ಆ್ಯಪ್ನಗರ

ಬೇಬಿ ಬೆಟ್ಟದಲ್ಲಿ 22 ಸಿ ಫಾರಂ, 30 ಕ್ವಾರಿ ರದ್ದು

ಪಾಂಡವಪುರ ತಾಲೂಕು ಬೇಬಿಬೆಟ್ಟ ಕಾವಲಿನಲ್ಲಿ ಅನಧಿಕೃತ ಗಣಿಗಾರಿಕೆ ನಡೆಯುತ್ತಿರುವುದರಿಂದ ಅನುಮತಿ ಕೊಟ್ಟಂತಹ 22 ಸಿ ಫಾರಂ, 30 ಕ್ರಷರ್‌ ಹಾಗೂ 30 ಕ್ವಾರಿಗಳನ್ನು ರದ್ದುಪಡಿಸಲಾಗಿದೆ ಎಂದು ಮಂಡ್ಯ ಜಿಲ್ಲಾಧಿಕಾರಿ ಡಾ.ಎಂ.ವಿ. ವೆಂಕಟೇಶ್‌ ತಿಳಿಸಿದರು.

Vijaya Karnataka 11 Jan 2020, 1:08 am
ಮಂಡ್ಯ: ಪಾಂಡವಪುರ ತಾಲೂಕು ಬೇಬಿಬೆಟ್ಟ ಕಾವಲಿನಲ್ಲಿ ಅನಧಿಕೃತ ಗಣಿಗಾರಿಕೆ ನಡೆಯುತ್ತಿರುವುದರಿಂದ ಅನುಮತಿ ಕೊಟ್ಟಂತಹ 22 ಸಿ ಫಾರಂ, 30 ಕ್ರಷರ್‌ ಹಾಗೂ 30 ಕ್ವಾರಿಗಳನ್ನು ರದ್ದುಪಡಿಸಲಾಗಿದೆ ಎಂದು ಮಂಡ್ಯ ಜಿಲ್ಲಾಧಿಕಾರಿ ಡಾ.ಎಂ.ವಿ. ವೆಂಕಟೇಶ್‌ ತಿಳಿಸಿದರು.
Vijaya Karnataka Web Ganigarike bebi betta -1


ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ನಡೆದ ಸಭೆಯಲ್ಲಿ ಅಕ್ರಮ ಗಣಿಗಾರಿಕೆ ಹಾಗೂ ಜಲ್ಲಿಕಲ್ಲುಪುಡಿ ಘಟಕಗಳ ನಿಯಂತ್ರಣ ಸಭೆಯ ಅಧ್ಯಕ್ಷ ತೆ ವಹಿಸಿ ಮಾತನಾಡಿದರು.

ಪಾಂಡವಪುರ ತಾಲೂಕು ಬೇಬಿ ಬೆಟ್ಟ ಗ್ರಾಮದ ವ್ಯಾಪ್ತಿಯ ಅನಧಿಕೃತ ಗಣಿಗಾರಿಕೆ ಹಾಗೂ ಸಾಗಣೆ ಸಂಬಂಧಿಸಿದಂತೆ ಗಣಿಗಾರಿಕೆ ನಿಯಂತ್ರಿಸಲು ಶಾಶ್ವತ ಚೆಕ್‌ಪೋಸ್ಟ್‌ಗಳನ್ನು ನಿರ್ಮಾಣ ಮಾಡಲಾಗಿದ್ದು, ಗಣಿಗಾರಿಕೆ ಹಾಗೂ ಸಾಗಣೆಯನ್ನು ನಿಯಂತ್ರಿಸಲು ಪರಿಶೀಲನೆಗೆಂದು ಜಿಲ್ಲಾ ಮಟ್ಟದ ಅಧಿಕಾರಿಗಳನ್ನು ನೋಡೆಲ್‌ ಅಧಿಕಾರಿಗಳನ್ನಾಗಿ ನೇಮಕ ಮಾಡಲಾಗಿದೆ ಎಂದು ತಿಳಿಸಿದರು.

ಸಭೆಯಲ್ಲಿ ಪಾಂಡವಪುರ ಉಪ ವಿಭಾಗಧಿಕಾರಿ ಶೈಲಜಾ, ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಅಧಿಕಾರಿ ಪುಷ್ಪಾ ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಜರಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ