ಆ್ಯಪ್ನಗರ

ಮಾ.5ರಿಂದ ದಲಿತ ಸಾಹಿತ್ಯ ಸಮ್ಮೇಳನ

ಕನ್ನಡ ಪುಸ್ತಕ ಪ್ರಾಧಿಕಾರ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ನಗರದಲ್ಲಿ ಮಾ.5ರಿಂದ ಎರಡು ದಿನ ನಡೆಯಲಿರುವ ದಲಿತ ಸಾಹಿತ್ಯ ಸಮ್ಮೇಳನ ಸಂಬಂಧ ನಗರದಲ್ಲಿ ಶುಕ್ರವಾರ ಪೂರ್ವಸಿದ್ಧತಾ ಸಭೆ ನಡೆಯಿತು.

ವಿಕ ಸುದ್ದಿಲೋಕ 27 Feb 2016, 5:15 am
ಮಂಡ್ಯ: ಕನ್ನಡ ಪುಸ್ತಕ ಪ್ರಾಧಿಕಾರ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ನಗರದಲ್ಲಿ ಮಾ.5ರಿಂದ ಎರಡು ದಿನ ನಡೆಯಲಿರುವ ದಲಿತ ಸಾಹಿತ್ಯ ಸಮ್ಮೇಳನ ಸಂಬಂಧ ನಗರದಲ್ಲಿ ಶುಕ್ರವಾರ ಪೂರ್ವಸಿದ್ಧತಾ ಸಭೆ ನಡೆಯಿತು.
Vijaya Karnataka Web  5
ಮಾ.5ರಿಂದ ದಲಿತ ಸಾಹಿತ್ಯ ಸಮ್ಮೇಳನ


ಜಿಲ್ಲಾಧಿಕಾರಿ ಡಾ.ಎಂ.ಎನ್.ಅಜಯ್‌ನಾಗಭೂಷಣ್ ಹಾಗೂ ಪುಸ್ತಕ ಪ್ರಾಧಿಕಾರದ ಅಧ್ಯಕ್ಷ ಡಾ.ಬಂಜಗೆರೆ ಜಯಪ್ರಕಾಶ್ ನೇತೃತ್ವದಲ್ಲಿ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಸಮ್ಮೇಳನದ ರೂಪುರೇಷೆ ಕುರಿತು ವಿಸ್ತೃತ ಚರ್ಚೆ ನಡೆಸಲಾಯಿತು. ಸಮ್ಮೇಳನ ಉದ್ಘಾಟನೆಗಾಗಿ ಜಿಲ್ಲೆಯ ಹಿರಿಯ ಸಾಹಿತಿ, ನಿವೃತ್ತ ಪ್ರಾಂಶುಪಾಲ ಪ್ರೊ.ಹುಲ್ಕೆರೆ ಮಹದೇವು ಅವರನ್ನು ಆಹ್ವಾನಿಸಲು ನಿರ್ಧರಿಸಲಾಯಿತು.

ಅಧ್ಯಕ್ಷತೆ ವಹಿಸಲು ಜಿಲ್ಲಾ ಉಸ್ತುವಾರಿ ಸಚಿವ ಅಂಬರೀಶ್ ಸೇರಿದಂತೆ ನಾನಾ ಗಣ್ಯರುಗಳನ್ನು ಆಹ್ವಾನಿಸಲು ತೀರ್ಮಾನಿಸಲಾಯಿತು. ಎರಡು ದಿನಗಳ ಸಮ್ಮೇಳನದಲ್ಲಿ ಕವಿಗೋಷ್ಠಿ ಹಾಗೂ ದಲಿತ ಸಮುದಾಯದ ದಿಕ್ಕು, ದೆಸೆ, ಉನ್ನತ ಶಿಕ್ಷಣ ಕ್ಷೇತ್ರದಲ್ಲಿ ಇರುವ ಸವಾಲುಗಳು, ದಲಿತ ಲೇಖಕರ ಮುಂದಿರುವ ಜವಾಬ್ದಾರಿ, ಮೂಢನಂಬಿಕೆ ಹಾಗೂ ದಲಿತರು ಹೀಗೆ ಹತ್ತು ಹಲವು ವಿಚಾರ ಸಂಕಿರಣಗಳನ್ನು ಸಂಘಟಿಸಲು ನಿಧರಿಸಲಾಯಿತು.

ವಿಚಾರ ಸಂಕಿರಣಗಳಲ್ಲಿ ನಾಡಿನ ಹೆಸರಾಂತ ತಜ್ಞರು, ವಿದ್ವಾಂಸರು ವಿಷಯ ಮಂಡನೆ ಮಾಡಿಸಲಿದ್ದಾರೆ ಎಂದು ಪುಸ್ತಕ ಪ್ರಾಧಿಕಾರದ ಅಧ್ಯಕ್ಷ ಡಾ.ಬಂಜಗೆರೆ ಜಯಪ್ರಕಾಶ್ ತಿಳಿಸಿದರು. ಸಭೆಯಲ್ಲಿ ಪುಸ್ತಕ ಪ್ರಾಧಿಕಾರದ ಆಡಳಿತಾಧಿಕಾರಿ ಮಹದೇವಯ್ಯ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಚೆನ್ನಪ್ಪ, ದಲಿತ ಮುಖಂಡರಾದ ಎಂ.ಬಿ.ಶ್ರೀನಿವಾಸ್, ಗುಂಡಾಪುರ ನಂಜುಂಡಸ್ವಾಮಿ, ಸೋಮಶೇಖರ್ ಕೆರಗೋಡು, ರಾಜಣ್ಣ, ವೆಂಕಟಗಿರಿಯಯ್ಯ, ಪ್ರೊ.ಹುಲ್ಕೆರೆ ಮಹದೇವು, ನಾಗರಾಜ ಅಂಬೇಡ್ಕರ್, ಡಿ.ದೇವರಾಜ ಕೊಪ್ಪ, ಕ್ಯಾತನಹಳ್ಳಿ ಚಂದ್ರು, ಹಾರೋಹಳ್ಳಿ ಪ್ರಕಾಶ್, ಸೂನಗಹಳ್ಳಿ ಮರಿಯಯ್ಯ, ಗೋಪಾಲ್, ದಿನೇಶ್, ಕಪರನಕೊಪ್ಪಲು ರವಿ, ಸುಂಡಹಳ್ಳಿ ಮಂಜುನಾಥ್ ಇತರರು ಹಾಜರಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ