ಆ್ಯಪ್ನಗರ

ಪುರಸಭೆ ಅಧಿಕಾರಿಗಳ ವಿರುದ್ಧ ಏಕಾಂಗಿ ಧರಣಿ

ಕೇಂದ್ರ ಸ್ಥಾನದಲ್ಲಿ ವಾಸ್ತವ್ಯವಿರದ ಪುರಸಭೆ ಅಧಿಕಾರಿಗಳ ವಿರುದ್ಧ ಸದಸ್ಯ ಅಜಯ್.ಪಿ.ಗೌಡ ಅಹೋರಾತ್ರಿ ಏಕಾಂಗಿ ಪ್ರತಿಭಟನೆ ನಡೆಸಿದರು.

Vijaya Karnataka 14 Oct 2017, 5:15 am
ಮದ್ದೂರು: ಕೇಂದ್ರ ಸ್ಥಾನದಲ್ಲಿ ವಾಸ್ತವ್ಯವಿರದ ಪುರಸಭೆ ಅಧಿಕಾರಿಗಳ ವಿರುದ್ಧ ಸದಸ್ಯ ಅಜಯ್.ಪಿ.ಗೌಡ ಅಹೋರಾತ್ರಿ ಏಕಾಂಗಿ ಪ್ರತಿಭಟನೆ ನಡೆಸಿದರು.
Vijaya Karnataka Web a solitary protest against municipal authorities
ಪುರಸಭೆ ಅಧಿಕಾರಿಗಳ ವಿರುದ್ಧ ಏಕಾಂಗಿ ಧರಣಿ


ಪಟ್ಟಣದ ಪುರಸಭೆ ಕಚೇರಿ ಎದುರು ಅಹೋರಾತ್ರಿ ಧರಣಿ ನಡೆಸಿ ಅಧಿಕಾರಿಗಳ ವಿರುದ್ಧ ತಮ್ಮ ಆಕ್ರೋಶ ವ್ಯಕ್ತಪಡಿಸಿದರು.

ಪುರಸಭೆ ಮುಖ್ಯಾಧಿಕಾರಿ ಎಂ. ಕುಮಾರ್ ಸೇರಿದಂತೆ ಇತರೆ ಅಧಿಕಾರಿಗಳು ಕರ್ತವ್ಯ ನಿರತ ಕೇಂದ್ರ ಸ್ಥಾನದಲ್ಲಿ ಹಾಜರಿರದೆ ನಿರ್ಲಕ್ಷ್ಯ ವಹಿಸಿದ್ದು, ಪ್ರತಿನಿತ್ಯ ದೂರದ ಊರುಗಳಿಂದ ಬಂದು ಕರ್ತವ್ಯ ನಿರ್ವಹಿಸಿ ನಿರ್ಗಮಿಸುತ್ತಿದ್ದಾರೆ ಎಂದು ಆರೋಪಿಸಿ ದರು.

ಸ್ಥಳೀಯ ಸಾರ್ವಜನಿಕರು ಪುರಸಭೆ ಕಚೇರಿಗೆ ಅಲೆದಾಡುತ್ತಿದ್ದು ಮೂಲ ಸಮಸ್ಯೆಗಳಿಗೆ ಸ್ಪಂದಿಸದೇ ಕೆಲ ಅಧಿಕಾರಿಗಳು ನಿರ್ಲಕ್ಷ್ಯ ವಹಿಸುತ್ತಿದ್ದಾರೆ. ಚುನಾಯಿತ ಪ್ರತಿನಿಧಿಗಳ ಮಾತಿಗೂ ಅಧಿಕಾರಿಗಳು ಯಾವುದೇ ಗೌರವ ನೀಡುತ್ತಿಲ್ಲ ಎಂದು ದೂರಿದರು. ಕೂಡಲೇ ಪುರಸಭೆ ಮುಖ್ಯಾಧಿಕಾರಿ ಕುಮಾರ್ ಅವರನ್ನು ವರ್ಗಾವಣೆ ಮಾಡುವಂತೆ ಒತ್ತಾಯಿಸಿದರು.

ಪ್ರತಿಭಟನಾ ಸ್ಥಳಕ್ಕೆ ಆಗಮಿಸಿ ಮುಖ್ಯಾಧಿಕಾರಿ ಎಂ. ಕುಮಾರ್ ಮಾತನಾಡಿ, ಪುರಸಭೆ ವ್ಯಾಪ್ತಿಯ ಸ್ಥಳೀಯ ಸಾರ್ವಜನಿಕರ ಕೆಲಸ ಕಾರ್ಯಗಳನ್ನು ವಿಳಂಬ ಮಾಡದೆ ತ್ವರಿತಗತಿಯಲ್ಲಿ ಮಾಡಲು ಅಧಿಕಾರಿಗಳಿಗೆ ಸೂಚಿಸುವುದಾಗಿ ಮತ್ತು ಮುಂದಿನ ದಿನಗಳಲ್ಲಿ ಕೇಂದ್ರ ಸ್ಥಾನದಲ್ಲೇ ವಾಸ್ತವ್ಯವಿರುವುದಾಗಿ ತಿಳಿಸಿದ ಬಳಿಕ ಪ್ರತಿಭಟನೆ ವಾಪಸ್ ಪಡೆದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ