ಆ್ಯಪ್ನಗರ

ಬಿಎಸ್‌ವೈ ಸುಳ್ಳಿನಲ್ಲಿ ನಿಸ್ಸೀಮರು: ಸಿಎಂ

ಯಡಿಯೂರಪ್ಪ ಸುಳ್ಳು ಹೇಳುವುದರಲ್ಲಿ ನಿಸ್ಸೀಮರಾಗಿದ್ದು, ಬ್ಲೂ ಫಿಲಂ ನೋಡುವವರಿಂದ ಪಾಠ ಕಲಿಯಬೇಕಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

Vijaya Karnataka Web 22 Sep 2017, 5:28 pm
ಕೊಪ್ಪಳ: ಯಡಿಯೂರಪ್ಪ ಸುಳ್ಳು ಹೇಳುವುದರಲ್ಲಿ ನಿಸ್ಸೀಮರಾಗಿದ್ದು, ಬ್ಲೂ ಫಿಲಂ ನೋಡುವವರಿಂದ ಪಾಠ ಕಲಿಯಬೇಕಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.
Vijaya Karnataka Web yeddyurappa is a liar says cm
ಬಿಎಸ್‌ವೈ ಸುಳ್ಳಿನಲ್ಲಿ ನಿಸ್ಸೀಮರು: ಸಿಎಂ


ಬಸಾಪುರ ಗ್ರಾಮದ ಬಳಿಯ ಖಾಸಗಿ ವಿಮಾನ ನಿಲ್ದಾಣದಲ್ಲಿ ಮಾತನಾಡಿದ ಅವರು, ಯಡಿಯೂರಪ್ಪ ಅವರನ್ನು ಅವ್ಯವಹಾರ ಕುರಿತು ಚರ್ಚೆಗಾಗಿ ಒಂದೇ ವೇದಿಕೆಗೆ ಆಹ್ವಾನಿಸಲಾಗಿತ್ತು. ಆದರೆ ಬರುವುದಕ್ಕೆ ಒಪ್ಪುತ್ತಿಲ್ಲ ಎಂದರು.

ಕಾಂಗ್ರೆಸ್ ಸರಕಾರ ನೀರಾವರಿ ಯೋಜನೆಗಳಿಗೆ 60 ಸಾವಿರ ಕೋಟಿ ರೂ. ನೀಡಿದೆ. ಕಾಂಗ್ರೆಸ್ ಸುಳ್ಳು ಹೇಳುವವರ ತವರು ಮನೆ ಅಂತ ಲಕ್ಷಣ ಸವದಿಯ ಹೇಳಿಕೆಗೆ ತಿರುಗೇಟು ನೀಡಿದ ಸಿಎಂ, ಬ್ಲೂ ಫಿಲ್ಮಂ ನೋಡಿದವರಿಂದ ನಾವು ಹೇಳಿಸಿಕೊಳ್ಳಬೇಕಾಗಿಲ್ಲ ಎಂದು ಸಿಎಂ ಹೇಳಿದರು.

ಯಡಿಯೂರಪ್ಪ ಯಾವುದೇ ಕಾರ್ಯಕ್ರಮಕ್ಕೆ ಹೋದರೂ ಸುಳ್ಳು ಹೇಳುತ್ತಾರೆ. ಶಾಸಕ ಕೆ. ಎನ್. ರಾಜಣ್ಣ ಅವರು ಕಾಂಗ್ರೆಸ್ ಕಳ್ಳರ ಪಕ್ಷ ಎಂದು ಹೇಳಿದ್ದಕ್ಕೆ ಪ್ರತಿಕ್ರಿಯಿಸಿ, ಅವರು ಯಾವ ವಿಚಾರದಲ್ಲಿ ಹೇಳಿದ್ದಾರೆ ಅನ್ನುವುದು ನನಗೆ ಗೊತ್ತಿಲ್ಲ. ರಾಜಣ್ಣ ಅವರೊಂದಿಗೆ ಮಾತನಾಡುತ್ತೇನೆ ಎಂದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ