ಆ್ಯಪ್ನಗರ

ವಿಚಾರ ಸಂಕಿರಣ ರದ್ದು: ದಸಂಸ ಪ್ರತಿಭಟನೆ

‘‘ದಲಿತ ಜಾಗತಿ ಹಾಗೂ ಶೋಷಿತ ಬದುಕುಗಳಿಗೆ ಸಾಂವಿಧಾನಿಕ ಆತ್ಮಸ್ಥೆರ್ಯ’’ ಕುರಿತ ವಿಚಾರ ಸಂಕಿರಣ ಸ್ಥಗಿತಗೊಂಡ ಹಿನ್ನೆಲೆಯಲ್ಲಿ ದಸಂಸ ಮುಖಂಡರು ಸಮಾಜ ಕಲ್ಯಾಣ ಇಲಾಖೆ ಅಧಿಕಾರಿ ಹಾಗೂ ತಾಲೂಕು ಆಡಳಿತದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿ ಪ್ರತಿಭಟನೆ ನಡೆಸಿದರು.

Vijaya Karnataka Web 17 Mar 2016, 5:17 am
ಶ್ರೀರಂಗಪಟ್ಟಣ: ‘‘ದಲಿತ ಜಾಗತಿ ಹಾಗೂ ಶೋಷಿತ ಬದುಕುಗಳಿಗೆ ಸಾಂವಿಧಾನಿಕ ಆತ್ಮಸ್ಥೆರ್ಯ’’ ಕುರಿತ ವಿಚಾರ ಸಂಕಿರಣ ಸ್ಥಗಿತಗೊಂಡ ಹಿನ್ನೆಲೆಯಲ್ಲಿ ದಸಂಸ ಮುಖಂಡರು ಸಮಾಜ ಕಲ್ಯಾಣ ಇಲಾಖೆ ಅಧಿಕಾರಿ ಹಾಗೂ ತಾಲೂಕು ಆಡಳಿತದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿ ಪ್ರತಿಭಟನೆ ನಡೆಸಿದರು.
Vijaya Karnataka Web
ವಿಚಾರ ಸಂಕಿರಣ ರದ್ದು: ದಸಂಸ ಪ್ರತಿಭಟನೆ

ಸಮಾಜ ಕಲ್ಯಾಣ ಇಲಾಖೆ ಹಾಗೂ ತಾಲೂಕು ಆಡಳಿತ ಪಟ್ಟಣದ ಅಂಬೇಡ್ಕರ್ ಭವನದಲ್ಲಿ ಬುಧವಾರ ವಿಚಾರ ಸಂಕಿರಣ ಏರ್ಪಡಿಸಿತ್ತು. ಬೆಳಗ್ಗೆ 10.30 ಕ್ಕೆ ಆರಂಭವಾಗಬೇಕಿದ್ದ ಕಾರ್ಯಕ್ರಮ 11.30 ಆದರೂ ಪ್ರಾರಂಭವಾಗಲಿಲ್ಲ. ಆಯೋಜಕರಾದ ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳು ಕಾರ‌್ಯಕ್ರಮಕ್ಕೆ ಹಾಜರಾಗಲಿಲ್ಲ. ಇದರಿಂದ ಕೋಪಗೊಂಡ ಮುಖಂಡರು ಭವನದ ಎದುರು ಪ್ರತಿಭಟನೆ ಕುಳಿತರು.
ಕಾರ್ಯಕ್ರಮ ಕುರಿತು ಸಮಾಜದ ಜನರಿಗೆ ಮಾಹಿತಿ ನೀಡಿಲ್ಲ. ಕಾಟಾಚಾರಕ್ಕೆ ಕಾರ್ಯಕ್ರಮ ಏರ್ಪಡಿಸಿರುವ ಅಧಿಕಾರಿಗಳು ಇತ್ತ ತಲೆ ಹಾಕಿಲ್ಲ. ತಹಸೀಲ್ದಾರ್ ಸ್ಥಳಕ್ಕೆ ಆಗಮಿಸಬೇಕು ಎಂದು ಪಟ್ಟು ಹಿಡಿದರು. ಕಾರ್ಯಕ್ರಮ ಉದ್ಘಾಟಿಸಲು ಆಗಮಿಸಿದ ಶಾಸಕ ಎ.ಬಿ.ರಮೇಶ ಬಂಡಿಸಿದ್ದೇಗೌಡ ಸ್ಥಳೀಯ ಅಧಿಕಾರಿಗಳಿಂದ ಮಾಹಿತಿ ಪಡೆದರು. ಅನಾರೋಗ್ಯ ನಿಮಿತ್ತ ಸಮಾಜ ಕಲ್ಯಾಣ ಇಲಾಖೆ ಅಧಿಕಾರಿ ಕಾರ್ಯಕ್ರಮಕ್ಕೆ ಬಂದಿಲ್ಲ. ಹಾಗಾಗಿ ಕಾರ್ಯಕ್ರಮ ಕುರಿತು ಪ್ರಚಾರ ಮಾಡಿಲ್ಲ ಎಂದು ಸ್ಥಳದಲ್ಲಿದ್ದ ಅಧಿಕಾರಿಗಳು ಶಾಸಕರಿಗೆ ತಿಳಿಸಿದರು. ರದ್ದು ಗೊಂಡ ಕಾರ್ಯಕ್ರಮವನ್ನು ಮುಂದಿನ ದಿನಗಳಲ್ಲಿ ನಡೆಸುವಂತೆ ಅಧಿಕಾರಿಗಳಿಗೆ ಶಾಸಕರು ಸೂಚಿಸಿ, ಪ್ರತಿಭಟನಾ ಕಾರರನ್ನು ಸಂತೈಸಿದರು.
ದಸಂಸ ಮುಖಂಡರಾದ ಮಹದೇವ ಸ್ವಾಮಿ, ಚಂದ್ರಶೇಖರ್, ಹೊನ್ನಯ್ಯ, ಮಹದೇವು ಮತ್ತಿತತರು ಹಾಜರಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ