ಆ್ಯಪ್ನಗರ

ಭೀಕರ ರಸ್ತೆ ಅಪಘಾತ ಸಂಭವಿಸಿ ಯುವಕ ಸಾವು; ಮತ್ತೊಬ್ಬ ಗಂಭೀರ

ಮೃತವ್ಯಕ್ತಿ ಮತ್ತು ಗಾಯಾಳು ಯುವಕ ತಮ್ಮ ಬೈಕ್‌ನಲ್ಲಿ ಮದ್ದೂರು ತಾಲೂಕು ಹೊಟ್ಟೇಗೌಡನದೊಡ್ಡಿ ಗ್ರಾಮದಿಂದ ಸ್ವಗ್ರಾಮಕ್ಕೆ ವಾಪಸಾಗುತ್ತಿದ್ದರು. ಈ ವೇಳೆ ರುದ್ರಾಕ್ಷಿಪುರ ಗೇಟ್‌ ಸಮೀಪದ ಚರ್ಚ್ ಬಳಿ ರಾತ್ರಿ 9 ಗಂಟೆ ಸುಮಾರಿಗೆ ಬುಲೋರೊ ಗೂಡ್ಸ್ ವಾಹನ ಬಂದು ಹಿಂಬದಿಯಿಂದ ಡಿಕ್ಕಿ ಹೊಡೆದಿದೆ.

Vijaya Karnataka Web 8 Jul 2020, 1:09 pm
ಮಂಡ್ಯ: ಮಂಗಳವಾರ ರಾತ್ರಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಒಬ್ಬರು ಮೃತಪಟ್ಟು ಮತ್ತೊಬ್ಬ ಗಂಭೀರವಾಗಿ ಗಾಯಗೊಂಡಿರುವ ಘಟನೆ ಮದ್ದೂರು ತಾಲ್ಲೂಕು ರುದ್ರಾಕ್ಷಿಪುರ ಗೇಟ್ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ನಡೆದಿದೆ.
Vijaya Karnataka Web Road Accident


ಮಂಡ್ಯ ಸಂಸದೆ ಸುಮಲತಾ ಅಂಬರೀಶ್‌ಗೂ ಕೊರೊನಾ ಪಾಸಿಟಿವ್‌!

ವೈದ್ಯನಾಥಪುರ ಗ್ರಾಮದ ಗಂಗಪ್ಪ ಅವರ ಮಗ ವಿ.ಜಿ.ಸಚಿನ್ (23) ಮೃತ ಯುವಕನಾಗಿದ್ದು ಈತ ಬೈಕ್ ಚಲಾಯಿಸುತ್ತಿದ್ದ. ಗಂಭೀರವಾಗಿ ಗಾಯಗೊಂಡಿರುವ ಯುವಕ ನಂಜುಂಡ ಅವರ ಪುತ್ರ ವಿ. ಎನ್.ಅಭಿಷೇಕ್(24) ಎಂದು ಗುರುತಿಸಲಾಗಿದ್ದು, ಈತನನ್ನು ಬೆಂಗಳೂರಿನ ನಿಮ್ಹನ್ಸ್ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿದೆ.

ಕಾಮೇಗೌಡರ ಸಾಧನೆ ಇಡೀ ದೇಶಕ್ಕೆ ಮಾದರಿಯಾಗಬೇಕು - ಮಂಡ್ಯ ಜಿಲ್ಲಾಧಿಕಾರಿ

ಮೃತವ್ಯಕ್ತಿ ಮತ್ತು ಗಾಯಾಳು ಯುವಕ ತಮ್ಮ ಬೈಕ್‌ನಲ್ಲಿ ಮದ್ದೂರು ತಾಲೂಕು ಹೊಟ್ಟೇಗೌಡನದೊಡ್ಡಿ ಗ್ರಾಮದಿಂದ ಸ್ವಗ್ರಾಮಕ್ಕೆ ವಾಪಸಾಗುತ್ತಿದ್ದರು. ಈ ವೇಳೆ ರುದ್ರಾಕ್ಷಿಪುರ ಗೇಟ್‌ ಸಮೀಪದ ಚರ್ಚ್ ಬಳಿ ರಾತ್ರಿ 9 ಗಂಟೆ ಸುಮಾರಿಗೆ ಬುಲೋರೊ ಗೂಡ್ಸ್ ವಾಹನ ಬಂದು ಹಿಂಬದಿಯಿಂದ ಡಿಕ್ಕಿ ಹೊಡೆದಿದೆ.

ಸಚಿವರೊಬ್ಬರಿಂದ ದ್ವೇಷದ ರಾಜಕೀಯ, ಸಿಎಂ ಮನೆ ಮುಂದೆ ಧರಣಿ ನಡೆಸುವುದಾಗಿ ಎಚ್‌ಡಿಡಿ

ಅಪಘಾತದ ತೀವ್ರತೆಗೆ ಇಬ್ಬರು ಯುವಕರು ರಸ್ತೆಗೆ ಬಿದ್ದಿದ್ದು ತೀವ್ರ ಗಾಯಗೊಂಡ ಇಬ್ಬರನ್ನು ಮದ್ದೂರಿನ ತಾಲೂಕು ಆಸ್ಪತ್ರೆಗೆ ಕರೆತರಲಾಗಿದೆ. ನಂತರ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ನಿಮ್ಹಾನ್ಸ್ ಆಸ್ಪತ್ರೆಗೆ ಕರೆದೊಯ್ಯಲಾಗಿದ್ದು, ಆದರೆ ಮಾರ್ಗಮಧ್ಯೆಯೇ ಗಂಭೀರ ಗಾಯಗೊಂಡಿದ್ದ ಸಚಿನ್ ಕೊನೆಯುಸಿರೆಳೆದಿದ್ದಾನೆ.

ಘಟನೆ ಸಂಬಂಧ ಮೃತನ ಸಂಬಂದಿ ಎಂ.ಕೆ.ಸಾಗರ್ ನೀಡಿದ ದೂರಿನ ಮೇರೆಗೆ ಮದ್ದೂರು ಠಾಣೆಯ ಪೋಲಿಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ