ಆ್ಯಪ್ನಗರ

ವಾಟಾಳ ನಾಗರಾಜ ಕಾಂಗ್ರೆಸ್‌ ಏಜೆಂಟ್‌: ಸಂಸದ ಜೋಶಿ ಟೀಕೆ

ವಾಟಾಳ ನಾಗರಾಜ್‌ ಅವರು ಕಾಂಗ್ರೆಸ್‌ ಏಜೆಂಟ್‌ರಂತೆ ಕೆಲಸ ನಿರ್ವಹಿಸುತ್ತಿದ್ದಾರೆ ಎಂದು ಸಂಸದ ಪ್ರಹ್ಲಾದ್‌ ಜೋಶಿ ಆರೋಪಿಸಿದರು.

Vijaya Karnataka 1 Feb 2018, 8:20 am

ಕೊಪ್ಪಳ: ವಾಟಾಳ ನಾಗರಾಜ್‌ ಅವರು ಕಾಂಗ್ರೆಸ್‌ ಏಜೆಂಟ್‌ರಂತೆ ಕೆಲಸ ನಿರ್ವಹಿಸುತ್ತಿದ್ದಾರೆ ಎಂದು ಸಂಸದ ಪ್ರಹ್ಲಾದ್‌ ಜೋಶಿ ಆರೋಪಿಸಿದರು.

ಇಲ್ಲಿನ ಬಿಜೆಪಿ ಕಾರ್ಯಾಲಯದಲ್ಲಿ ಬುಧವಾರ, ಜಿಲ್ಲಾ ಬಿಜೆಪಿ ಪದಾಧಿಕಾರಿಗಳ ಸಭೆ ಉದ್ಘಾಟಿಸಿ ಅವರು ಮಾತನಾಡಿದರು. ''ವೋಟ್‌ಬ್ಯಾಂಕ್‌ಗೆ ಸಿಎಂ ಸಿದ್ದರಾಮಯ್ಯ ಅವರು ಏನು ಬೇಕಾದರೂ ಮಾಡುತ್ತಾರೆ. ಮಹದಾಯಿ ವಿಷಯದಲ್ಲಿ ಅವರು ಕೆಲವು ಸಂಘಟನೆಗಳೊಂದಿಗೆ ಹೊಂದಾಣಿಕೆ ಮಾಡಿಕೊಂಡಿದ್ದಾರೆ. ವಾಟಾಳ ನಾಗರಾಜ್‌ ಅವರು ಹಣ ಪಡೆದು ಹೋರಾಟ ಮಾಡುತ್ತಿದ್ದಾರೆ'' ಎಂದು ದೂರಿದರು.

''ಸೋನಿಯಾ ಹಾಗೂ ರಾಹುಲ್‌ ಗಾಂಧಿ ಅವರು ಸುಮ್ಮನಿದ್ದರೆ ಮಹದಾಯಿ ವಿವಾದವನ್ನು ಬಿಜೆಪಿ ಇತ್ಯರ್ಥಗೊಳಿಸಲಿದೆ. ರಾಜ್ಯ ಸರಕಾರ ಪೊಲೀಸ್‌ ಬಲದ ಮೂಲಕ ರಾಜಕೀಯ ವಿರೋಧಿಗಳನ್ನು ಹತ್ತಿಕ್ಕುವ ಪ್ರಯತ್ನ ಮಾಡುತ್ತಿದೆ. ಪೊಲೀಸ್‌ ಅಧಿಕಾರಿಗಳು ಸರಕಾರದ ಆಣತಿಯಂತೆ ಕುಣಿಯುತ್ತಿದ್ದಾರೆ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್‌ ಶಾ ನೇತೃತ್ವದಲ್ಲಿ 19 ರಾಜ್ಯಗಳಲ್ಲಿ ಬಿಜೆಪಿ ಗೆದ್ದಿದೆ. ಅವರ ಬಗ್ಗೆ ಕಾಂಗ್ರೆಸ್‌ ನಾಯಕರಿಗೆ ಮಾತನಾಡುವ ನೈತಿಕತೆಯಿಲ್ಲ'' ಎಂದು ದೂರಿದರು.

ಆನಂದ್‌ಸಿಂಗ್‌ಗೆ ಒಳ್ಳೆಯದಾಗಲಿ:

''ಆನಂದ್‌ ಸಿಂಗ್‌ ಅವರು ಕಾಂಗ್ರೆಸ್‌ ಸೇರಿದ್ದು, ಅವರಿಗೆ ಒಳ್ಳೆಯದಾಗಲಿ. ಸಿಎಂ ಸಿದ್ದರಾಮಯ್ಯ ಅವರು, ಬಳ್ಳಾರಿಯವರೆಗೆ ಪಾದಯಾತ್ರೆ ಮಾಡಿದ್ದರು. ಬಿಜೆಪಿಯವರು ಜೈಲಿಗೆ ಹೋಗಿ ಬಂದವರು ಎಂದು ಪದೇ ಪದೆ ಟೀಕಿಸುತ್ತಿದ್ದರು. ಆದರೆ, ಸದ್ಯ ಕಾಂಗ್ರೆಸ್‌ ಸೇರಿ ಆನಂದಸಿಂಗ್‌ ಒಳ್ಳೆಯವರಾಗುತ್ತಾರೆ. ಗಂಗಾವತಿ ಶಾಸಕ ಇಕ್ಬಾಲ್‌ ಅನ್ಸಾರಿ ಅವರು ಅಲ್ಪಸಂಖ್ಯಾತರನ್ನು ಓಲೈಸಿ ಮತಗಳ ಕ್ರೋಢೀಕರಣಕ್ಕೆ ಏನೆಲ್ಲ ಮಾತನಾಡುತ್ತಾರೆ'' ಎಂದು ಟೀಕಿಸಿದರು.

ಶಾಸಕ ದೊಡ್ಡನಗೌಡ ಪಾಟೀಲ್‌, ಮಾಜಿ ಸಂಸದ ಶಿವರಾಮನಗೌಡ, ಮಾಜಿ ಎಮ್ಮೆಲ್ಸಿ ಹಾಲಪ್ಪ ಆಚಾರ್‌, ಮಾಜಿ ಶಾಸಕರಾದ ಜಿ.ವೀರಪ್ಪ, ಕೆ.ಶರಣಪ್ಪ, ಪಕ್ಷದ ಜಿಲ್ಲಾಧ್ಯಕ್ಷ ವಿರೂಪಾಕ್ಷ ಪ್ಪ ಸಿಂಗನಾಳ, ಮುಖಂಡ ಬಸವರಾಜ ಧಡೇಸುಗೂರು ಸೇರಿ ಇತರರಿದ್ದರು.

ಸಿಎಂ ಸಿದ್ದರಾಮಯ್ಯ ಅವರು ಪಾಕಿಸ್ತಾನಕ್ಕೆ ಸಪೋರ್ಟ್‌ ಮಾಡುವ ಮನಸ್ಥಿತಿ ಹೊಂದಿದ್ದಾರೆ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್‌ ಶಾ ಅವರು ರಾಜ್ಯಕ್ಕೆ ಬಂದಾಗ ಪ್ರತಿಭಟನೆ ನಡೆಸಿದರು. ಫೆ.4ರಂದು ಪ್ರಧಾನಿ ನರೇಂದ್ರ ಮೋದಿ ಅವರ ಭೇಟಿ ಸಂದರ್ಭದಲ್ಲೂ ಇಂತಹ ಪ್ರತಿಭಟನೆ ನಡೆಸಲು ಮುಂದಾಗಿದ್ದಾರೆ.

Vijaya Karnataka Web vatal is congress agent prahlad joshi
ವಾಟಾಳ ನಾಗರಾಜ ಕಾಂಗ್ರೆಸ್‌ ಏಜೆಂಟ್‌: ಸಂಸದ ಜೋಶಿ ಟೀಕೆ

-ಪ್ರಹ್ಲಾದ್‌ ಜೋಶಿ, ಸಂಸದರು

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ