ಆ್ಯಪ್ನಗರ

ಶ್ರೀರಂಗಪಟ್ಟಣ ದಸರೆಗೆ 2 ಕೋಟಿ ರೂ. ಅನುದಾನದ ಭರವಸೆ

ದಸರೆಯ ಮೂಲ ನೆಲೆಯಾದ ಶ್ರೀರಂಗಪಟ್ಟಣ ದಸರಾ ಉತ್ಸವಕ್ಕ 2 ಕೋಟಿ ರೂ. ಅನುದಾನ ನೀಡಲು ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಸಮ್ಮತಿಸಿದ್ದಾರೆ. ಶ್ರೀರಂಗಪಟ್ಟಣದಲ್ಲಿಯೂ ಕೂಡ ಕಳೆದ ವರ್ಷದಂತೆ ಈ ಬಾರಿಯೂ ವಿನೂತನವಾಗಿ ದಸರಾ ಉತ್ಸವ ಆಚರಣೆ ಮಾಡಲಾಗುವುದು ಎಂದು ಶಾಸಕ ರವೀಂದ್ರ ಶ್ರೀಕಂಠಯ್ಯ ಹೇಳಿದರು.

Vijaya Karnataka 17 Aug 2019, 5:00 am
ಶ್ರೀರಂಗಪಟ್ಟಣ : ದಸರೆಯ ಮೂಲ ನೆಲೆಯಾದ ಶ್ರೀರಂಗಪಟ್ಟಣ ದಸರಾ ಉತ್ಸವಕ್ಕ 2 ಕೋಟಿ ರೂ. ಅನುದಾನ ನೀಡಲು ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಸಮ್ಮತಿಸಿದ್ದಾರೆ. ಶ್ರೀರಂಗಪಟ್ಟಣದಲ್ಲಿಯೂ ಕೂಡ ಕಳೆದ ವರ್ಷದಂತೆ ಈ ಬಾರಿಯೂ ವಿನೂತನವಾಗಿ ದಸರಾ ಉತ್ಸವ ಆಚರಣೆ ಮಾಡಲಾಗುವುದು ಎಂದು ಶಾಸಕ ರವೀಂದ್ರ ಶ್ರೀಕಂಠಯ್ಯ ಹೇಳಿದರು.
Vijaya Karnataka Web 2 crores to srirangapatna dasara the promise of cm
ಶ್ರೀರಂಗಪಟ್ಟಣ ದಸರೆಗೆ 2 ಕೋಟಿ ರೂ. ಅನುದಾನದ ಭರವಸೆ


ಪಟ್ಟಣದ ಪಶು ಮತ್ತು ವೈದ್ಯಕೀಯ ಆಸ್ಪತ್ರೆ ಆವರಣದಲ್ಲಿ ಪಶು ಇಲಾಖೆ ವತಿಯಿಂದ ರಿಯಾಯಿತಿ ದರದಲ್ಲಿ ಫಲಾನುಭವಿಗಳಿಗೆ ಜಾನುವಾರುಗಳ ಮೇವು ಕತ್ತರಿಸುವ ಯಂತ್ರಗಳನ್ನು ಶುಕ್ರವಾರ ವಿತರಣೆ ಮಾಡಿ ಮಾತನಾಡಿದರು.

ಮುಖ್ಯಮಂತ್ರಿಗಳ ಅಧ್ಯಕ್ಷ ತೆಯಲ್ಲಿ ಮೈಸೂರು ದಸರಾ ಆಚರಣೆ ಸಂಬಂಧ ನಡೆದ ಸಭೆಯಲ್ಲಿ ಶ್ರೀರಂಗಪಟ್ಟಣ ದಸರೆಯ ಮೂಲ ನೆಲೆ, ಇಲ್ಲಿ ಕಳೆದ ವರ್ಷ ಕೂಡ ವಿಜೃಂಭಣೆಯಿಂದ ನಾಡ ಹಬ್ಬ ದಸರಾ ಆಚರಣೆ ನಡೆದಿದೆ. ಸ್ವತಃ ಮುಖ್ಯಮಂತ್ರಿಗಳು ದಸರಾ ಆಚರಣೆಗೆ ಆಗಮಿಸಿದ್ದರೂ ಈ ವರ್ಷವೂ ಅದೇ ಮಾದರಿಯಲ್ಲಿ ದಸರಾ ಆಚರಣೆಯಾಗಬೇಕು. ಅದಕ್ಕೆ ಅಗತ್ಯ ಅನುದಾನ ನೀಡಬೇಕು ಎಂದು ಮನವಿ ಮಾಡಿದ್ದೇನೆ. ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ 2 ಕೋಟಿ ರೂ. ಅನುದಾನ ನೀಡುವುದಾಗಿ ಭರವಸೆ ನೀಡಿದ್ದಾರೆ. ದಸರಾ ಉತ್ಸವಕ್ಕೆ ಮೂರು ಆನೆಗಳನ್ನು ಕರೆತರಲು ಜಿಲ್ಲಾಧಿಕಾರಿಗಳೊಂದಿಗೆ ಚರ್ಚಿಸುತ್ತೇನೆ. ಸಾರ್ವಜನಿಕರು, ಸಾಂಸ್ಕೃತಿಕ ರಾಯಭಾರಿಗಳ ಜತೆ ದಸರಾ ಉತ್ಸವ ಆಚರಣೆ ಸಂಬಂಧ ಚರ್ಚಿಸಿ ಹೊಸತನದೊಂದಿಗೆ ವಿಶೇಷವಾಗಿ ಶ್ರೀರಂಗಪಟ್ಟಣದಲ್ಲಿ ದಸರಾ ಆಚರಣೆ ಮಾಡಲಾಗುವುದು. ಶೀಘ್ರದಲ್ಲಿಯೇ ದಸರಾ ಉತ್ಸವ ಆಚರಣೆ ದಿನಾಂಕವನ್ನು ಗೊತ್ತುಪಡಿಸಲಾಗುವುದು ಎಂದು ಹೇಳಿದರು.

ಶ್ರೀರಂಗಪಟ್ಟಣ ಪಶುವೈದ್ಯಕೀಯ ಆಸ್ಪತ್ರೆ ಕಟ್ಟಡ ನಿರ್ಮಾಣಕ್ಕೆ ಸರಕಾರದಿಂದ 30 ಲಕ್ಷ ರೂ. ಅನುದಾನ ಬಿಡುಗಡೆಯಾಗಿದೆ. ಶೀಘ್ರದಲ್ಲಿ ನೂತನ ಪಶು ವೈದ್ಯಕೀಯ ಆಸ್ಪತ್ರೆ ಕಟ್ಟಡ ಕಾಮಗಾರಿ ಕೈಗೆತ್ತಿಕೊಳ್ಳಲಾಗುವುದು ಎಂದು ಹೇಳಿದರು.

ಫೋನ್‌ ಕದ್ದಾಲಿಕೆ ಸಂಬಂಧ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು ಫೋನ್‌ ಕದ್ದಾಲಿಕೆ ನಡೆಯುತ್ತಿದೆ ಎಂದು ಹೇಳುತ್ತಿದ್ದಾಗ ಯಾರು ಪ್ರಶ್ನೆ ಮಾಡಲಿಲ್ಲ. ನನಗೆ ಗೊತ್ತಿರುವಂತೆ ಅಂತಹ ಯಾವುದೇ ಸಂದರ್ಭಗಳನ್ನು ನಾವು ನೋಡಿಲ್ಲ. ಸರಕಾರ ಬದಲಾದ ಮೇಲೆ ಈಗ ಮಾತನಾಡುವುದು ಸರಿಯಲ್ಲ ಎಂಬುದು ನನ್ನ ಅಭಿಪ್ರಾಯ. ಅಂತಹ ಪ್ರಕರಣ ನಡೆದಿಲ್ಲ ನಾವು ಕಂಡಿಲ್ಲ ಎಂದು ಹೇಳಿದರು.

ತಾಪಂ ಸದಸ್ಯ ರಾಮಕೃಷ್ಣ, ಪಶು ವೈದ್ಯಕೀಯ ಇಲಾಖೆ ಸಹಾಯಕ ನಿರ್ದೇಶಕ ಡಾ.ಮೋಹನ್‌ಕುಮಾರ್‌ ಇತರರು ಹಾಜರಿದ್ದರು.


ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ