಲಾನುಭವಿಗಳಿಗೆ ವಿದ್ಯುತ್ ಸಂಪರ್ಕ ಕಲ್ಪಿಸಲಾಗಿದೆ ಎಂಬುದಾಗಿ ಜೆಸ್ಕಾಂ ಅಧಿಕಾರಿಗಳು ನೀಡಿದ ವರದಿಗೆ ಸಂಸದರು ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. 271 ಫಲಾನುಭವಿಗಳಿಗೆ ಶೇ. 15 ರಂತೆ ಅಲ್ಪಸಂಖ್ಯಾತ ಸಮುದಾಯದ ಒಟ್ಟು 40 ಫಲಾನುಭವಿಗಳ ಬೋರ್ವೆಲ್ಗಳಿಗೆ ವಿದ್ಯುತ್ ಸಂಪರ್ಕ ಕಲ್ಪಿಸಬೇಕಿತ್ತು. ಆದರೆ ಕೇವಲ 2 ಕ್ಕೆ ಮಾತ್ರ ಸಂಪರ್ಕ ಕಲ್ಪಿಸಲಾಗಿದೆ. ಕಳೆದ ಆರ್ಥಿಕ ವರ್ಷದ ಫಲಾನುಭವಿಗಳಿಗೆ ಇನ್ನೂ ಬೋರ್ವೆಲ್ ಕೊರೆಯಿಸಿಲ್ಲ. ಈ ಫಲಾನುಭವಿಗಳ ಹೊಲದಲ್ಲಿ ಬೋರ್ವೆಲ್ ಕೊರೆಯಿಸುವುದು, ಪಂಪ್ಸೆಟ್ ಮೋಟಾರು ಅಳವಡಿಸಿ, ವಿದ್ಯುತ್ ಸಂಪರ್ಕ ಕಲ್ಪಿಸುವುದು ಯಾವಾಗ ಎಂದು ಜೆಸ್ಕಾಂ ಮತ್ತು ನಿಗಮಗಳ ಅಧಿಕಾರಿಗಳಿಗೆ ತರಾಟೆಗೆ ತೆಗೆದುಕೊಂಡರು.
ನಾನಾ ಇಲಾಖೆಗಳಡಿ ಅಲ್ಪಸಂಖ್ಯಾತರ ಸಮುದಾಯಕ್ಕೆ ಒದಗಿಸಲಾಗಿರುವ ಸೌಲಭ್ಯಗಳ ಕುರಿತು ಸಂಸದರು ಪ್ರಗತಿ ಪರಿಶೀಲಿಸಿದರು.
ಅಪರ ಜಿಲ್ಲಾಧಿಕಾರಿ ಡಾ. ರುದ್ರೇಶ್ ಘಾಳಿ, ಸಮಿತಿಯ ನಾಮನಿರ್ದೇಶಿತ ಸದಸ್ಯರಾದ ಸಿರಾಜ್ ಕರಮುಡಿ, ಮಹ್ಮದ್ ಸಿರಾಜ್, ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿ ಮೆಹಮೂದ್ ಸೇರಿ ಇತರರು ಇದ್ದರು.
ನಗರದ ಜಿಲ್ಲಾಡಳಿತ ಭವನದ ಕೃಷಿ ಇಲಾಖೆ ಸಭಾ ಭವನದಲ್ಲಿ ಸೋಮವಾರ ಏರ್ಪಡಿಸಿದ್ದ ಪ್ರಧಾನಮಂತ್ರಿಗಳ 15 ಅಂಶಗಳ ಕಾರ್ಯಕ್ರಮ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷ ತೆ ವಹಿಸಿ ಮಾತನಾಡಿದರು.
2017-18 ಆರ್ಥಿಕ ವರ್ಷದಲ್ಲಿ ಹೊಸ ತೋಟಗಳ ಪ್ರದೇಶ ವಿಸ್ತರಣೆ ಕಾರ್ಯಕ್ರಮದಡಿ ಅಲ್ಪಸಂಖ್ಯಾತರ 50 ಫಲಾನುಭವಿಗಳಿಗೆ ಆರ್ಥಿಕ ಸೌಲಭ್ಯ ಒದಗಿಸಲಾಗಿದೆ. ಸಮಗ್ರ ಪೋಷಕಾಂಶ, ಕೀಟ ನಿರ್ವಹಣೆಗೆ ಪ್ರೋತ್ಸಾಹ ನೀಡುವ ಯೋಜನೆಯಡಿ ಅಲ್ಪಸಂಖ್ಯಾತರ ಸಮುದಾಯದ 17 ಫಲಾನುಭವಿಗಳಿಗೆ ಸೌಲಭ್ಯ ಒದಗಿಸಲಾಗಿದೆ. ಜೇನು ಕೃಷಿ ಮತ್ತು ಮಧುವನ ನಿರ್ಮಾಣಕ್ಕೂ ಉತ್ತೇಜನ ನೀಡಲಾಗುತ್ತಿದೆ. ಜೇನು ಬೆಳೆಗಾರರ ಸಂಘವನ್ನು ಮೊದಲ ಬಾರಿಗೆ ರಚಿಸಿದೆ. ಶುದ್ಧ ಜೇನುತುಪ್ಪಕ್ಕೆ ಸುಮಾರು 500 ರೂ. ದಿಂದ 1 ಸಾವಿರ ರೂ.ವರೆಗೆ ಲಭ್ಯವಾಗುತ್ತದೆ ಎಂದು ತೋಟಗಾರಿಕೆ ಉಪನಿರ್ದೇಶಕ ಕೃಷ್ಣ ಉಕ್ಕುಂದ ಅವರು ಮಾಹಿತಿ ನೀಡಿದರು.
ಇದಕ್ಕೆ ಪ್ರತಿಕ್ರಿಯಿಸಿದ ಸಂಸದ ಕರಡಿ ಸಂಗಣ್ಣ, ಜೇನು ಬೆಳೆಗಾರರ ಸಂಘಗಳ ಸದಸ್ಯರಿಗೆ ಹೆಚ್ಚಿನ ತರಬೇತಿ ಅಗತ್ಯವಿದೆ. ಜಿಲ್ಲೆಯಲ್ಲಿ ದ್ರಾಕ್ಷಿ ಮತ್ತು ದಾಳಿಂಬೆ ಬೆಳೆಗಾರರಿಗೆ ಬೆಳೆಗಳ ಮೌಲ್ಯವರ್ಧನೆ ಕುರಿತು ಹೆಚ್ಚಿನ ತರಬೇತಿಯ ಅಗತ್ಯವಿದೆ. ರೈತರು ದ್ರಾಕ್ಷಿ ಸಂಸ್ಕರಣೆ ಮಾಡಲು ಮುಂದಾಗಬೇಕು. ಒಣ ದ್ರಾಕ್ಷಿ ಘಟಕ ಕೈಗೊಂಡಲ್ಲಿ ಒಳ್ಳೆಯ ಲಾಭ ದೊರೆಯುತ್ತದೆ. ಒಳ್ಳೆಯ ತಂತ್ರಜ್ಞಾನ ಬಳಸಿದಲ್ಲಿ ಒಣದ್ರಾಕ್ಷಿ ಗುಣಮಟ್ಟದ್ದಾಗಲಿದ್ದು, ದರ ಮತ್ತು ಆರ್ಥಿಕ ಲಾಭ ಕಂಡುಕೊಳ್ಳಬಹುದು. ಆಧುನಿಕ ತಂತ್ರಜ್ಞಾನ ಅಳವಡಿಕೆ, ಮೌಲ್ಯವರ್ಧನೆ, ಮಾರುಕಟ್ಟೆ ವ್ಯವಸ್ಥೆ ಕುರಿತಂತೆ ರೈತರಿಗೆ ಹೆಚ್ಚಿನ ತರಬೇತಿ ಕಾರ್ಯಕ್ರಮ ಹಮ್ಮಿಕೊಳ್ಳಬೇಕು.
ಜಾನುವಾರು ಪರಿಸ್ಥಿತಿ ವರದಿ: ಪಶುಸಂಗೋಪನೆ ಇಲಾಖೆಯಿಂದ ಹೈನುಗಾರಿಕೆ ಮತ್ತು ಕುರಿ, ಕೋಳಿ, ಮೇಕೆ ಸಾಕಾಣಿಕೆ ಕುರಿತಂತೆ ನಾನಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗುತ್ತಿದೆ. ಪಶುಭಾಗ್ಯ, ಅಮೃತ ಯೋಜನೆ, ಕೋಳಿ ಸಾಕಾಣಿಕೆ ಯೋಜನೆಗಳಡಿ ಫಲಾನುಭವಿಗಳಿಗೆ ಸಹಾಯಧನ ನೀಡಲಾಗುತ್ತಿದೆ. ಆದರೆ ಯೋಜನೆ ಲಾಭ ಪಡೆದ ಮೇಲೆ ಹೈನುಗಾರಿಕೆ ಕ್ಷೇತ್ರದಲ್ಲಿ ಆಗುತ್ತಿರುವ ಸುಧಾರಣೆ, ಮಹಿಳಾ ರೈತರ ಆರ್ಥಿಕ ಸ್ಥಿತಿಗತಿಯ ಸುಧಾರಣೆ, ಜಾನುವಾರುಗಳ ಸಂಖ್ಯೆಯಲ್ಲಿ ಹೆಚ್ಚಳವಾಗಿದೆಯೇ ಎನ್ನುವುದರ ಬಗ್ಗೆ ಪರಾಮರ್ಶೆ ಆಗಬೇಕಿದೆ ಎಂದರು.
ಪಶುಸಂಗೋಪನೆ ಇಲಾಖೆ ಅಧಿಕಾರಿ ಡಾ. ಸಾಲಿ, ಜಿಲ್ಲೆಯಲ್ಲಿ ಕಳೆದ ವರ್ಷ ಕೈಗೊಂಡ ಜಾನುವಾರು ಗಣತಿಯಲ್ಲಿ ಸುಮಾರು 2. 75 ಲಕ್ಷ ಜಾನುವಾರು ಹಾಗೂ 12 ಲಕ್ಷ ಕೋಳಿ ಇರುವ ಬಗ್ಗೆ ಸಮೀಕ್ಷೆ ಕೈಗೊಳ್ಳಲಾಗಿತ್ತು. ಈ ವರ್ಷದ ಜಾನುವಾರು ಗಣತಿ ಜುಲೈನಲ್ಲಿ ಕೈಗೊಳ್ಳಲಾಗುತ್ತಿದ್ದು, ಸಮೀಕ್ಷೆ ಬಳಿಕ ವರದಿ ಸಲ್ಲಿಸಲಾಗುವುದು ಎಂದರು.
ಕಾರ್ಯವೈಖರಿಗೆ ಅಸಮಾಧಾನ : ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಡಿ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ವತಿಯಿಂದ ಮಹಿಳೆಯರಿಗೆ ಸ್ವಯಂ ಉದ್ಯೋಗಕ್ಕಾಗಿ 2017-18 ನೇ ಸಾಲಿನಲ್ಲಿ ನೀಡುವ ಸಾಲ ಯೋಜನೆಗಳಡಿ ಜಿಲ್ಲೆಯಲ್ಲಿ ಈವರೆಗೆ ಫಲಾನುಭವಿಗಳ ಆಯ್ಕೆ ಪ್ರಕ್ರಿಯೆ ಪೂರ್ಣಗೊಳ್ಳದಿರುವುದಕ್ಕೆ ಅಸಮಾಧಾನ ವ್ಯಕ್ತಪಡಿಸಿದ ಸಂಸದ ಕರಡಿ ಸಂಗಣ್ಣ, ಮಹಿಳೆಯರು ಆರ್ಥಿಕ ಸ್ವಾವಲಂಬಿಗಳಾಗಲು ಸಾಲ ಯೋಜನೆ ರೂಪಿಸಿ, ಜಾರಿಗೊಳಿಸುತ್ತವೆ. ಆದರೆ ಅಧಿಕಾರಿಗಳ ವಿಳಂಬ ಧೋರಣೆಯಿಂದಾಗಿ ಯೋಜನೆ ನಿರೀಕ್ಷಿತ ಉದ್ದೇಶ ತಲುಪಲು ವಿಫಲವಾಗುತ್ತವೆ. ನಿಯಮಾನುಸಾರ ಆಯ್ಕೆ ಪ್ರಕ್ರಿಯೆ ಪೂರ್ಣಗೊಳಿಸಿ, ಕೂಡಲೆ ಫಲಾನುಭವಿಗಳಿಗೆ ಇನ್ನಾದರೂ ಸೌಲಭ್ಯ ತಲುಪಿಸಿ ಎಂದು ತಾಕೀತು ಮಾಡಿದರು.
ಅಸಮಧಾನ: ಗಂಗಾ ಕಲ್ಯಾಣ ಯೋಜನೆಯಡಿ ಅಲ್ಪಸಂಖ್ಯಾತರರಿಗೆ ಕಳೆದ ವರ್ಷ 2 ಫಲಾನುಭವಿಗಳಿಗೆ ವಿದ್ಯುತ್ ಸಂಪರ್ಕ ಕಲ್ಪಿಸಲಾಗಿದೆ ಎಂಬುದಾಗಿ ಜೆಸ್ಕಾಂ ಅಧಿಕಾರಿಗಳು ನೀಡಿದ ವರದಿಗೆ ಸಂಸದರು ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. 271 ಫಲಾನುಭವಿಗಳಿಗೆ ಶೇ. 15 ರಂತೆ ಅಲ್ಪಸಂಖ್ಯಾತ ಸಮುದಾಯದ ಒಟ್ಟು 40 ಫಲಾನುಭವಿಗಳ ಬೋರ್ವೆಲ್ಗಳಿಗೆ ವಿದ್ಯುತ್ ಸಂಪರ್ಕ ಕಲ್ಪಿಸಬೇಕಿತ್ತು. ಆದರೆ ಕೇವಲ 2 ಕ್ಕೆ ಮಾತ್ರ ಸಂಪರ್ಕ ಕಲ್ಪಿಸಲಾಗಿದೆ. ಕಳೆದ ಆರ್ಥಿಕ ವರ್ಷದ ಫಲಾನುಭವಿಗಳಿಗೆ ಇನ್ನೂ ಬೋರ್ವೆಲ್ ಕೊರೆಯಿಸಿಲ್ಲ. ಈ ಫಲಾನುಭವಿಗಳ ಹೊಲದಲ್ಲಿ ಬೋರ್ವೆಲ್ ಕೊರೆಯಿಸುವುದು, ಪಂಪ್ಸೆಟ್ ಮೋಟಾರು ಅಳವಡಿಸಿ, ವಿದ್ಯುತ್ ಸಂಪರ್ಕ ಕಲ್ಪಿಸುವುದು ಯಾವಾಗ ಎಂದು ಜೆಸ್ಕಾಂ ಮತ್ತು ನಿಗಮಗಳ ಅಧಿಕಾರಿಗಳಿಗೆ ತರಾಟೆಗೆ ತೆಗೆದುಕೊಂಡರು.
ನಾನಾ ಇಲಾಖೆಗಳಡಿ ಅಲ್ಪಸಂಖ್ಯಾತರ ಸಮುದಾಯಕ್ಕೆ ಒದಗಿಸಲಾಗಿರುವ ಸೌಲಭ್ಯಗಳ ಕುರಿತು ಸಂಸದರು ಪ್ರಗತಿ ಪರಿಶೀಲಿಸಿದರು.
ಅಪರ ಜಿಲ್ಲಾಧಿಕಾರಿ ಡಾ. ರುದ್ರೇಶ್ ಘಾಳಿ, ಸಮಿತಿಯ ನಾಮನಿರ್ದೇಶಿತ ಸದಸ್ಯರಾದ ಸಿರಾಜ್ ಕರಮುಡಿ, ಮಹ್ಮದ್ ಸಿರಾಜ್, ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿ ಮೆಹಮೂದ್ ಸೇರಿ ಇತರರು ಇದ್ದರು.