ಆ್ಯಪ್ನಗರ

ಅಪಘಾತ: ಎಂಜಿನಿಯರ್ ವಿದ್ಯಾರ್ಥಿಗಳ ಸಾವು

ಬೆಂಗಳೂರು-ಮೈಸೂರು ಹೆದ್ದಾರಿಯ ಕೆ.ಶೆಟ್ಟಹಳ್ಳಿ ಬಳಿ ರಸ್ತೆ ವಿಭಜಕಕ್ಕೆ ಭಾನುವಾರ ಬೈಕ್ ಡಿಕ್ಕಿಯಾಗಿ ಇಬ್ಬರು ಮತಪಟ್ಟರು.

Vijaya Karnataka Web 14 Mar 2016, 5:09 am
ಶ್ರೀರಂಗಪಟ್ಟಣ: ಬೆಂಗಳೂರು-ಮೈಸೂರು ಹೆದ್ದಾರಿಯ ಕೆ.ಶೆಟ್ಟಹಳ್ಳಿ ಬಳಿ ರಸ್ತೆ ವಿಭಜಕಕ್ಕೆ ಭಾನುವಾರ ಬೈಕ್ ಡಿಕ್ಕಿಯಾಗಿ ಇಬ್ಬರು ಮತಪಟ್ಟರು.
Vijaya Karnataka Web
ಅಪಘಾತ: ಎಂಜಿನಿಯರ್ ವಿದ್ಯಾರ್ಥಿಗಳ ಸಾವು

ಬೆಂಗಳೂರು ಸಮೀಪದ ಕುಂಬಳಗೋಡಿನ ಡಾನ್ ಬಾಸ್ಕೋ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಎಂಜಿನಿಯರಿಂಗ್ ಕಾಲೇಜಿನ ಪ್ರಥಮ ವರ್ಷದ ಎಂಜಿನಿಯರಿಂಗ್ ವಿದ್ಯಾರ್ಥಿಗಳಾದ ತನ್ಮಯ್ ಶೀಲ್(19) ಹಾಗೂ ಆಯುಷ್ ಶೆಟ್ಟಿ(19) ಮತರು. ರಸ್ತೆಯಲ್ಲಿ ಪದೇ ಪದೇ ಅಪಘಾತಗಳಾಗುತ್ತಿದ್ದರೂ ಕ್ರಮ ಕೈಗೊಂಡಿಲ್ಲ ಎಂದು ಆರೋಪಿಸಿ ಗ್ರಾಮಸ್ಥರು ಪ್ರತಿಭಟನೆ ನಡೆಸಿದರು.
ಭಾನುವಾರ ರಜೆ ಇದ್ದ ಕಾರಣ ಎರಡು ಬೈಕ್‌ನಲ್ಲಿ ನಾಲ್ಕು ಮಂದಿ ಸ್ನೇಹಿತರು ಬೆಂಗಳೂರಿನಿಂದ ಮೈಸೂರಿಗೆ ತೆರಳುತ್ತಿದ್ದರು. ಈ ವೇಳೆ ಕೆ.ಶೆಟ್ಟಹಳ್ಳಿ ಬಳಿ ತನ್ಮಯ್ ಬೈಕ್ ನಿಯಂತ್ರಣ ತಪ್ಪಿ ರಸ್ತೆ ವಿಭಜಕಕ್ಕೆ ಡಿಕ್ಕಿಯಾಯಿತು. ಗಂಭೀರ ಗಾಯಗೊಂಡ ಆಯುಷ್ ಶೆಟ್ಟಿ ಸ್ಥಳದಲ್ಲೇ ಮತಪಟ್ಟರು. ತನ್ಮಯ್ ಶೀಲ್ ಆಸ್ಪತ್ರೆಗೆ ಕರೆದೊಯ್ಯುವ ಮಾರ್ಗ ಮಧ್ಯೆ ಮೃತಪಟ್ಟ. ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಿ ವಾರಸುದಾರರಿಗೆ ಶವಗಳನ್ನು ಒಪ್ಪಿಸಲಾಗಿದೆ. ಶ್ರೀರಂಗಪಟ್ಟಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರತಿಭಟನೆ: ಕೆ.ಶೆಟ್ಟಹಳ್ಳಿ ಬಳಿ ಮೂರು ತಿಂಗಳಲ್ಲಿ 6ಕ್ಕೂ ಹೆಚ್ಚು ಮಂದಿ ಬೈಕ್ ಸವಾರರು ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದು ಮತಪಟ್ಟಿದ್ದಾರೆ. ಹೆದ್ದಾರಿಯಲ್ಲಿರುವ ಸಣ್ಣ ತಿರುವು ಬಳಿಯೇ ಅಪಘಾತಗಳು ಸಂಭವಿಸುತ್ತಿವೆ. ಸ್ಥಳೀಯ ಪೊಲೀಸರು ಇಲ್ಲಿ ಸೂಚನಾ ಫಲಕ ಹಾಕಬೇಕು. ಅಪಘಾತಗಳು ನಡೆಯದಂತೆ ಉಬ್ಬುದಿಣ್ಣೆ ನಿರ್ಮಿಸಬೇಕು ಎಂದು ಒತ್ತಾಯಿಸಿ ಹೆದ್ದಾರಿ ತಡೆದು ಪ್ರತಿಭಟನೆ ನಡೆಸಿದರು.
ಪೊಲೀಸ್ ಇಲಾಖೆ ಯಾವುದೇ ಸೂಚನಾ ಫಲಕ ಹಾಕಿಲ್ಲ ಜಿಗ್ ಜಾಗ್ ವ್ಯವಸ್ಥೆ ಮಾಡಿ ಕೈತೊಳೆದುಕೊಂಡಿದೆ. ಅಪಘಾತಗಳನ್ನು ತಡೆಯಲು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು. ಪ್ರತಿಭಟನೆ ನಡೆಸಿದ್ದರಿಂದ ಸುಮಾರು ಒಂದೂವರೆ ಗಂಟೆಕಾಲ ರಸ್ತೆ ಸಂಚಾರ ಅಸ್ತವ್ಯಸ್ತವಾಗಿತ್ತು. ಬಸ್ ಡಿಕ್ಕಿ ಬೈಕ್ ಜಖಂ: ತಾಲೂಕಿನ ನಗುವನಹಳ್ಳಿ ಗೇಟ್ ಬಳಿ ಬೆಂಗಳೂರಿನಿಂದ ಮೈಸೂರು ಕಡೆಗೆ ಚಲಿಸುತ್ತಿದ್ದ ಬೈಕ್‌ಗೆ ಕೆಎಸ್‌ಆರ್‌ಟಿಸಿ ಬಸ್ ಹಿಂದಿನಿಂದ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಅದಷ್ಟವಶಾತ್ ಪ್ರಾಣಾಪಯದಿಂದ ಪಾರಾಗಿದ್ದು ಬೈಕ್ ಸಂಪೂರ್ಣವಾಗಿ ನಜ್ಜುಗುಜ್ಜಾಗಿರುವ ಘಟನೆ ಭಾನುವಾರ ನಡೆದಿದೆ. ಬಸ್ ಸಂಖ್ಯೆ ತಿಳಿದು ಬಂದಿಲ್ಲ. ಡಿಕ್ಕಿ ಹೊಡೆದಾಗ ವಿಭಜಕದ ಮೇಲೆ ಸವಾರ ಹಾರಿ ಬಿದ್ದಿದ್ದಾನೆ. ಬಸ್ ಬೈಕ್ ಮೇಲೆ ಹರಿದು ಹೋಯಿತು ಎಂದು ಬೈಕ್ ಸವಾರ ಧನುಷ್ ಪೊಲೀಸರಿಗೆ ನೀಡಿರುವ ದೂರಿನಲ್ಲಿ ತಿಳಿಸಿದ್ದಾನೆ. ಶ್ರೀರಂಗಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕೆ.ಶೆಟ್ಟಹಳ್ಳಿ ಬಳಿ ಹೆದ್ದಾರಿಯಲ್ಲಿ ನಡೆಯುತ್ತಿರುವ ಅಪಘಾತಗಳನ್ನು ತಪ್ಪಿಸುವ ಸಲುವಾಗಿ ಸ್ಥಳ ಪರಿಶೀಲನೆ ಮಾಡುವಂತೆ ರಾಷ್ಟ್ರೀಯ ಹೆದ್ದಾರಿ ಎಂಜಿನಿಯರ್‌ಗೆ ಪತ್ರ ಬರೆಯಲಾಗಿದೆ. ಶೀಘ್ರ ಅಪಘಾತ ತಡೆಗೆ ಸೂಕ್ತ ಕ್ರಮ ಕೈಗೊಳ್ಳಲಾಗವುದು. - ಎಂ.ಕೆ ದೀಪಕ್, ಸಿಪಿಐ, ಶ್ರೀರಂಗಪಟ್ಟಣ ಪೊಲೀಸ್ ಠಾಣೆ

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ