ಕೊಪ್ಪಳ: ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ನೇತೃತ್ವದಲ್ಲಿ ರಾಜ್ಯ ಸರ್ಕಾರ ಸಮರ್ಥವಾಗಿ ಮುನ್ನಡೆಯಲಿದ್ದು, ರಾಜ್ಯದ ಮುಖ್ಯಮಂತ್ರಿಯಾಗಿ ಅವರೇ ಮುನ್ನಡೆಯಲಿದ್ದಾರೆ ಎಂದು ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವರೂ ಆಗಿರುವ ಕೃಷಿ ಸಚಿವ ಬಿಸಿ ಪಾಟೀಲ್ ಹೇಳಿದ್ದಾರೆ.
ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ನೇತೃತ್ವದ ರಾಜ್ಯ ಸರ್ಕಾರ ಒಂದು ವರ್ಷ ಅವಧಿ ಪೂರೈಸಿದ ಹಿನ್ನೆಲೆಯಲ್ಲಿ, ಕೊಪ್ಪಳದಲ್ಲಿ ಪತ್ರಕರ್ತರನ್ನು ಉದ್ದೇಶಿಸಿ ಮತನಾಡಿದ ಬಿಸಿ ಪಾಟೀಲ್, ಯಡಿಯೂರಪ್ಪ ನೇತೃತ್ವದಲ್ಲಿ ರಾಜ್ಯದ ಸರ್ವಾಂಗೀಣ ಅಭಿವದ್ಧಿಗೆ ಶ್ರಮಿಸಲಾಗುವುದು ಎಂದು ಭರವಸೆ ನೀಡಿದರು.
#Live Updates: ಬಿಎಸ್ವೈ ಸರ್ಕಾರಕ್ಕೆ ಒಂದು ವರ್ಷ; 'ಸವಾಲುಗಳ ವರ್ಷ-ಪರಿಹಾರದ ಸ್ಪರ್ಶ'
ರಾಜ್ಯ ಸರ್ಕಾರ ಸುಭದ್ರವಾಗಿದ್ದು, ಬಿಎಸ್ವೈ ನೇತೃತ್ವದಲ್ಲೇ ಪೂರ್ಣಾವಧಿಯನ್ನು ಪೂರೈಸಲಿದೆ ಎಂದು ಭರವಸೆ ವ್ಯಕ್ತಪಡಿಸಿದ ಬಿಸಿ ಪಾಟೀಲ್, ಎಲ್ಲಾ ಸವಾಲುಗಳನ್ನು ಎದುರಿಸಿ ರಾಜ್ಯವನ್ನು ಅಭಿವೃದ್ಧಿಯ ಪಥದತ್ತ ಮುನ್ನಡೆಸಲು ಶ್ರಮಿಸುವುದಾಗಿ ಹೇಳಿದರು.
ಸರ್ಕಾರದ ಒಂದು ವರ್ಷದ ಸಾಧನೆ ತೃಪ್ತಿ ತಂದಿದೆ ಎಂದ ಬಿಸಿ ಪಾಟೀಲ್, ಕೋವಿಡ್ ಸವಾಲುಗಳನ್ನು ಸರ್ಕಾರ ಸಮರ್ಥವಾಗಿ ಎದುರಿಸುತ್ತಿದೆ ಎಂದು ಅಭಿಪ್ರಾಯಪಟ್ಟರು.
ಸಿಎಂ ಬಿಎಸ್ವೈ ಸರಕಾರಕ್ಕೆ ಒಂದು ವರ್ಷ: ಸೋಮವಾರ ಮಂಡನೆಯಾಗಲಿದೆ ಸರಕಾರದ ರಿಪೋರ್ಟ್ ಕಾರ್ಡ್!
ರಾಜ್ಯದ ಒಳಿತಿಗಾಗಿ ಬಿಎಸ್ವೈ ಹಾಗೂ ಇಡೀ ಸರ್ಕಾರ ಹಗಲಿರುಳೂ ಶ್ರಮಿಸುತ್ತಿದ್ದು, ಎಲ್ಲಾ ಸವಾಲುಗಳನ್ನು ಮೆಟ್ಟಿ ನಿಲ್ಲುವ ವಿಶ್ವಾಸವಿದೆ ಎಂದು ಬಿಸಿ ಪಾಟೀಲ್ ಈ ವೇಳೆ ಭರವಸೆ ವ್ಯಕ್ತಪಡಿಸಿದರು.
ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ನೇತೃತ್ವದ ರಾಜ್ಯ ಸರ್ಕಾರ ಒಂದು ವರ್ಷ ಅವಧಿ ಪೂರೈಸಿದ ಹಿನ್ನೆಲೆಯಲ್ಲಿ, ಕೊಪ್ಪಳದಲ್ಲಿ ಪತ್ರಕರ್ತರನ್ನು ಉದ್ದೇಶಿಸಿ ಮತನಾಡಿದ ಬಿಸಿ ಪಾಟೀಲ್, ಯಡಿಯೂರಪ್ಪ ನೇತೃತ್ವದಲ್ಲಿ ರಾಜ್ಯದ ಸರ್ವಾಂಗೀಣ ಅಭಿವದ್ಧಿಗೆ ಶ್ರಮಿಸಲಾಗುವುದು ಎಂದು ಭರವಸೆ ನೀಡಿದರು.
#Live Updates: ಬಿಎಸ್ವೈ ಸರ್ಕಾರಕ್ಕೆ ಒಂದು ವರ್ಷ; 'ಸವಾಲುಗಳ ವರ್ಷ-ಪರಿಹಾರದ ಸ್ಪರ್ಶ'
ರಾಜ್ಯ ಸರ್ಕಾರ ಸುಭದ್ರವಾಗಿದ್ದು, ಬಿಎಸ್ವೈ ನೇತೃತ್ವದಲ್ಲೇ ಪೂರ್ಣಾವಧಿಯನ್ನು ಪೂರೈಸಲಿದೆ ಎಂದು ಭರವಸೆ ವ್ಯಕ್ತಪಡಿಸಿದ ಬಿಸಿ ಪಾಟೀಲ್, ಎಲ್ಲಾ ಸವಾಲುಗಳನ್ನು ಎದುರಿಸಿ ರಾಜ್ಯವನ್ನು ಅಭಿವೃದ್ಧಿಯ ಪಥದತ್ತ ಮುನ್ನಡೆಸಲು ಶ್ರಮಿಸುವುದಾಗಿ ಹೇಳಿದರು.
ಸರ್ಕಾರದ ಒಂದು ವರ್ಷದ ಸಾಧನೆ ತೃಪ್ತಿ ತಂದಿದೆ ಎಂದ ಬಿಸಿ ಪಾಟೀಲ್, ಕೋವಿಡ್ ಸವಾಲುಗಳನ್ನು ಸರ್ಕಾರ ಸಮರ್ಥವಾಗಿ ಎದುರಿಸುತ್ತಿದೆ ಎಂದು ಅಭಿಪ್ರಾಯಪಟ್ಟರು.
ಸಿಎಂ ಬಿಎಸ್ವೈ ಸರಕಾರಕ್ಕೆ ಒಂದು ವರ್ಷ: ಸೋಮವಾರ ಮಂಡನೆಯಾಗಲಿದೆ ಸರಕಾರದ ರಿಪೋರ್ಟ್ ಕಾರ್ಡ್!
ರಾಜ್ಯದ ಒಳಿತಿಗಾಗಿ ಬಿಎಸ್ವೈ ಹಾಗೂ ಇಡೀ ಸರ್ಕಾರ ಹಗಲಿರುಳೂ ಶ್ರಮಿಸುತ್ತಿದ್ದು, ಎಲ್ಲಾ ಸವಾಲುಗಳನ್ನು ಮೆಟ್ಟಿ ನಿಲ್ಲುವ ವಿಶ್ವಾಸವಿದೆ ಎಂದು ಬಿಸಿ ಪಾಟೀಲ್ ಈ ವೇಳೆ ಭರವಸೆ ವ್ಯಕ್ತಪಡಿಸಿದರು.