ಆ್ಯಪ್ನಗರ

​ ಹೊರಗುತ್ತಿಗೆ ನೌಕರರ ಪ್ರತಿಭಟನೆ

ಸರಕಾರಿ ಹಾಸ್ಟೆಲ್ ಮತ್ತು ವಸತಿ ಶಾಲೆಗಳಿಗೆ ಡಿ.ಗ್ರೂಪ್ ನೌಕರರ ನೇರ ನೇಮಕಾತಿ ವಿರೋಧಿಸಿ ಕರ್ನಾಟಕ ರಾಜ್ಯ ಸರಕಾರಿ ಹಾಸ್ಟೆಲ್ ಮತ್ತು ವಸತಿ ಶಾಲಾ ಹೊರ ಗುತ್ತಿಗೆ ನೌಕರರ ಸಂಘದ ಕಾರ‌್ಯಕರ್ತರು ನಗರದಲ್ಲಿ ಬುಧವಾರ ಪ್ರತಿಭಟನೆ ನಡೆಸಿದರು.

ವಿಕ ಸುದ್ದಿಲೋಕ 22 Jun 2017, 5:15 am
ಮಂಡ್ಯ: ಸರಕಾರಿ ಹಾಸ್ಟೆಲ್ ಮತ್ತು ವಸತಿ ಶಾಲೆಗಳಿಗೆ ಡಿ.ಗ್ರೂಪ್ ನೌಕರರ ನೇರ ನೇಮಕಾತಿ ವಿರೋಧಿಸಿ ಕರ್ನಾಟಕ ರಾಜ್ಯ ಸರಕಾರಿ ಹಾಸ್ಟೆಲ್ ಮತ್ತು ವಸತಿ ಶಾಲಾ ಹೊರ ಗುತ್ತಿಗೆ ನೌಕರರ ಸಂಘದ ಕಾರ‌್ಯಕರ್ತರು ನಗರದಲ್ಲಿ ಬುಧವಾರ ಪ್ರತಿಭಟನೆ ನಡೆಸಿದರು.
Vijaya Karnataka Web
​ ಹೊರಗುತ್ತಿಗೆ ನೌಕರರ ಪ್ರತಿಭಟನೆ


ನಗರದ ಜಿಲ್ಲಾಧಿಕಾರಿ ಕಚೇರಿ ಎದುರು ಸೇರಿದ ಪ್ರತಿಭಟನಾಕಾರರು, ಹತ್ತಾರು ವರ್ಷಗಳಿಂದ ಸಮಾಜ ಕಲ್ಯಾಣ ಇಲಾಖೆ ಮತ್ತು ಹಿಂದುಳಿದ ವರ್ಗಗಳ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಗಳಡಿಯಲ್ಲಿ ’ಡಿ’ ವರ್ಗದಲ್ಲಿ ಹೊರ ಗುತ್ತಿಗೆ ನೌಕರರಾಗಿ ಕೆಲಸ ಮಾಡುತ್ತಿದ್ದೇವೆ. ನಮ್ಮನೇ ಡಿ ದರ್ಜೆ ನೌಕರರನ್ನಾಗಿ ಮುಂದುವರೆಸದೇ ನೇರ ನೇಮಕಾತಿಗೆ ಅರ್ಜಿ ಕರೆದಿರುವುದು ಸರಿಯಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ನೇರ ನೇಮಕಾತಿ ಅರ್ಜಿಗಳ ಪರಿಶೀಲನೆಯನ್ನು ಕೂಡಲೇ ಕೈ ಬಿಡಬೇಕು. ಇಲ್ಲದಿದ್ದರೆ ಹತ್ತಾರು ವರ್ಷಗಳಿಂದ ದಿನಗೂಲಿ ಮತ್ತು ಹೊರಗುತ್ತಿಗೆ ನೌಕರರಾಗಿ ದುಡಿಯುತ್ತಿರುವ ನಾವು ಕೆಲಸ ಕಳೆದುಕೊಂಡು ಬೀದಿಪಾಲಾಗಬೇಕಾಗುತ್ತದೆ. ನೇರ ನೇಮಕಾತಿಯಿಂದ ಹೊರಗುತ್ತಿಗೆ ನೌಕರರ ಸೇವೆಗೆ ಯಾವುದೇ ರೀತಿಯ ತೊಂದರೆ ಆಗುವುದಿಲ್ಲ ಎಂಬುದನ್ನು ಸರಕಾರಿ ಆದೇಶದಲ್ಲಿ ಕಡ್ಡಾಯವಾಗಿ ಖಚಿತ ಪಡಿಸಬೇಕು. ಅಲ್ಲಿಯವರೆಗೆ ನೇರ ನೇಮಕಾತಿ ಅರ್ಜಿಗಳ ಪರಿಶೀಲನೆ ಪ್ರಕ್ರಿಯೆಯನ್ನು ನಡೆಸಬಾರದು ಎಂದು ಒತ್ತಾಯಿಸಿದರು.
ಸರಕಾರ ನಮ್ಮ ನ್ಯಾಯಯುತ ಬೇಡಿಕೆಗೆ ಸ್ಪಂದಿಸದಿದ್ದರೆ, ಹೋರಾಟದ ಸ್ವರೂಪ ಬೇರೆಯದೆ ಆಗುತ್ತದೆ ಎಂದು ಎಚ್ಚರಿಸಿದರು.

ಸಿಐಟಿಯು ಜಿಲ್ಲಾ ಪ್ರಧಾನ ಕಾರ‌್ಯದರ್ಶಿ ಸಿ.ಕುಮಾರಿ, ಸಂಚಾಲಕ ನಂಜುಂಡಸ್ವಾಮಿ, ಮಹೇಶ್, ಸಂತೋಷ್, ಮನು, ಲಕ್ಷ್ಮಿ, ಸರಸ್ವತಿ, ಗಿರಿಜಾ, ಕೃಷ್ಣಯ್ಯ, ತಾಯಮ್ಮ, ಭಾಗ್ಯಮ್ಮ, ಮಂಜುನಾಥ್, ನಾಗಪ್ಪ ಹಾಗೂ ಪಾಪಣ್ಣ ಮತ್ತಿತರರು ಹಾಜರಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ