ಆ್ಯಪ್ನಗರ

ಜಲದಾಹಕ್ಕೆ 3.5 ಕೋಟಿ ಅನುದಾನ

ಕುಡಿಯುವ ನೀರಿನ ಕಾಮಗಾರಿಗಾಗಿ ಪ್ರತಿ ವಿಧಾನಸಭಾ ಕ್ಷೇತ್ರಕ್ಕೆ ತಲಾ 50 ಲಕ್ಷ ರೂ.ನಂತೆ ಒಟ್ಟು 3.5 ಕೋಟಿ ರೂ. ಅನುದಾನ ಬಿಡುಗಡೆ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಎಂ.ಎನ್.ಅಜಯ್‌ನಾಗಭೂಷಣ್ ತಿಳಿಸಿದರು.

Vijaya Karnataka Web 27 Mar 2016, 5:10 am
ಮಂಡ್ಯ: ಕುಡಿಯುವ ನೀರಿನ ಕಾಮಗಾರಿಗಾಗಿ ಪ್ರತಿ ವಿಧಾನಸಭಾ ಕ್ಷೇತ್ರಕ್ಕೆ ತಲಾ 50 ಲಕ್ಷ ರೂ.ನಂತೆ ಒಟ್ಟು 3.5 ಕೋಟಿ ರೂ. ಅನುದಾನ ಬಿಡುಗಡೆ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಎಂ.ಎನ್.ಅಜಯ್‌ನಾಗಭೂಷಣ್ ತಿಳಿಸಿದರು.
Vijaya Karnataka Web  3 5
ಜಲದಾಹಕ್ಕೆ 3.5 ಕೋಟಿ ಅನುದಾನ

ಬಿಸಿಲಿನ ತಾಪ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಕುಡಿಯುವ ನೀರಿನ ಸ್ಥಿತಿಗತಿಗಳ ಬಗ್ಗೆ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾಧಿಕಾರಿ ಡಾ.ಎಂ.ಎನ್.ಅಜಯ್‌ನಾಗಭೂಷಣ್ ಅಧ್ಯಕ್ಷತೆ ಯಲ್ಲಿ ಶನಿವಾರ ಜನಪ್ರತಿನಿಧಿಗಳ ಹಾಗೂ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿ, ಪ್ರಸಕ್ತ ಸಾಲಿನ ಅನುದಾನವಲ್ಲದೆ, ಕಳೆದ ವರ್ಷದ ಅನುದಾನದಲ್ಲಿ ಜಿಪಂ ವತಿಯಿಂದ 7 ಕೋಟಿ ರೂ. ಬಿಡುಗಡೆ ಮಾಡಲಾಗಿದೆ. ಈ ಅನುದಾನ ಬಳಸಿಕೊಂಡು ಅಧಿಕಾರಿಗಳು ತ್ವರಿತವಾಗಿ ಕಾಮಗಾರಿಗಳನ್ನು ಕೈಗೆತ್ತಿಕೊಂಡು, 3 ದಿನದಲ್ಲಿ ಪೂರ್ಣಗೊಳಿಸಬೇಕೆಂದು ಸೂಚಿಸಿದರು.
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಕಾರ್ಯಪಾಲಕ ಎಂಜಿನಿಯರ್ ಚಂದ್ರಶೇಖರ್ ಮಾತನಾಡಿ, ಜಿಲ್ಲೆಯಲ್ಲಿ 85 ಹಳ್ಳಿಗಳಲ್ಲಿ ಸಮಸ್ಯೆ ಕಂಡು ಬಂದಿದೆ. ನಾಗಮಂಗಲ ತಾಲೂಕಿನ 21, ಮದ್ದೂರು ಮತ್ತು ಮಂಡ್ಯ ತಾಲೂಕುಗಳಲ್ಲಿ ತಲಾ 14, ಕೆ.ಆರ್.ಪೇಟೆಯಲ್ಲಿ 7, ಶ್ರೀರಂಗಪಟ್ಟಣದಲ್ಲಿ 17, ಪಾಂಡವಪುರ ಹಾಗೂ ಮಳವಳ್ಳಿ ತಾಲೂಕುಗಳಲ್ಲಿ ತಲಾ 6 ಗ್ರಾಮಗಳಲ್ಲಿ ಸಮಸ್ಯೆ ಎದುರಾಗಿದೆ ಎಂದು ಮಾಹಿತಿ ನೀಡಿದರು. ಪ್ರತಿನಿಧಿಗಳ ಅಸಮಾಧಾನ: ಕುಡಿಯುವ ನೀರಿನ ಸಮಸ್ಯೆ ಪರಿಹಾರ ವಿಚಾರವಾಗಿ ಅಧಿಕಾರಿಗಳ ನಿರ್ಲಕ್ಷ್ಯದ ಬಗ್ಗೆ ಜನಪ್ರತಿನಿಧಿಗಳು ತೀವ್ರ ಅಸಮಧಾನ ವ್ಯಕ್ತಪಡಿಸಿ. ತರಾಟೆಗೆ ತೆಗೆದುಕೊಂಡರು.
ಜಿಲ್ಲೆಯಲ್ಲಿ ಎಲ್ಲೂ ಕುಡಿಯುವ ನೀರಿನ ಸಮಸ್ಯೆಯೇ ಇಲ್ಲವೆಂದು ಅಧಿಕಾರಿಗಳು ಸಭೆಗಳಲ್ಲಿ ತಿಳಿಸುತ್ತಾರೆ. ಆದರೆ, ವಾಸ್ತವವಾಗಿ ಹಳ್ಳಿಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ದಿನೇ ದಿನೇ ಉಲ್ಬಣಿಸುತ್ತಿದೆ. ಇಂತಹ ಪರಿಸ್ಥಿತಿಗಳಲ್ಲಿ ಜನರಿಗೆ ಮುಖ ತೋರಿಸಲಾಗದ ಪರಿಸ್ಥಿತಿಯಲ್ಲಿ ನಾವಿದ್ದೇವೆ(ಜನಪ್ರತಿನಿಧಿಸಿದ್ದೇವೆ). ಜನರಿಗೆ ಏನು ಉತ್ತರ ಹೇಳೋದು ಎಂದು ಪ್ರಶ್ನಿಸಿದರು. ಸಂಸದ ಸಿ.ಎಸ್. ಪುಟ್ಟರಾಜು ಮಾತನಾಡಿ, ಜಿಲ್ಲೆಯಲ್ಲಿ ನೀರಿನ ಬವಣೆ ಹೆಚ್ಚಾಗುತ್ತಿದೆ. ಜನ ಕುಡಿಯುವ ನೀರಿಗಾಗಿ ನಮ್ಮನ್ನು ಪ್ರಶ್ನಿಸುತ್ತಿದ್ದಾರೆ. ನೀರಿನ ಸಮಸ್ಯೆಯ ದೂರುಗಳಿಗೆ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಅಧಿಕಾರಿಗಳು ಸರಿಯಾಗಿ ಸ್ಪಂದಿಸುತ್ತಿಲ್ಲವೇಕೆ ಎಂದು ಅಧಿಕಾರಿಗಳನ್ನು ಎಂದು ತರಾಟೆಗೆ ತೆಗೆದುಕೊಂಡರು.
ಕುಡಿಯುವ ನೀರು ಸರಬರಾಜಿಗೆ ಏನು ವ್ಯವಸ್ಥೆ ಮಾಡಿಕೊಳ್ಳಲಾಗಿದೆ. ಜಾನುವಾರುಗಳಿಗೆ ಮೇವು ಲಭ್ಯತೆ ಇದೆಯೇ? ಮುಂದಿನ ದಿನಗಳಲ್ಲಿ ಬರಬಹುದಾದ ಸಮಸ್ಯೆಗಳೇನು ಎಂಬುದರ ಬಗ್ಗೆ ಮಾಹಿತಿ ನೀಡಿದರೆ ಸರಕಾರದೊಂದಿಗೆ ಚರ್ಚಿಸಿ, ಅಗತ್ಯ ಅನುದಾನ ಬಿಡುಗಡೆಗೆ ಕ್ರಮ ವಹಿಸಲಾಗುವುದು. ಅಧಿಕಾರಿಗಳೇ ಏನು ಹೇಳದಿದ್ದರೆ ಜನರ ಸಮಸ್ಯೆ ಪರಿಹರಿಸುವುದಾದರೂ ಹೇಗೆಂದು ಕಿಡಿಕಾರಿದರು. ಶಾಸಕ ಎನ್.ಚಲುವರಾಯಸ್ವಾು ಮಾತನಾಡಿ, ಕೆಲವು ಕಡೆ ನೀರಿನ ಸಂಪನ್ಮೂಲ ಇದ್ದರೂ ವಿದ್ಯುತ್ ಸಂಪರ್ಕದ ಕೊರತೆಯಿಂದ ಇನ್ನಷ್ಟು ಸಮಸ್ಯೆ ಉಲ್ಬಣಿಸುತ್ತಿದೆ. ಕಚೇರಿ ಪ್ರಕ್ರಿಯೆಗಳಿಗಾಗಿ ವಿಳಂಬ ಮಾಡುವುದು ಬೇಡ. ಸೆಸ್ಕ್ ಅಧಿಕಾರಿಗಳು ಕುಡಿಯುವ ನೀರು ಯೋಜನೆಗಳಿಗೆ ತ್ವರಿತವಾಗಿ ವಿದ್ಯುತ್ ಸಂಪರ್ಕ ನೀಡಬೇಕು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ