ಆ್ಯಪ್ನಗರ

ಕಲಾಪ ಬಹಿಷ್ಕಾರ: ಮದ್ದೂರಲ್ಲಿ ವಕೀಲರ ಪ್ರತಿಭಟನೆ

ಭ್ರಷ್ಟಾಚಾರ ನಿಗ್ರಹದಳ ಸ್ಥಾಪನೆಗೆ ಮುಂದಾಗಿರುವ ರಾಜ್ಯ ಸರಕಾರದ ಕ್ರಮಖಂಡಿಸಿ ವಕೀಲರು ರಸ್ತೆತಡೆ ನಡೆಸಿದರು.

ವಿಕ ಸುದ್ದಿಲೋಕ 22 Mar 2016, 5:11 am
ಮದ್ದೂರು: ಭ್ರಷ್ಟಾಚಾರ ನಿಗ್ರಹದಳ ಸ್ಥಾಪನೆಗೆ ಮುಂದಾಗಿರುವ ರಾಜ್ಯ ಸರಕಾರದ ಕ್ರಮಖಂಡಿಸಿ ವಕೀಲರು ರಸ್ತೆತಡೆ ನಡೆಸಿದರು.
Vijaya Karnataka Web
ಕಲಾಪ ಬಹಿಷ್ಕಾರ: ಮದ್ದೂರಲ್ಲಿ ವಕೀಲರ ಪ್ರತಿಭಟನೆ

ವಕೀಲರ ಸಂಘದ ಪದಾಧಿಕಾರಿಗಳು ನ್ಯಾಯಾಲಯ ಕಲಾಪಳಿಂದ ದೂರ ಸರಿದು ಮೈಸೂರು-ಬೆಂಗಳೂರು ಹೆದ್ದಾರಿ ತಡೆ ನಡೆಸಿದರು. ಮುಖ್ಯಮಂತ್ರಿಗಳು, ಸರಕಾರದ ವಿರುದ್ಧ ಘೋಷಣೆ ಕೂಗಿದರು.
ಸರಕಾರ ಲೋಕಾಯುಕ್ತ ಸಂಸ್ಥೆಯನ್ನು ಮುಚ್ಚುವುದರ ಮೂಲಕ ಭ್ರಷ್ಟ ರಾಜಕಾರಣಿಗಳಿಗೆ ದಾರಿ ಮಾಡಿಕೊಡು ತ್ತಿದೆ. ಲೋಕಾಯುಕ್ತ ಸಂಸ್ಥೆಯನ್ನು ಉಳಿಸಿ ಪುನರ್ ಸ್ಥಾಪಿಸುವ ಮೂಲಕ ರಾಜ್ಯದಲ್ಲಿ ಭ್ರಷ್ಟಾಚಾರ ನಿರ್ಮೂಲನೆಗೆ ಮುಂದಾಗ ಬೇಕು ಎಂದು ಒತ್ತಾಯಿಸಿ ತಹಸೀಲ್ದಾರ್ ಮಂಜೇಗೌಡ ಅವರ ಮೂಲಕ ಸರಕಾ ರಕ್ಕೆ ಮನವಿ ಸಲ್ಲಿಸಿದರು.
ವಕೀಲರ ಸಂಘದ ಅಧ್ಯಕ್ಷ ಪುಟ್ಟಲಿಂಗೇಗೌಡ ಮಾತನಾಡಿ, ಇಡೀ ರಾಷ್ಟ್ರದಲ್ಲೇ ಉತ್ತಮವಾಗಿ ಕಾರ‌್ಯ ನಿರ್ವಹಿಸುವ ಮೂಲಕ ಭ್ರಷ್ಟಚಾರ ತಡೆಯುವಲ್ಲಿ ಪ್ರಮುಖ ಪಾತ್ರವಹಿಸಿ ರುವ ಲೋಕಾಯುಕ್ತ ಮುಚ್ಚುವ ಹುನ್ನಾರ ನಡೆಸಿರುವುದು ಖಂಡನೀಯ. ಎಸಿಬಿ ಹುಟ್ಟುಹಾಕಿ ರಾಜಕಾರಣಿಗಳ ರಕ್ಷಣೆಗೆ ರಾಜ್ಯ ಸರಕಾರ ನಿಂತಿರುವುದು ರಾಜ್ಯಕ್ಕೆ ಮಾರಕವಾಗಿದೆ. ಕೂಡಲೇ ಲೋಕಾಯುಕ್ತ ಸಂಸ್ಥೆಯನ್ನು ಪುನರ್ ಸ್ಥಾಪಿಸಿ ಭ್ರಷ್ಟಾಚಾರ ನಿಗ್ರಹದಳವನ್ನು ರದ್ದು ಮಾಡಿ ಎಂದು ಒತ್ತಾಯಿಸಿದರು. ಮಲ್ಲೇಶ್, ಶ್ರೀಧರ್, ಕೆ.ಸ್ವಾಮಿ, ದಯಾನಂದ, ರವಿಕುಮಾರ್, ಮಹೇಶ್, ಶಿವರಾಮ್, ರವಿ, ಯೋಗಾ ನಂದ ಇತರರು ಪಾಲ್ಗೊಂಡಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ