ಆ್ಯಪ್ನಗರ

ಕೊಪ್ಪಳ: ಚಿರತೆ ದಾಳಿ, ದನ ಕಾಯುತ್ತಿದ್ದ ಯುವಕ ಸಾವು

ಚಿರತೆ ಕಾಣುತ್ತಲೇ ಹಸುಗಳು ಎಲ್ಲೆಂದರಲ್ಲಿ ಓಡಿವೆ. ಸ್ಥಳೀಯರು ಸ್ಥಳಕ್ಕೆ ಆಗಮಿಸಿದಾಗ ಯುವಕನ ಮೇಲೆ‌ ದಾಳಿ ನಡೆಸಿರುವುದು ಗೊತ್ತಾಗಿದೆ. ಸ್ಥಳಕ್ಕೆ ಕಂದಾಯ ಹಾಗೂ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದರು.

Vijaya Karnataka Web 1 Jan 2021, 7:46 pm
ಕೊಪ್ಪಳ: ಗಂಗಾವತಿ ತಾಲೂಕಿನ ವಿರೂಪಾಪುರಗಡ್ಡಿ ಬಳಿ ದನ ಕಾಯುತ್ತಿದ್ದ ಯುವಕನ ಮೇಲೆ ಚಿರತೆ ದಾಳಿ ನಡೆಸಿದೆ.
Vijaya Karnataka Web ಚಿರತೆ
ಚಿರತೆ


ತೀವ್ರ ಗಾಯಗೊಂಡಿದ್ದ ಆ ಯುವಕ ಮೃತಪಟ್ಟಿದ್ದಾರೆ. ಮೃತ ವ್ಯಕ್ತಿಯನ್ನು ಕರಿಯಮ್ಮಗಡ್ಡಿಯ ರಾಘವೇಂದ್ರ ವೆಂಕಟೇಶ್ (19) ಎಂದು ಗುರುತಿಸಲಾಗಿದೆ.

ಋಷಿಮುಖ ಬೆಟ್ಟದ ಬಳಿ ಈ ಘಟನೆ ನಡೆದಿದೆ. ಕುರುಚಲು ಪ್ರದೇಶದಲ್ಲಿ ದನ ಕಾಯಲು ತೆರಳಿದ ವೇಳೆಯಲ್ಲಿ ಚಿರತೆ ದಾಳಿ ನಡೆಸಿದೆ.

ಚಿರತೆ ಕಾಣುತ್ತಲೇ ಹಸುಗಳು ಎಲ್ಲೆಂದರಲ್ಲಿ ಓಡಿವೆ. ಸ್ಥಳೀಯರು ಸ್ಥಳಕ್ಕೆ ಆಗಮಿಸಿದಾಗ ಯುವಕನ ಮೇಲೆ‌ ದಾಳಿ ನಡೆಸಿರುವುದು ಗೊತ್ತಾಗಿದೆ.

ಸ್ಥಳಕ್ಕೆ ಕಂದಾಯ ಹಾಗೂ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಚಿರತೆಗಳ ಹಾವಳಿ ಇತ್ತೀಚೆಗೆ ಹೆಚ್ಚಾಗಿದೆ. ಈಗಾಗಲೇ ಅರಣ್ಯ ಇಲಾಖೆಗೆ ಸಾಕಷ್ಟು ಮನವಿ ಮಾಡಿದರೂ ಯಾವುದೇ ಕ್ರಮ ಕೈಗೊಂಡಿಲ್ಲ. ಕೆಲವು ದಿನಗಳ ಹಿಂದೆ ಚಿರತೆ ಹಿಡಿಯಲು ಬೋನು ಇಡಲಾಗಿತ್ತು. ಆದರೆ ಇದುವರೆಗೆ ಚಿರತೆ ಸೆರೆ ಸಿಕ್ಕಿಲ್ಲ. ಇನ್ನಾದರೂ ಅರಣ್ಯ ಇಲಾಖೆ ಹಾಗೂ ಪೊಲೀಸರು ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಸ್ಥಳೀಯರು ಮನವಿ ಮಾಡಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ